AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ವಿಶ್ವನಾಥ ದೇಗುಲ ಕಾರಿಡಾರ್​ ನಿರ್ಮಾಣ ಅಂತಿಮ ಹಂತದಲ್ಲಿ; ಡಿಸೆಂಬರ್​ 13ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

Kashi Vishwanath Corridor: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ವಾರ್ಷಿಕವಾಗಿ ಏಳು ಮಿಲಿಯನ್​ (70 ಲಕ್ಷ) ಭಕ್ತರು ಭೇಟಿಕೊಡುತ್ತಾರೆ. ಅದರಲ್ಲಿ ವಾರಾಣಸಿ ಮತ್ತು ಸುತ್ತಲಿನ ಪ್ರದೇಶಗಳ  10 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿದಿನ ದೇಗುಲಕ್ಕೆ ಬಂದು ದರ್ಶನ ಪಡೆಯುತ್ತಾರೆ.

ಕಾಶಿ ವಿಶ್ವನಾಥ ದೇಗುಲ ಕಾರಿಡಾರ್​ ನಿರ್ಮಾಣ ಅಂತಿಮ ಹಂತದಲ್ಲಿ; ಡಿಸೆಂಬರ್​ 13ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾಶಿ ವಿಶ್ವನಾಥ ದೇಗುಲ ಕಾರಿಡಾರ್​ ನಿರ್ಮಾಣ ಕಾಮಗಾರಿ
TV9 Web
| Edited By: |

Updated on: Nov 17, 2021 | 12:55 PM

Share

ಗಂಗಾ ನದಿಯಿಂದ ವಾರಾಣಸಿ ಕಾಶಿ ವಿಶ್ವನಾಥ ದೇಗುಲವನ್ನು ಸಂಪರ್ಕಿಸುವ ಕಾಶಿ ವಿಶ್ವನಾಥ ಕಾರಿಡಾರ್ (Kashi Vishwanath Corridor)​​ನ್ನು ಡಿಸೆಂಬರ್​ 13ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸದ್ಯ ಕಾರಿಡಾರ್ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿವೆ.  ಶ್ರೀ ಕಾಶಿ ವಿಶ್ವನಾಥ ವಿಶೇಷ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ವರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದು, ಕಾರಿಡಾರ್​ ಹಾಗೂ ಉಳಿದ ಒಟ್ಟು 24 ಕಟ್ಟಡಗಳ ನಿರ್ಮಾಣ ಕಾರ್ಯ ಮುಗಿದಿದೆ. ಅಂತಿಮ ಹಂತದ ಕೆಲವು ಕೆಲಸಗಳಿದ್ದು ಡಿಸೆಂಬರ್​ 13ರ ಹೊತ್ತಿಗೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ಹೇಳಿದ್ದಾರೆ.  ಅಂದಹಾಗೇ, ಈ ಕಾರಿಡಾರ್ ಉದ್ದಕ್ಕೂ ಶ್ಲೋಕ, ವೇದಸ್ತೋತ್ರಗಳನ್ನು  ಕೆತ್ತಲಾಗಿದ್ದು, ಇದಕ್ಕೆ ಸುಮಾರು 1000 ಕೋಟಿ  ರೂಪಾಯಿ ವೆಚ್ಚವಾಗಿದೆ.  

ಗಂಗಾನದಿಯಿಂದ ನೇರವಾಗಿ ಕಾಶಿ ವಿಶ್ವನಾಥ ದೇಗುಲಕ್ಕೆ ಸಾಗುವ ದಾರಿ ಇದಾಗಿದ್ದು, 2019ರ ಮಾರ್ಚ್​ನಲ್ಲಿ ಕಾರಿಡಾರ್​ ನಿರ್ಮಾಣಕ್ಕೆ ಪ್ರಧಾನಿ ಮೋದಿಯವರು ಅಡಿಗಲ್ಲು ಸ್ಥಾಪನೆ ನೆರವೇರಿಸಿದ್ದರು. 5.5 ಲಕ್ಷ ಚದರ ಅಡಿಗಳಷ್ಟು ವಿಸ್ತಾರ ಪ್ರದೇಶದಲ್ಲಿ ಕಾರಿಡಾರ್​ ನಿರ್ಮಾಣ ಮಾಡಲಾಗಿದೆ. ಈ ಕಾರಿಡಾರ್​ ಮತ್ತು 24 ಇತರ ಕಟ್ಟಡಗಳ ನಿರ್ಮಾಣಕ್ಕಾಗಿ ಸ್ಥಳದಲ್ಲಿದ್ದ ಸುಮಾರು 300 ಕಟ್ಟಡಗಳನ್ನು ಖರೀದಿ ಮಾಡಿ, ಅದರ ಬೆಲೆಯನ್ನು ಮಾಲೀಕರಿಗೆ ಕೊಟ್ಟು ನಂತರ ಧ್ವಂಸ ಮಾಡಲಾಗಿತ್ತು. ಈ ಕಾರಿಡಾರ್​ ನಿರ್ಮಾಣವನ್ನು ಯೋಗಿ ಆದಿತ್ಯನಾಥ್​ ಖುದ್ದಾಗಿ ನಿಂತು ಪರಿಶೀಲನೆ ನಡೆಸಿದ್ದಾರೆ.  ಇನ್ನು 24 ಕಟ್ಟಡಗಳೆಂದರೆ ಅದರಲ್ಲಿ ವರ್ಚ್ಯುವಲ್​ ಮ್ಯೂಸಿಯಂ, ಏಳು ದೊಡ್ಡ ಪ್ರವೇಶದ್ವಾರಗಳು,  ಗ್ರಂಥಾಲಯ, ಕೆಫೆಟೇರಿಯಾ, ಫುಡ್​ ಕೋರ್ಟ್​, ಪ್ರವಾಸಿ ಮಂದಿರ, ಧ್ಯಾನ ಮಂದಿರ ಸೇರಿ ಇನ್ನೂ ಹಲವು ಸೌಲಭ್ಯಗಳು ಇವೆ.  ಅದರಲ್ಲೂ ಒಂದು ಬಾರಿಗೆ 10 ಸಾವಿರ ಭಕ್ತರು ಧ್ಯಾನಕ್ಕೆ ಕುಳಿತುಕೊಳ್ಳಲು ಸಾಧ್ಯವಾಗುವಂತೆ 7 ಸಾವಿರ ಚದರ್​ ಮೀಟರ್ ವಿಸ್ತೀರ್ಣದ ವೇದಿಕೆ ನಿರ್ಮಾಣ ವಿಶೇಷವೆನಿಸಿದೆ.   ಕಾರಿಡಾರ್​ ನಿರ್ಮಾಣ ಕೆಲಸ ನವೆಂಬರ್​ನಲ್ಲಿಯೇ ಮುಗಿಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದೀಗ ಒಂದು ತಿಂಗಳು ತಡವಾಗಿ ಉದ್ಘಾಟನೆಯಾಗುತ್ತಿದೆ.

ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ವಾರ್ಷಿಕವಾಗಿ ಏಳು ಮಿಲಿಯನ್​ (70 ಲಕ್ಷ) ಭಕ್ತರು ಭೇಟಿಕೊಡುತ್ತಾರೆ. ಅದರಲ್ಲಿ ವಾರಾಣಸಿ ಮತ್ತು ಸುತ್ತಲಿನ ಪ್ರದೇಶಗಳ  10 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿದಿನ ದೇಗುಲಕ್ಕೆ ಬಂದು ದರ್ಶನ ಪಡೆಯುತ್ತಾರೆ. ಅದರಲ್ಲೂ ಸೋಮವಾರಗಳಂದು 40-50 ಸಾವಿರ ಭಕ್ತರು ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಶ್ರಾವಣ ಮಾಸದಲ್ಲಂತೂ ಸೋಮವಾರ ಬಂತೆಂದರೆ ದಿನಕ್ಕೆ 3 ಲಕ್ಷದವರೆಗೂ ಭಕ್ತರು ಬರುತ್ತಾರೆ.

ಇದನ್ನೂ ಓದಿ: ಅಪರೂಪ: ಸರ್ಕಾರಿ ಕೆಲಸಕ್ಕಾಗಿ ಲಂಚ ನೀಡಿದ್ದ ಮೂವರ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಯ್ತು!

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು