AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ 7ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿ ಕಾಶ್ಮೀರ ಪ್ರತ್ಯೇಕ ದೇಶವೆಂದು ಪ್ರಸ್ತಾಪ; ಬಿಜೆಪಿ ಆಕ್ರೋಶ

ಬಿಹಾರ ಸರ್ಕಾರವು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸುವುದಿಲ್ಲ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

ಬಿಹಾರದ 7ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿ ಕಾಶ್ಮೀರ ಪ್ರತ್ಯೇಕ ದೇಶವೆಂದು ಪ್ರಸ್ತಾಪ; ಬಿಜೆಪಿ ಆಕ್ರೋಶ
ಬಿಹಾರದ 7ನೇ ತರಗತಿಯ ಪ್ರಶ್ನೆಪತ್ರಿಕೆ
TV9 Web
| Edited By: |

Updated on: Oct 19, 2022 | 11:21 AM

Share

ಬಿಹಾರ: ಬಿಹಾರದ (Bihar) ಕಿಶನ್‌ಗಂಜ್ ಜಿಲ್ಲೆಯಲ್ಲಿ 7ನೇ ತರಗತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಹಾರ ಎಜುಕೇಶನ್ ಪ್ರಾಜೆಕ್ಟ್ ಕೌನ್ಸಿಲ್ ನಡೆಸಿದ ಸಮೀಕ್ಷೆಯಲ್ಲಿ ಕಾಶ್ಮೀರವನ್ನು ಪ್ರತ್ಯೇಕ ದೇಶ ಎಂದು ಹೇಳುವ ಮೂಲಕ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿದ್ದಂತೆ ಬಿಹಾರದ ಸಿಎಂ ನಿತೀಶ್ ಕುಮಾರ್ (CM Nitish Kumar) ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದೆಲ್ಲ ನಡೆಯುವುದು ಸೀಮಾಂಚಲ್‌ನಲ್ಲಿ ಮಾತ್ರ ಎಂದು ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಟೀಕಿಸಿದ್ದಾರೆ.

ಬಿಹಾರ ಸರ್ಕಾರವು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸುವುದಿಲ್ಲ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ. 7ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾದ ಪ್ರಶ್ನೆ ಪತ್ರಿಕೆಯಲ್ಲಿ ಈ ದೇಶಗಳ ಜನರನ್ನು ಏನೆಂದು ಕರೆಯುತ್ತಾರೆ? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಅದರ ಕೆಳಗೆ ತಲಾ 2 ಅಂಕದಂತೆ 5 ಪ್ರಶ್ನೆಗಳನ್ನು ನೀಡಲಾಗಿತ್ತು. ಅದರಲ್ಲಿ ಚೀನಾ, ನೇಪಾಳ, ಇಂಗ್ಲೆಂಡ್ ಮತ್ತು ಭಾರತದೊಂದಿಗೆ ಕಾಶ್ಮೀರ ದೇಶದ ಜನರನ್ನು ಏನೆಂದು ಕರೆಯುತ್ತಾರೆ? ಎಂಬ ಆಯ್ಕೆಯನ್ನು ಸಹ ನೀಡಲಾಗಿತ್ತು. ಇದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ

ಇದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಡಾ. ಸಂಜಯ್ ಜೈಸ್ವಾಲ್ ಬಿಹಾರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶುಕ್ರವಾರ ಸೀಮಾಂಚಲ್ ಪ್ರದೇಶದಾದ್ಯಂತ ಹಿಂದಿ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈಗ ಈ 7ನೇ ತರಗತಿಯ ಮಕ್ಕಳಿಗೆ ನೇಪಾಳ, ಚೀನಾ, ಇಂಗ್ಲೆಂಡ್, ಹಿಂದೂಸ್ತಾನ್ ಮತ್ತು ಕಾಶ್ಮೀರದಲ್ಲಿ ಜನರನ್ನು ಏನು ಕರೆಯುತ್ತಾರೆ ಎಂದು ಕೇಳಲಾಗಿದೆ. ಬಿಹಾರ ಕಾಶ್ಮೀರವನ್ನು ಭಾರತದ ಭಾಗವೆಂದು ಒಪ್ಪಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.

ಬಿಹಾರ ಸರ್ಕಾರ ಮತ್ತು ಬಿಹಾರ ಸರ್ಕಾರದ ಸರ್ಕಾರಿ ಅಧಿಕಾರಿಗಳು ಕಾಶ್ಮೀರವನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ ಎಂಬುದು ಈ ಪ್ರಶ್ನೆಯಿಂದಲೇ ಸ್ಪಷ್ಟವಾಗಿದೆ ಎಂದು ಜೈಸ್ವಾಲ್ ಮಂಗಳವಾರ ತಮ್ಮ ಫೇಸ್‌ಬುಕ್ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ. ಚೀನಾ, ಇಂಗ್ಲೆಂಡ್, ಭಾರತ ಮತ್ತು ನೇಪಾಳ ಒಂದೇ ದೇಶವಾಗಿರುವಂತೆಯೇ ಕಾಶ್ಮೀರವೂ ಒಂದು ರಾಷ್ಟ್ರ ಎಂದು ಮಕ್ಕಳಿಗೆ ಮನವರಿಕೆ ಮಾಡಿಕೊಡುವ 7ನೇ ತರಗತಿಯ ಬಿಹಾರ ಶಿಕ್ಷಣ ಯೋಜನಾ ಮಂಡಳಿಯ ಪ್ರಶ್ನಾವಳಿಯೇ ಇದಕ್ಕೆ ಸಾಕ್ಷಿ ಎಂದು ಅವರು ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್