AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್!

ಕಾಸರಗೋಡಿನ ಅಡೂರ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮನೆಯ ಡ್ರಾಯರ್‌ನಲ್ಲಿ ಸಿಕ್ಕಿದ ಕೇರೆ ಹಾವಿನ ಮೈಗೆ ಚಿನ್ನದ ಉಂಗುರ ಬಿಗಿಯಾಗಿ ಸಿಲುಕಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ, ಉಂಗುರವನ್ನು ತೆಗೆದು ಕಾಡಿಗೆ ಬಿಟ್ಟಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಮಕ್ಕಳ ಸಮಯೋಚಿತ ನಿರ್ಧಾರದಿಂದ ದೊಡ್ಡ ಅಪಾಯ ತಪ್ಪಿದೆ.

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್!
ಕೇರೆ ಹಾವಿನ ಮೈಗೆ ಸಿಲುಕಿತು ಚಿನ್ನದ ಉಂಗುರ
ಅಕ್ಷಯ್​ ಪಲ್ಲಮಜಲು​​
|

Updated on:May 06, 2026 | 6:32 AM

Share

ಕಾಸರಗೋಡು, ಮೇ.5: ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ ಸೇರಿಕೊಂಡಿದ್ದ ಹಾವಿನ ಮೈಗೆ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಅಷ್ಟಕ್ಕೂ ರವಿ ಅವರ ಮನೆಯಲ್ಲಿ ನಡೆದಿದ್ದೇನು? ಎಂಬ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ ನೋಡಿ. ರವಿ ಅವರ ಮಕ್ಕಳು ಮನೆಯೊಳಗೆ ಆಟವಾಡುತ್ತಾ ಟೇಬಲ್‌ನ ಡ್ರಾಯರ್ ತೆರೆದಾಗ ಅದರೊಳಗೆ ದೊಡ್ಡ ಕೇರೆ ಹಾವೊಂದು ಸುರುಳಿ ಸುತ್ತಿಕೊಂಡು ಕುಳಿತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಹಾವನ್ನು ಗಮನಿಸಿದಾಗ ಅದರ ದೇಹದ ಮಧ್ಯಭಾಗದಲ್ಲಿ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ಬಹುಶಃ ಆಹಾರದ ಹುಡುಕಾಟದಲ್ಲಿ ಡ್ರಾಯರ್‌ನ ಸಣ್ಣ ಸೀಳಿನ ಮೂಲಕ ಒಳಗೆ ಹೋಗುವಾಗ ಡ್ರಾಯರ್‌ನಲ್ಲಿದ್ದ ಉಂಗುರ ಹಾವಿನ ಮೈಗೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ಚಾಲಕನ ರೌಡಿಸಂ: ಪೊಲೀಸ್ ಮುಂದೆಯೇ ಆಟೋ ಗ್ಲಾಸ್ ಹೊಡೆದು ಪುಂಡಾಟ!

ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ರಕ್ಷಣಾ ಸಿಬ್ಬಂದಿ ಅತ್ಯಂತ ನಾಜೂಕಿನಿಂದ ಹಾವನ್ನು ಹೊರತೆಗೆದು, ಅದರ ಮೈಗೆ ಯಾವುದೇ ಗಾಯವಾಗದಂತೆ ಚಿನ್ನದ ಉಂಗುರವನ್ನು ಕತ್ತರಿಸಿ ತೆಗೆಯುವಲ್ಲಿ ಯಶಸ್ವಿಯಾದರು. ನಂತರ ಹಾವನ್ನು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಮಕ್ಕಳು ಹಾವನ್ನು ಮುಟ್ಟಲು ಹೋಗದ ಕಾರಣ ದೊಡ್ಡ ಅಪಾಯವೊಂದು ತಪ್ಪಿದಂತಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Tue, 5 May 26

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ