AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್​ ಯಾತ್ರಾರ್ಥಿಗಳಿಗೆ ಶುಭ ಸಮಾಚಾರ; ಕರ್ತಾರ್​ಪುರ ಕಾರಿಡಾರ್​ನ್ನು ನಾಳೆಯಿಂದ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ

ಪಂಜಾಬ್​​ನ ಗುರುದಾಸ್​​ಪುರದಲ್ಲಿರುವ ದೇರಾ ಬಾಬಾ ನಾನಕ್​ ಮತ್ತು ಪಾಕಿಸ್ತಾನದ ಕರ್ತಾರ್​ಪುರ್​​ನಲ್ಲಿರುವ ದರ್ಬಾರ್​ ಸಾಹೀಬ್​​ ಗುರುದ್ವಾರಗಳನ್ನು ಸಂಪರ್ಕಿರುವ ಈ ಕಾರಿಡಾರ್​ 2019ರಲ್ಲಿ ಉದ್ಘಾಟನೆಯಾಗಿದೆ.

ಸಿಖ್​ ಯಾತ್ರಾರ್ಥಿಗಳಿಗೆ ಶುಭ ಸಮಾಚಾರ; ಕರ್ತಾರ್​ಪುರ ಕಾರಿಡಾರ್​ನ್ನು ನಾಳೆಯಿಂದ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ
ಕರ್ತಾರ್​ಪುರ ಗುರುದ್ವಾರ
TV9 Web
| Edited By: |

Updated on: Nov 16, 2021 | 5:04 PM

Share

ನಾಳೆ (ಬುಧವಾರ-17-11-2021)ಕರ್ತಾರ್​ಪುರ ಸಾಹೀಬ್​ ಕಾರಿಡಾರ್​​ ತೆರೆಯಲು  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.  ನವೆಂಬರ್ 19ರಂದು ನಡೆಯಲಿರುವ ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ, ಲಕ್ಷಾಂತರ ಸಿಖ್​​ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಇದೀಗ ಕರ್ತಾರ್​ಪುರ ಸಾಹೀಬ್​ ಕಾರಿಡಾರ್​ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. 

ಈ ಬಗ್ಗೆ ಗೃಹ ಸಚಿವ ಅಮಿತ್​ ಶಾ ಎರಡು ಟ್ವೀಟ್​ಗಳ ಮೂಲಕ ತಿಳಿಸಿದ್ದಾರೆ. ಮೊದಲ ಟ್ವೀಟ್​ನಲ್ಲಿ, ನಾಳೆಯಿಂದ ಕರ್ತಾರ್​ಪುರ ಸಾಹೀಬ್​ ಕಾರಿಡಾರ್​ನ್ನು ಮತ್ತೆ ತೆರೆಯಲು ನರೇಂದ್ರ ಮೋದಿ ಸರ್ಕಾರ ನಿರ್ಧಾರ ಮಾಡಿದೆ. ಇದು ಗುರುನಾನಕ್​ ದೇವ್​ ಜಿ ಮತ್ತು ಸಿಖ್​ ಸಮುದಾಯದ ಬಗ್ಗೆ ಮೋದಿ ಸರ್ಕಾರಕ್ಕೆ ಇರುವ ಅಪಾರ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ. ಇನ್ನೊಂದು ಟ್ವೀಟ್​​ನಲ್ಲಿ,  ನವೆಂಬರ್​ 19ರಂದು ಗುರುನಾನಕ್​ ದೇವ್​ ಜಿ ಜನ್ಮಜಯಂತಿ ನಿಮಿತ್ತ ಪ್ರಕಾಶ ಉತ್ಸವ ಆಚರಿಸಲು ದೇಶದಲ್ಲಿ ಸಿದ್ಧತೆ ನಡೆಯುತ್ತಿದೆ. ಇದೇ ಹೊತ್ತಲ್ಲಿ ಕರ್ತಾರಪುರ ಕಾರಿಡಾರ್​ ತೆರೆಯಲು ಮೋದಿ ಸರ್ಕಾರ ನಿರ್ಧಾರ ಮಾಡಿದ್ದು, ಸಿಖ್​ ಸಮುದಾಯದವರಿಗೆ ಇನ್ನಷ್ಟು ಸಂತೋಷದಿಂದ ಉತ್ಸವ ಆಚರಿಸಲು ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಪಂಜಾಬ್​​ನ ಗುರುದಾಸ್​​ಪುರದಲ್ಲಿರುವ ದೇರಾ ಬಾಬಾ ನಾನಕ್​ ಮತ್ತು ಪಾಕಿಸ್ತಾನದ ಕರ್ತಾರ್​ಪುರ್​​ನಲ್ಲಿರುವ ದರ್ಬಾರ್​ ಸಾಹೀಬ್​​ ಗುರುದ್ವಾರಗಳನ್ನು ಸಂಪರ್ಕಿರುವ ಈ ಕಾರಿಡಾರ್​ 2019ರಲ್ಲಿ ಉದ್ಘಾಟನೆಯಾಗಿದೆ. ಕರ್ತಾರಪುರ್​​ನಲ್ಲಿರುವ ಗುರುದ್ವಾರಕ್ಕೆ ಭಾರತದ ಸಿಖ್​ ಯಾತ್ರಾರ್ಥಿಗಳು ವೀಸಾ ಇಲ್ಲದೆ ಹೋಗಬಹುದಾದ ವ್ಯವಸ್ಥೆಯಾಗಿದೆ.  ಕೊವಿಡ್​ 19 ಕಾರಣದಿಂದಾಗಿ 2020ರ ಮಾರ್ಚ್​ 20ರಿಂದ ಈ ಕಾರಿಡಾರ್​ನ್ನು ಮುಚ್ಚಲಾಗಿತ್ತು. ಇದೀಗ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಮತ್ತೆ ಓಪನ್ ಮಾಡಲಾಗುತ್ತಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ನಿಮ್ಮ ವಿಡಿಯೋಗೆ ಯೂಟ್ಯೂಬ್ ವೇದಿಕೆಯಲ್ಲಿ ಡಿಸ್ಲೈಕ್​ಗಳು ಬರುತ್ತಿದ್ದರೆ ಚಿಂತೆ ಬೇಡ, ಇನ್ನು ಮುಂದೆ ಆ ಕೌಂಟರ್ ಕಾಣದಂತೆ ಮರೆಯಾಗುವುದು

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ