Gyanvapi Masjid case: ಮುಂದಿನ ಆದೇಶದವರೆಗೆ ಶಿವಲಿಂಗ ಪ್ರದೇಶದ ರಕ್ಷಣೆಯ ಆದೇಶವನ್ನು ಮೇ 17ರವರೆಗೆ ವಿಸ್ತರಿಸಿದ ಸುಪ್ರೀಂ

ಜ್ಞಾನವಾಪಿ ಮಸೀದಿ ಆವರಣದ ವಿಡಿಯೋ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶವನ್ನು ರಕ್ಷಿಸುವ ತನ್ನ ಮಧ್ಯಂತರ ಆದೇಶವನ್ನು ಮೇ 17ರವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Gyanvapi Masjid case: ಮುಂದಿನ ಆದೇಶದವರೆಗೆ ಶಿವಲಿಂಗ ಪ್ರದೇಶದ ರಕ್ಷಣೆಯ ಆದೇಶವನ್ನು ಮೇ 17ರವರೆಗೆ ವಿಸ್ತರಿಸಿದ ಸುಪ್ರೀಂ
ಕಾಶಿಯಲ್ಲಿರುವ ಜ್ಞಾನವಾಪಿ ಮಸೀದಿ
Edited By:

Updated on: Nov 11, 2022 | 4:52 PM

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಮಸೀದಿ ಆವರಣದ ವಿಡಿಯೋ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶವನ್ನು ರಕ್ಷಿಸುವ ತನ್ನ ಮಧ್ಯಂತರ ಆದೇಶವನ್ನು ಮೇ 17ರವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಸೀದಿ ಸಂಕೀರ್ಣದ ಹೊರಗೋಡೆಯ ಮೇಲಿರುವ ಮಾ ಶೃಂಗಾರ್ ಗೌರಿ ಸ್ಥಲಕ್ಕೆ ಪೂಜೆ ಸಲ್ಲಿಸುವ ಹಕ್ಕು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ವಾರಣಾಸಿ ನ್ಯಾಯಾಲಯವು ಏಪ್ರಿಲ್ 8ರಂದು ಆ ಸ್ಥಳದ ಪರಿಶೀಲನೆಗೆ ಅಡ್ವೊಕೇಟ್ ಕಮಿಷನರ್ ಅವರನ್ನು ನೇಮಿಸಿ, ವೀಡಿಯೋ ಸಮೀಕ್ಷೆಯನ್ನು ಸಿದ್ಧಪಡಿಸಲು ಸೂಚಿಸಿತ್ತು.

ಮಸೀದಿ ಸಮಿತಿಯು ಇದನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು, ಅಲಹಾಬಾದ್ ಹೈಕೋರ್ಟ್‌ ಏಪ್ರಿಲ್ 21 ರಂದು ಮೇಲ್ಮನವಿಯನ್ನು ವಜಾಗೊಳಿಸಿತು. ನಂತರ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಜ್ಞಾನವಾಪಿ ಸಾಲಿನಲ್ಲಿ ಸಲ್ಲಿಸಲಾದ ಎಲ್ಲಾ ಮೊಕದ್ದಮೆಗಳ ಕ್ರೋಢೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಹಿಂದೂ ಸಮಿತಿಗಳಿಗೆ ಅನುಮತಿ ನೀಡಿದೆ.

ಸರ್ವೆ ಕಮಿಷನರ್ ನೇಮಕಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ಮೂರು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಹಿಂದೂ ಸಮಿತಿಗಳಿಗೆ ಸೂಚಿಸಿದೆ.

 

Published On - 4:07 pm, Fri, 11 November 22

Web contact

TV9 Kannada

Read More
Follow Us