AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿ ಚಿದಂಬರಂಗೆ ರಿಲೀಫ್​; IT ಕಾನೂನು ಕ್ರಮಕ್ಕೆ ಹೈಕೋರ್ಟ್​ ತಡೆ

ಚೆನ್ನೈನ ಹೊರ ವಲಯ ಮುತ್ತುಕಾಡು ಗ್ರಾಮದಲ್ಲಿರುವ ಆಸ್ತಿಯನ್ನು ಕಾರ್ತಿ ಹಾಗೂ ಅವರ ಪತ್ನಿ ಶ್ರೀನಿಧಿ 2014-15ರಲ್ಲಿ ಮಾರಾಟ ಮಾಡಿದ್ದರು. ಈ ವಿಚಾರವನ್ನು ಬಹಿರಂಗ ಮಾಡದ ಅವರ ವಿರುದ್ಧ ಐಟಿ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗಿತ್ತು.

ಕಾರ್ತಿ ಚಿದಂಬರಂಗೆ ರಿಲೀಫ್​; IT ಕಾನೂನು ಕ್ರಮಕ್ಕೆ  ಹೈಕೋರ್ಟ್​ ತಡೆ
ಚಿದಂಬರಂ- ಕಾರ್ತಿ ಚಿದಂಬರಂ
ರಾಜೇಶ್ ದುಗ್ಗುಮನೆ
| Edited By: |

Updated on: Dec 12, 2020 | 4:21 PM

Share

ಚೆನ್ನೈ: ದೊಡ್ಡ ಮೊತ್ತದಲ್ಲಿ ನಡೆಸಿದ್ದ ಹಣದ ವ್ಯವಹಾರವನ್ನು ಬಹಿರಂಗ ಪಡಿಸದ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿಂದಂಬರಂ ಅವರ ಮಗ ಕಾರ್ತಿ ಚಿಂದಂಬರಂಗೆ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಈ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ್ದ ಕಾನೂನು ಪ್ರಕ್ರಿಯೆಗೆ ಮದ್ರಾಸ್ ಹೈಕೋರ್ಟ್​ ತಡೆ ನೀಡಿದೆ.

ಚೆನ್ನೈನ ಹೊರ ವಲಯ ಮುತ್ತುಕಾಡು ಗ್ರಾಮದಲ್ಲಿರುವ ಆಸ್ತಿಯನ್ನು ಕಾರ್ತಿ ಹಾಗೂ ಅವರ ಪತ್ನಿ ಶ್ರೀನಿಧಿ 2014-15ರಲ್ಲಿ ಮಾರಾಟ ಮಾಡಿದ್ದರು. ಮಾರಾಟದ ನಂತರ ಕಾರ್ತಿ 6.38 ಕೋಟಿ ರೂಪಾಯಿ ಹಾಗೂ ಶ್ರೀನಿಧಿ 1.35 ಕೋಟಿ ರೂಪಾಯಿ ನಗದು ಪಡೆದಿದ್ದರು. ಆದರೆ, ಈ ವಿಚಾರವನ್ನು ಅವರು ಬಹಿರಂಗ ಪಡಿಸಿರಲಿಲ್ಲ ಮತ್ತು ಇದಕ್ಕೆ ತೆರಿಗೆ ಕೂಡ ಕಟ್ಟಿರಲಿಲ್ಲ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಾರ್ತಿ ಹಾಗೂ ಅವರ ಪತ್ನಿ ವಿರುದ್ಧ ಆದಾಯ ಬಹಿರಂಗ ಮಾಡದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮುಂದಾಗಿತ್ತು. ಇದನ್ನು ಕೋರ್ಟ್​ನಲ್ಲಿ ಕಾರ್ತಿ ಹಾಗೂ ಅವರ ಪತ್ನಿ ಪ್ರಶ್ನೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, 2014-15ನೇ ಸಾಲಿನಲ್ಲಿ ಕಾರ್ತಿ ಮನೆ ಮಾರಾಟ ಮಾಡಿರಬಹುದು. ಆದರೆ, ಪ್ರಕರಣ ದಾಖಲಿಸುವ ಮೊದಲು ನೀವು ಪ್ರಾಥಮಿಕ ತನಿಖೆ ನಡೆಸಬೇಕು. ಆ ವರದಿ ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಬೇಕು. ಆದರೆ, ಹೀಗೆ ಮಾಡದೇ ಅವರ ವಿರುದ್ಧ ನೇರವಾಗಿ ಪ್ರಕರಣ ದಾಖಲು ಮಾಡುವುದು ಸರಿಯಲ್ಲ ಎಂದು ಕೋರ್ಟ್​ ಹೇಳಿದೆ.

ಮತ್ತೊಮ್ಮೆ ಈ ಬಗ್ಗೆ ಮೌಲ್ಯ ಮಾಪನ ಮಾಡಿ. ಆಗ ಸೂಕ್ತ ಮಾಹಿತಿ ದೊರೆತರೆ ನೀವು ಮುಂದುವರಿಯಬಹುದು ಎಂದು ಕೋರ್ಟ್​ ಹೇಳಿದೆ. ಈ ಮೂಲಕ ಕಾರ್ತಿಗೆ ತಾತ್ಕಾಲಿಕ ರಿಲೀಫ್​ ನೀಡಿದೆ.

ED ವಿರೋಧದ ನಡುವೆ ಚಿದಂಬರಂಗೆ ಸಿಕ್ತು ಜಾಮೀನು, ತಿಹಾರ್ ಜೈಲುವಾಸ ಅಂತ್ಯ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು