AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Masjid case: ಮುಂದಿನ ಆದೇಶದವರೆಗೆ ಶಿವಲಿಂಗ ಪ್ರದೇಶದ ರಕ್ಷಣೆಯ ಆದೇಶವನ್ನು ಮೇ 17ರವರೆಗೆ ವಿಸ್ತರಿಸಿದ ಸುಪ್ರೀಂ

ಜ್ಞಾನವಾಪಿ ಮಸೀದಿ ಆವರಣದ ವಿಡಿಯೋ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶವನ್ನು ರಕ್ಷಿಸುವ ತನ್ನ ಮಧ್ಯಂತರ ಆದೇಶವನ್ನು ಮೇ 17ರವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Gyanvapi Masjid case: ಮುಂದಿನ ಆದೇಶದವರೆಗೆ ಶಿವಲಿಂಗ ಪ್ರದೇಶದ ರಕ್ಷಣೆಯ ಆದೇಶವನ್ನು ಮೇ 17ರವರೆಗೆ ವಿಸ್ತರಿಸಿದ ಸುಪ್ರೀಂ
ಕಾಶಿಯಲ್ಲಿರುವ ಜ್ಞಾನವಾಪಿ ಮಸೀದಿ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 11, 2022 | 4:52 PM

Share

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಮಸೀದಿ ಆವರಣದ ವಿಡಿಯೋ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶವನ್ನು ರಕ್ಷಿಸುವ ತನ್ನ ಮಧ್ಯಂತರ ಆದೇಶವನ್ನು ಮೇ 17ರವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಸೀದಿ ಸಂಕೀರ್ಣದ ಹೊರಗೋಡೆಯ ಮೇಲಿರುವ ಮಾ ಶೃಂಗಾರ್ ಗೌರಿ ಸ್ಥಲಕ್ಕೆ ಪೂಜೆ ಸಲ್ಲಿಸುವ ಹಕ್ಕು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ವಾರಣಾಸಿ ನ್ಯಾಯಾಲಯವು ಏಪ್ರಿಲ್ 8ರಂದು ಆ ಸ್ಥಳದ ಪರಿಶೀಲನೆಗೆ ಅಡ್ವೊಕೇಟ್ ಕಮಿಷನರ್ ಅವರನ್ನು ನೇಮಿಸಿ, ವೀಡಿಯೋ ಸಮೀಕ್ಷೆಯನ್ನು ಸಿದ್ಧಪಡಿಸಲು ಸೂಚಿಸಿತ್ತು.

ಮಸೀದಿ ಸಮಿತಿಯು ಇದನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು, ಅಲಹಾಬಾದ್ ಹೈಕೋರ್ಟ್‌ ಏಪ್ರಿಲ್ 21 ರಂದು ಮೇಲ್ಮನವಿಯನ್ನು ವಜಾಗೊಳಿಸಿತು. ನಂತರ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಜ್ಞಾನವಾಪಿ ಸಾಲಿನಲ್ಲಿ ಸಲ್ಲಿಸಲಾದ ಎಲ್ಲಾ ಮೊಕದ್ದಮೆಗಳ ಕ್ರೋಢೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಹಿಂದೂ ಸಮಿತಿಗಳಿಗೆ ಅನುಮತಿ ನೀಡಿದೆ.

ಸರ್ವೆ ಕಮಿಷನರ್ ನೇಮಕಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ಮೂರು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಹಿಂದೂ ಸಮಿತಿಗಳಿಗೆ ಸೂಚಿಸಿದೆ.

Published On - 4:07 pm, Fri, 11 November 22

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..