AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ವಿಶ್ವನಾಥ ದೇಗುಲ ಕಾರಿಡಾರ್​ ನಿರ್ಮಾಣ ಅಂತಿಮ ಹಂತದಲ್ಲಿ; ಡಿಸೆಂಬರ್​ 13ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

Kashi Vishwanath Corridor: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ವಾರ್ಷಿಕವಾಗಿ ಏಳು ಮಿಲಿಯನ್​ (70 ಲಕ್ಷ) ಭಕ್ತರು ಭೇಟಿಕೊಡುತ್ತಾರೆ. ಅದರಲ್ಲಿ ವಾರಾಣಸಿ ಮತ್ತು ಸುತ್ತಲಿನ ಪ್ರದೇಶಗಳ  10 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿದಿನ ದೇಗುಲಕ್ಕೆ ಬಂದು ದರ್ಶನ ಪಡೆಯುತ್ತಾರೆ.

ಕಾಶಿ ವಿಶ್ವನಾಥ ದೇಗುಲ ಕಾರಿಡಾರ್​ ನಿರ್ಮಾಣ ಅಂತಿಮ ಹಂತದಲ್ಲಿ; ಡಿಸೆಂಬರ್​ 13ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾಶಿ ವಿಶ್ವನಾಥ ದೇಗುಲ ಕಾರಿಡಾರ್​ ನಿರ್ಮಾಣ ಕಾಮಗಾರಿ
TV9 Web
| Updated By: Lakshmi Hegde|

Updated on: Nov 17, 2021 | 12:55 PM

Share

ಗಂಗಾ ನದಿಯಿಂದ ವಾರಾಣಸಿ ಕಾಶಿ ವಿಶ್ವನಾಥ ದೇಗುಲವನ್ನು ಸಂಪರ್ಕಿಸುವ ಕಾಶಿ ವಿಶ್ವನಾಥ ಕಾರಿಡಾರ್ (Kashi Vishwanath Corridor)​​ನ್ನು ಡಿಸೆಂಬರ್​ 13ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸದ್ಯ ಕಾರಿಡಾರ್ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿವೆ.  ಶ್ರೀ ಕಾಶಿ ವಿಶ್ವನಾಥ ವಿಶೇಷ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ವರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದು, ಕಾರಿಡಾರ್​ ಹಾಗೂ ಉಳಿದ ಒಟ್ಟು 24 ಕಟ್ಟಡಗಳ ನಿರ್ಮಾಣ ಕಾರ್ಯ ಮುಗಿದಿದೆ. ಅಂತಿಮ ಹಂತದ ಕೆಲವು ಕೆಲಸಗಳಿದ್ದು ಡಿಸೆಂಬರ್​ 13ರ ಹೊತ್ತಿಗೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ಹೇಳಿದ್ದಾರೆ.  ಅಂದಹಾಗೇ, ಈ ಕಾರಿಡಾರ್ ಉದ್ದಕ್ಕೂ ಶ್ಲೋಕ, ವೇದಸ್ತೋತ್ರಗಳನ್ನು  ಕೆತ್ತಲಾಗಿದ್ದು, ಇದಕ್ಕೆ ಸುಮಾರು 1000 ಕೋಟಿ  ರೂಪಾಯಿ ವೆಚ್ಚವಾಗಿದೆ.  

ಗಂಗಾನದಿಯಿಂದ ನೇರವಾಗಿ ಕಾಶಿ ವಿಶ್ವನಾಥ ದೇಗುಲಕ್ಕೆ ಸಾಗುವ ದಾರಿ ಇದಾಗಿದ್ದು, 2019ರ ಮಾರ್ಚ್​ನಲ್ಲಿ ಕಾರಿಡಾರ್​ ನಿರ್ಮಾಣಕ್ಕೆ ಪ್ರಧಾನಿ ಮೋದಿಯವರು ಅಡಿಗಲ್ಲು ಸ್ಥಾಪನೆ ನೆರವೇರಿಸಿದ್ದರು. 5.5 ಲಕ್ಷ ಚದರ ಅಡಿಗಳಷ್ಟು ವಿಸ್ತಾರ ಪ್ರದೇಶದಲ್ಲಿ ಕಾರಿಡಾರ್​ ನಿರ್ಮಾಣ ಮಾಡಲಾಗಿದೆ. ಈ ಕಾರಿಡಾರ್​ ಮತ್ತು 24 ಇತರ ಕಟ್ಟಡಗಳ ನಿರ್ಮಾಣಕ್ಕಾಗಿ ಸ್ಥಳದಲ್ಲಿದ್ದ ಸುಮಾರು 300 ಕಟ್ಟಡಗಳನ್ನು ಖರೀದಿ ಮಾಡಿ, ಅದರ ಬೆಲೆಯನ್ನು ಮಾಲೀಕರಿಗೆ ಕೊಟ್ಟು ನಂತರ ಧ್ವಂಸ ಮಾಡಲಾಗಿತ್ತು. ಈ ಕಾರಿಡಾರ್​ ನಿರ್ಮಾಣವನ್ನು ಯೋಗಿ ಆದಿತ್ಯನಾಥ್​ ಖುದ್ದಾಗಿ ನಿಂತು ಪರಿಶೀಲನೆ ನಡೆಸಿದ್ದಾರೆ.  ಇನ್ನು 24 ಕಟ್ಟಡಗಳೆಂದರೆ ಅದರಲ್ಲಿ ವರ್ಚ್ಯುವಲ್​ ಮ್ಯೂಸಿಯಂ, ಏಳು ದೊಡ್ಡ ಪ್ರವೇಶದ್ವಾರಗಳು,  ಗ್ರಂಥಾಲಯ, ಕೆಫೆಟೇರಿಯಾ, ಫುಡ್​ ಕೋರ್ಟ್​, ಪ್ರವಾಸಿ ಮಂದಿರ, ಧ್ಯಾನ ಮಂದಿರ ಸೇರಿ ಇನ್ನೂ ಹಲವು ಸೌಲಭ್ಯಗಳು ಇವೆ.  ಅದರಲ್ಲೂ ಒಂದು ಬಾರಿಗೆ 10 ಸಾವಿರ ಭಕ್ತರು ಧ್ಯಾನಕ್ಕೆ ಕುಳಿತುಕೊಳ್ಳಲು ಸಾಧ್ಯವಾಗುವಂತೆ 7 ಸಾವಿರ ಚದರ್​ ಮೀಟರ್ ವಿಸ್ತೀರ್ಣದ ವೇದಿಕೆ ನಿರ್ಮಾಣ ವಿಶೇಷವೆನಿಸಿದೆ.   ಕಾರಿಡಾರ್​ ನಿರ್ಮಾಣ ಕೆಲಸ ನವೆಂಬರ್​ನಲ್ಲಿಯೇ ಮುಗಿಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದೀಗ ಒಂದು ತಿಂಗಳು ತಡವಾಗಿ ಉದ್ಘಾಟನೆಯಾಗುತ್ತಿದೆ.

ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ವಾರ್ಷಿಕವಾಗಿ ಏಳು ಮಿಲಿಯನ್​ (70 ಲಕ್ಷ) ಭಕ್ತರು ಭೇಟಿಕೊಡುತ್ತಾರೆ. ಅದರಲ್ಲಿ ವಾರಾಣಸಿ ಮತ್ತು ಸುತ್ತಲಿನ ಪ್ರದೇಶಗಳ  10 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿದಿನ ದೇಗುಲಕ್ಕೆ ಬಂದು ದರ್ಶನ ಪಡೆಯುತ್ತಾರೆ. ಅದರಲ್ಲೂ ಸೋಮವಾರಗಳಂದು 40-50 ಸಾವಿರ ಭಕ್ತರು ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಶ್ರಾವಣ ಮಾಸದಲ್ಲಂತೂ ಸೋಮವಾರ ಬಂತೆಂದರೆ ದಿನಕ್ಕೆ 3 ಲಕ್ಷದವರೆಗೂ ಭಕ್ತರು ಬರುತ್ತಾರೆ.

ಇದನ್ನೂ ಓದಿ: ಅಪರೂಪ: ಸರ್ಕಾರಿ ಕೆಲಸಕ್ಕಾಗಿ ಲಂಚ ನೀಡಿದ್ದ ಮೂವರ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಯ್ತು!

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್