AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಪ್ರಕರಣ: ರಾಜಸ್ಥಾನದ 31 ಕಡೆ ಎನ್​ಐಎ ದಾಳಿ

ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಮತ್ತು ರಾಜಸ್ಥಾನದ 31 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸುತ್ತಿದೆ. ಗೃಹ ಸಚಿವಾಲಯ (ಎಂಎಚ್‌ಎ) ಇತ್ತೀಚೆಗೆ ಹತ್ಯೆಯ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿತ್ತು . ಕೊಲೆಯಲ್ಲಿ ಹೈಪ್ರೊಫೈಲ್ ಗ್ಯಾಂಗ್​ಸ್ಟರ್ ಕೈವಾಡವನ್ನು ಪರಿಗಣಿಸಿ ತನಿಖಾ ಸಂಸ್ಥೆಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಯಿತು.

ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಪ್ರಕರಣ: ರಾಜಸ್ಥಾನದ 31 ಕಡೆ ಎನ್​ಐಎ ದಾಳಿ
ಸುಖದೇವ್
ನಯನಾ ರಾಜೀವ್
|

Updated on: Jan 03, 2024 | 8:26 AM

Share

ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ(Sukdev Singh Gogamedi) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಮತ್ತು ರಾಜಸ್ಥಾನದ 31 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸುತ್ತಿದೆ. ಗೃಹ ಸಚಿವಾಲಯ (ಎಂಎಚ್‌ಎ) ಇತ್ತೀಚೆಗೆ ಹತ್ಯೆಯ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿತ್ತು . ಕೊಲೆಯಲ್ಲಿ ಹೈಪ್ರೊಫೈಲ್ ಗ್ಯಾಂಗ್​ಸ್ಟರ್ ಕೈವಾಡವನ್ನು ಪರಿಗಣಿಸಿ ತನಿಖಾ ಸಂಸ್ಥೆಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಯಿತು.

ಪ್ರಕರಣವನ್ನು ಕೈಗೆತ್ತಿಕೊಂಡ ನಂತರ ಎನ್‌ಐಎ ಶಂಕಿತರನ್ನು ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ವೇಳೆ ಸಿಕ್ಕ ಮಾಹಿತಿ ಮೇರೆಗೆ ದಾಳಿ ನಡೆಸಲಾಗುತ್ತಿದೆ. ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಡಿಸೆಂಬರ್ 5 ರಂದು ಜೈಪುರದ ಅವರ ಮನೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು .

ಘಟನೆಯ ನಂತರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಗ್ಯಾಂಗ್​ಸ್ಟರ್ ರೋಹಿತ್ ಗೋಡಾರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ಗೊಗಮೆಡಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದ. ಕೊಲೆಯಾಗುವ ಕೆಲವು ತಿಂಗಳ ಹಿಂದೆ ರೋಹಿತ್ ಗೋದಾರಾ ಎಂಬಾತ ಸುಖದೇವ್ ಸಿಂಗ್ ಗೊಗಮೆಡಿಗೆ ದುಬೈ ಸಂಖ್ಯೆಯಿಂದ ಬೆದರಿಕೆ ಕರೆ ಮಾಡಿದ್ದ.

ಮತ್ತಷ್ಟು ಓದಿ: ಜೈಪುರದಲ್ಲಿ ಹಾಡಹಗಲೇ ಗುಂಡಿಕ್ಕಿ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್​ ಹತ್ಯೆ

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯಲ್ಲಿ ಭಾಗಿಯಾಗಿರುವ ಇಬ್ಬರು ಶೂಟರ್‌ಗಳು ಮತ್ತು ಒಬ್ಬ ಸಹಚರನನ್ನು ಡಿಸೆಂಬರ್ 10 ರಂದು ದೆಹಲಿ ಅಪರಾಧ ವಿಭಾಗ ಮತ್ತು ರಾಜಸ್ಥಾನ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಚಂಡೀಗಢದಲ್ಲಿ ಬಂಧಿಸಿದ್ದರು.

ಸುಖದೇವ್ ಸಿಂಗ್ ಗೊಗಮೆಡಿ ಅವರು ರಾಷ್ಟ್ರೀಯ ಕರ್ಣಿ ಸೇನೆಯೊಂದಿಗೆ ಬಹಳ ಹಿಂದಿನಿಂದಲೂ ಸಂಬಂಧ ಹೊಂದಿದ್ದಾರೆ. ನಂತರ ಇವರೇ ಈ ಸಂಘಟನೆಯಿಂದ ದೂರವಾಗಿ ಪ್ರತ್ಯೇಕ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯನ್ನು ಕಟ್ಟಿದ್ದಾರೆ. ಪದ್ಮಾವತ್ ಸಿನಿಮಾ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಇವರ ಹೆಸರು ಕೇಳಿ ಬರುತ್ತಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ