AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮ, ಜಾತಿಯ ಆಧಾರಕ್ಕಿಂತ ರಾಷ್ಟ್ರೀಯ ಏಕತೆ ಅಗತ್ಯ : ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಸದ್ಗುರು

ಪಹಲ್ಗಾಂನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯನ್ನು ಸದ್ಗುರು ಜಗ್ಗಿ ವಾಸುದೇವ್ ತೀವ್ರವಾಗಿ ಖಂಡಿಸಿದ್ದು, ಭಯೋತ್ಪಾದನೆಯು ಸಮಾಜವನ್ನು ಭಯಭೀತಗೊಳಿಸುವ ಉದ್ದೇಶ ಹೊಂದಿದೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಏಕತೆಯ ಅಗತ್ಯತೆಯನ್ನು ಒತ್ತಿ ಹೇಳಿ, ಧರ್ಮ, ಜಾತಿಯ ಆಧಾರದ ಮೇಲಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತುವಂತೆ ಮನವಿ ಮಾಡಿದ್ದಾರೆ.

ಧರ್ಮ, ಜಾತಿಯ ಆಧಾರಕ್ಕಿಂತ ರಾಷ್ಟ್ರೀಯ ಏಕತೆ ಅಗತ್ಯ : ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಸದ್ಗುರು
SadhguruImage Credit source: Pinterest
ಅಕ್ಷತಾ ವರ್ಕಾಡಿ
|

Updated on: Apr 24, 2025 | 3:33 PM

Share

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಮಂಗಳವಾರ ಉಗ್ರರ ಗುಂಡಿನ ದಾಳಿಯಿಂದ 26 ಪ್ರವಾಸಿಗರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದು,ಪುಲ್ವಾಮಾ ದಾಳಿಯ ನಂತರ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಈ ಭಯೋತ್ಪಾದಕ ದಾಳಿಗೆ ಇಶಾ ಫೌಂಡೇಶನ್ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಹೀನಾ ಕೃತ್ಯವನ್ನು ಅವರು ಹೇಡಿತನ ಎಂದು ಕರೆದಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ‘ಎಕ್ಸ್’ ನಲ್ಲಿ, ಭಯೋತ್ಪಾದನೆಯ ಗುರಿ ಯುದ್ಧವಲ್ಲ, ಬದಲಾಗಿ ಸಮಾಜವನ್ನು ಭಯದೆಡೆಗೆ ನೂಕುವುದು ಎಂದು ಅವರು ಹೇಳಿದ್ದಾರೆ.

ಭಯೋತ್ಪಾದಕರು ದೇಶದ ಆರ್ಥಿಕ ಪ್ರಗತಿಯನ್ನು ಹಳಿತಪ್ಪಿಸಲು ಮತ್ತು ಪ್ರತಿಯೊಂದು ಹಂತದಲ್ಲೂ ಅವ್ಯವಸ್ಥೆಯನ್ನು ಸೃಷ್ಟಿಸಲು ಬಯಸುತ್ತಾರೆ. ನಾವು ಈ ದೇಶದ ಸಾರ್ವಭೌಮತ್ವವನ್ನು ಕಾಪಾಡಿಕೊಳ್ಳಲು ಮತ್ತು ಪೋಷಿಸಲು ಬಯಸಿದರೆ, ಅಂತಹ ಅರಾಜಕತಾವಾದಿ ಅಂಶಗಳನ್ನು ಕಟ್ಟುನಿಟ್ಟಾಗಿ ಮತ್ತು ದೃಢನಿಶ್ಚಯದಿಂದ ಎದುರಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್ ಉಗ್ರ ದಾಳಿಯನ್ನು ಕೇಕ್ ತಿಂದು ಸಂಭ್ರಮಿಸಿತೇ ಭಾರತದಲ್ಲಿರುವ ಪಾಕ್ ಹೈಕಮಿಷನ್?

ಧರ್ಮದ ಆಧಾರದ ಮೇಲೆ ಹರಡುವ ಭಯೋತ್ಪಾದನೆ ತುಂಬಾ ಅಪಾಯಕಾರಿ. ಆದ್ದರಿಂದ ಧರ್ಮ, ಜಾತಿ, ಪಂಥಗಳ ಕಿರಿದಾದ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದು ರಾಷ್ಟ್ರವಾಗಿ ಒಟ್ಟಾಗಿ ನಿಲ್ಲುವುದು ಸದ್ಯಕ್ಕೆ ಬಹಳ ಮುಖ್ಯ ಅವರು ಹೇಳಿದರು. ಮೃತರಿಗೆ ಮತ್ತು ಗಾಯಾಳುಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!