AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್​ ಯಾತ್ರಾರ್ಥಿಗಳಿಗೆ ಶುಭ ಸಮಾಚಾರ; ಕರ್ತಾರ್​ಪುರ ಕಾರಿಡಾರ್​ನ್ನು ನಾಳೆಯಿಂದ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ

ಪಂಜಾಬ್​​ನ ಗುರುದಾಸ್​​ಪುರದಲ್ಲಿರುವ ದೇರಾ ಬಾಬಾ ನಾನಕ್​ ಮತ್ತು ಪಾಕಿಸ್ತಾನದ ಕರ್ತಾರ್​ಪುರ್​​ನಲ್ಲಿರುವ ದರ್ಬಾರ್​ ಸಾಹೀಬ್​​ ಗುರುದ್ವಾರಗಳನ್ನು ಸಂಪರ್ಕಿರುವ ಈ ಕಾರಿಡಾರ್​ 2019ರಲ್ಲಿ ಉದ್ಘಾಟನೆಯಾಗಿದೆ.

ಸಿಖ್​ ಯಾತ್ರಾರ್ಥಿಗಳಿಗೆ ಶುಭ ಸಮಾಚಾರ; ಕರ್ತಾರ್​ಪುರ ಕಾರಿಡಾರ್​ನ್ನು ನಾಳೆಯಿಂದ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ
ಕರ್ತಾರ್​ಪುರ ಗುರುದ್ವಾರ
TV9 Web
| Edited By: |

Updated on: Nov 16, 2021 | 5:04 PM

Share

ನಾಳೆ (ಬುಧವಾರ-17-11-2021)ಕರ್ತಾರ್​ಪುರ ಸಾಹೀಬ್​ ಕಾರಿಡಾರ್​​ ತೆರೆಯಲು  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.  ನವೆಂಬರ್ 19ರಂದು ನಡೆಯಲಿರುವ ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ, ಲಕ್ಷಾಂತರ ಸಿಖ್​​ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಇದೀಗ ಕರ್ತಾರ್​ಪುರ ಸಾಹೀಬ್​ ಕಾರಿಡಾರ್​ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. 

ಈ ಬಗ್ಗೆ ಗೃಹ ಸಚಿವ ಅಮಿತ್​ ಶಾ ಎರಡು ಟ್ವೀಟ್​ಗಳ ಮೂಲಕ ತಿಳಿಸಿದ್ದಾರೆ. ಮೊದಲ ಟ್ವೀಟ್​ನಲ್ಲಿ, ನಾಳೆಯಿಂದ ಕರ್ತಾರ್​ಪುರ ಸಾಹೀಬ್​ ಕಾರಿಡಾರ್​ನ್ನು ಮತ್ತೆ ತೆರೆಯಲು ನರೇಂದ್ರ ಮೋದಿ ಸರ್ಕಾರ ನಿರ್ಧಾರ ಮಾಡಿದೆ. ಇದು ಗುರುನಾನಕ್​ ದೇವ್​ ಜಿ ಮತ್ತು ಸಿಖ್​ ಸಮುದಾಯದ ಬಗ್ಗೆ ಮೋದಿ ಸರ್ಕಾರಕ್ಕೆ ಇರುವ ಅಪಾರ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ. ಇನ್ನೊಂದು ಟ್ವೀಟ್​​ನಲ್ಲಿ,  ನವೆಂಬರ್​ 19ರಂದು ಗುರುನಾನಕ್​ ದೇವ್​ ಜಿ ಜನ್ಮಜಯಂತಿ ನಿಮಿತ್ತ ಪ್ರಕಾಶ ಉತ್ಸವ ಆಚರಿಸಲು ದೇಶದಲ್ಲಿ ಸಿದ್ಧತೆ ನಡೆಯುತ್ತಿದೆ. ಇದೇ ಹೊತ್ತಲ್ಲಿ ಕರ್ತಾರಪುರ ಕಾರಿಡಾರ್​ ತೆರೆಯಲು ಮೋದಿ ಸರ್ಕಾರ ನಿರ್ಧಾರ ಮಾಡಿದ್ದು, ಸಿಖ್​ ಸಮುದಾಯದವರಿಗೆ ಇನ್ನಷ್ಟು ಸಂತೋಷದಿಂದ ಉತ್ಸವ ಆಚರಿಸಲು ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಪಂಜಾಬ್​​ನ ಗುರುದಾಸ್​​ಪುರದಲ್ಲಿರುವ ದೇರಾ ಬಾಬಾ ನಾನಕ್​ ಮತ್ತು ಪಾಕಿಸ್ತಾನದ ಕರ್ತಾರ್​ಪುರ್​​ನಲ್ಲಿರುವ ದರ್ಬಾರ್​ ಸಾಹೀಬ್​​ ಗುರುದ್ವಾರಗಳನ್ನು ಸಂಪರ್ಕಿರುವ ಈ ಕಾರಿಡಾರ್​ 2019ರಲ್ಲಿ ಉದ್ಘಾಟನೆಯಾಗಿದೆ. ಕರ್ತಾರಪುರ್​​ನಲ್ಲಿರುವ ಗುರುದ್ವಾರಕ್ಕೆ ಭಾರತದ ಸಿಖ್​ ಯಾತ್ರಾರ್ಥಿಗಳು ವೀಸಾ ಇಲ್ಲದೆ ಹೋಗಬಹುದಾದ ವ್ಯವಸ್ಥೆಯಾಗಿದೆ.  ಕೊವಿಡ್​ 19 ಕಾರಣದಿಂದಾಗಿ 2020ರ ಮಾರ್ಚ್​ 20ರಿಂದ ಈ ಕಾರಿಡಾರ್​ನ್ನು ಮುಚ್ಚಲಾಗಿತ್ತು. ಇದೀಗ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಮತ್ತೆ ಓಪನ್ ಮಾಡಲಾಗುತ್ತಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ನಿಮ್ಮ ವಿಡಿಯೋಗೆ ಯೂಟ್ಯೂಬ್ ವೇದಿಕೆಯಲ್ಲಿ ಡಿಸ್ಲೈಕ್​ಗಳು ಬರುತ್ತಿದ್ದರೆ ಚಿಂತೆ ಬೇಡ, ಇನ್ನು ಮುಂದೆ ಆ ಕೌಂಟರ್ ಕಾಣದಂತೆ ಮರೆಯಾಗುವುದು

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು