AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿ ಚಿದಂಬರಂಗೆ ರಿಲೀಫ್​; IT ಕಾನೂನು ಕ್ರಮಕ್ಕೆ ಹೈಕೋರ್ಟ್​ ತಡೆ

ಚೆನ್ನೈನ ಹೊರ ವಲಯ ಮುತ್ತುಕಾಡು ಗ್ರಾಮದಲ್ಲಿರುವ ಆಸ್ತಿಯನ್ನು ಕಾರ್ತಿ ಹಾಗೂ ಅವರ ಪತ್ನಿ ಶ್ರೀನಿಧಿ 2014-15ರಲ್ಲಿ ಮಾರಾಟ ಮಾಡಿದ್ದರು. ಈ ವಿಚಾರವನ್ನು ಬಹಿರಂಗ ಮಾಡದ ಅವರ ವಿರುದ್ಧ ಐಟಿ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗಿತ್ತು.

ಕಾರ್ತಿ ಚಿದಂಬರಂಗೆ ರಿಲೀಫ್​; IT ಕಾನೂನು ಕ್ರಮಕ್ಕೆ  ಹೈಕೋರ್ಟ್​ ತಡೆ
ಚಿದಂಬರಂ- ಕಾರ್ತಿ ಚಿದಂಬರಂ
ರಾಜೇಶ್ ದುಗ್ಗುಮನೆ
| Edited By: |

Updated on: Dec 12, 2020 | 4:21 PM

Share

ಚೆನ್ನೈ: ದೊಡ್ಡ ಮೊತ್ತದಲ್ಲಿ ನಡೆಸಿದ್ದ ಹಣದ ವ್ಯವಹಾರವನ್ನು ಬಹಿರಂಗ ಪಡಿಸದ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿಂದಂಬರಂ ಅವರ ಮಗ ಕಾರ್ತಿ ಚಿಂದಂಬರಂಗೆ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಈ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ್ದ ಕಾನೂನು ಪ್ರಕ್ರಿಯೆಗೆ ಮದ್ರಾಸ್ ಹೈಕೋರ್ಟ್​ ತಡೆ ನೀಡಿದೆ.

ಚೆನ್ನೈನ ಹೊರ ವಲಯ ಮುತ್ತುಕಾಡು ಗ್ರಾಮದಲ್ಲಿರುವ ಆಸ್ತಿಯನ್ನು ಕಾರ್ತಿ ಹಾಗೂ ಅವರ ಪತ್ನಿ ಶ್ರೀನಿಧಿ 2014-15ರಲ್ಲಿ ಮಾರಾಟ ಮಾಡಿದ್ದರು. ಮಾರಾಟದ ನಂತರ ಕಾರ್ತಿ 6.38 ಕೋಟಿ ರೂಪಾಯಿ ಹಾಗೂ ಶ್ರೀನಿಧಿ 1.35 ಕೋಟಿ ರೂಪಾಯಿ ನಗದು ಪಡೆದಿದ್ದರು. ಆದರೆ, ಈ ವಿಚಾರವನ್ನು ಅವರು ಬಹಿರಂಗ ಪಡಿಸಿರಲಿಲ್ಲ ಮತ್ತು ಇದಕ್ಕೆ ತೆರಿಗೆ ಕೂಡ ಕಟ್ಟಿರಲಿಲ್ಲ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಾರ್ತಿ ಹಾಗೂ ಅವರ ಪತ್ನಿ ವಿರುದ್ಧ ಆದಾಯ ಬಹಿರಂಗ ಮಾಡದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮುಂದಾಗಿತ್ತು. ಇದನ್ನು ಕೋರ್ಟ್​ನಲ್ಲಿ ಕಾರ್ತಿ ಹಾಗೂ ಅವರ ಪತ್ನಿ ಪ್ರಶ್ನೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, 2014-15ನೇ ಸಾಲಿನಲ್ಲಿ ಕಾರ್ತಿ ಮನೆ ಮಾರಾಟ ಮಾಡಿರಬಹುದು. ಆದರೆ, ಪ್ರಕರಣ ದಾಖಲಿಸುವ ಮೊದಲು ನೀವು ಪ್ರಾಥಮಿಕ ತನಿಖೆ ನಡೆಸಬೇಕು. ಆ ವರದಿ ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಬೇಕು. ಆದರೆ, ಹೀಗೆ ಮಾಡದೇ ಅವರ ವಿರುದ್ಧ ನೇರವಾಗಿ ಪ್ರಕರಣ ದಾಖಲು ಮಾಡುವುದು ಸರಿಯಲ್ಲ ಎಂದು ಕೋರ್ಟ್​ ಹೇಳಿದೆ.

ಮತ್ತೊಮ್ಮೆ ಈ ಬಗ್ಗೆ ಮೌಲ್ಯ ಮಾಪನ ಮಾಡಿ. ಆಗ ಸೂಕ್ತ ಮಾಹಿತಿ ದೊರೆತರೆ ನೀವು ಮುಂದುವರಿಯಬಹುದು ಎಂದು ಕೋರ್ಟ್​ ಹೇಳಿದೆ. ಈ ಮೂಲಕ ಕಾರ್ತಿಗೆ ತಾತ್ಕಾಲಿಕ ರಿಲೀಫ್​ ನೀಡಿದೆ.

ED ವಿರೋಧದ ನಡುವೆ ಚಿದಂಬರಂಗೆ ಸಿಕ್ತು ಜಾಮೀನು, ತಿಹಾರ್ ಜೈಲುವಾಸ ಅಂತ್ಯ

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ