AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡ್ಡವಿದೆ ಎಂದು ಕಾಶ್ಮೀರಿ ವೈದ್ಯನಿಗೆ ತಮಿಳುನಾಡಿನ ಮೆಡಿಕಲ್ ಕಾಲೇಜಿನಲ್ಲಿ ದಾಖಲಾತಿ ನಿರಾಕರಣೆ

ತಮಿಳುನಾಡಿನಲ್ಲಿ ಗಡ್ಡವನ್ನು ಶೇವ್ ಮಾಡಿಲ್ಲ ಎಂಬ ಕಾರಣದಿಂದ ಕಾಶ್ಮೀರಿ ವೈದ್ಯನಿಗೆ ವೈದ್ಯಕೀಯ ಕಾಲೇಜಿನಲ್ಲಿ ಸೀಟು ನಿರಾಕರಿಸಲಾಗಿದೆ. ವಿದ್ಯಾರ್ಥಿ ಸಂಘವು ಸಿಎಂ ಸ್ಟಾಲಿನ್ ಮಧ್ಯಪ್ರವೇಶ ಮಾಡಬೇಕೆಂದು ಕೋರಿದೆ. ಡಾ. ಜುಬೈರ್ ಅವರು NEET-SS ಕೌನ್ಸೆಲಿಂಗ್ ಮೂಲಕ ಡಾ. ಎನ್​ಬಿ (ನೆಫ್ರಾಲಜಿ) ಸೀಟು ಪಡೆದಿದ್ದರು. ಆದರೆ, ತಮಿಳುನಾಡಿನ ಕೊಯಮತ್ತೂರಿನ ಕೊವಾಯ್ ಮೆಡಿಕಲ್ ಸೆಂಟರ್ ಆ್ಯಂಡ್ ಹಾಸ್ಪಿಟಲ್ (KMCH)ಗೆ ದಾಖಲಾತಿಗೆ ಬಂದಾಗ ಗಡ್ಡ ಬಿಡುವುದನ್ನು ನಿಷೇಧಿಸುವ ನೀತಿಗೆ ಸಹಿ ಹಾಕುವಂತೆ ಕೇಳಲಾಯಿತು.

ಗಡ್ಡವಿದೆ ಎಂದು ಕಾಶ್ಮೀರಿ ವೈದ್ಯನಿಗೆ ತಮಿಳುನಾಡಿನ ಮೆಡಿಕಲ್ ಕಾಲೇಜಿನಲ್ಲಿ ದಾಖಲಾತಿ ನಿರಾಕರಣೆ
Beard
ಸುಷ್ಮಾ ಚಕ್ರೆ
|

Updated on: Jun 27, 2025 | 3:30 PM

Share

ಕೊಯಮತ್ತೂರು, ಜೂನ್ 27: ನೆಫ್ರಾಲಜಿ ಸ್ಪೆಷಲೈಸೇಷನ್​​ಗೆ ಸ್ಪರ್ಧಾತ್ಮಕವಾದ NEET-SS ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಮ್ಮು ಮತ್ತು ಕಾಶ್ಮೀರದ ವೈದ್ಯ ಜುಬೈರ್ ಅಹ್ಮದ್ ತಮಿಳುನಾಡಿನ (Tamil Nadu) ಕೊಯಮತ್ತೂರಿನ ಕೊವಾಯ್ ಕೊವಾಯ್ ಮೆಡಿಕಲ್ ಸೆಂಟರ್ ಆ್ಯಂಡ್ ಹಾಸ್ಪಿಟಲ್ (KMCH) ನಲ್ಲಿ ಕೌನ್ಸೆಲಿಂಗ್ ಸಮಯದಲ್ಲಿ ಅನಿರೀಕ್ಷಿತ ಆಘಾತ ಎದುರಾಯಿತು. ತಮ್ಮ ಮೆಡಿಕಲ್ ಕಾಲೇಜಿನ ಡ್ರೆಸ್ ಕೋಡ್ ಉಲ್ಲಂಘನೆಯನ್ನು ಉಲ್ಲೇಖಿಸಿ ಕಾಲೇಜು ಅಧಿಕಾರಿಗಳು ಆ ವೈದ್ಯ ಗಡ್ಡ ಬೋಳಿಸಿಕೊಳ್ಳದ ಹೊರತು ಅವರನ್ನು ಕಾಲೇಜಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅಹ್ಮದ್ ಅವರು ಗಡ್ಡ ಬೋಳಿಸುವೆನೆಂದು ಭರವಸೆಯನ್ನು ನೀಡಿದರೂ ತಮಿಳುನಾಡಿನ ಆಸ್ಪತ್ರೆ ಆಡಳಿತ ಸೀಟು ನೀಡಲು ನಿರಾಕರಿಸಿತು. ಅವರ 2 ಲಕ್ಷ ರೂ. ಅಡ್ಮಿಷನ್ ಡೆಪಾಸಿಟ್ ಅನ್ನು ಸಹ ತಡೆಹಿಡಿಯಿತು.

ಈ ಘಟನೆಯು ಧಾರ್ಮಿಕ ತಾರತಮ್ಯದ ಆರೋಪಗಳನ್ನು ಹುಟ್ಟುಹಾಕಿದೆ. ಏಕೆಂದರೆ ಗಡ್ಡವು ಅನೇಕ ಮುಸ್ಲಿಂ ಪುರುಷರಿಗೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದೀಗ ಕಾಶ್ಮೀರದ ವಿದ್ಯಾರ್ಥಿ ಸಂಘವು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಸಲ್ಲಿಸಿದ್ದು, ಕಾಲೇಜಿನ ಕ್ರಮಗಳು ಭಾರತೀಯ ಸಂವಿಧಾನದ 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಆವರಣದೊಳಗೆ ಸಾಮೂಹಿಕ ಅತ್ಯಾಚಾರ

ತಮ್ಮ ಪತ್ರದಲ್ಲಿ ವಿದ್ಯಾರ್ಥಿ ಸಂಘವು, ಶಿಕ್ಷಣ ಸಂಸ್ಥೆಗಳು ಮೂಲಭೂತ ಹಕ್ಕುಗಳೊಂದಿಗೆ ಸಂಘರ್ಷಿಸುವ ಡ್ರೆಸ್ ಕೋಡ್‌ಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ. “ಈ ನಿರಾಕರಣೆ ಧಾರ್ಮಿಕ ಪೂರ್ವಾಗ್ರಹದಿಂದ ಉಂಟಾಗಿದ್ದು, ಅದು ಅಪಾಯಕಾರಿಯಾಗಿದೆ” ಎಂದು ಒಕ್ಕೂಟದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.

ಮೂರನೇ ಸುತ್ತಿನ NEET ಕೌನ್ಸೆಲಿಂಗ್ ಸಮೀಪಿಸುತ್ತಿರುವುದರಿಂದ ಅಹ್ಮದ್ ಅವರು ತನ್ನ ಧಾರ್ಮಿಕ ಗುರುತನ್ನು ಗೌರವಿಸಿ ಪ್ರವೇಶ ನೀಡಬೇಕು ಅಥವಾ ತಾನು ಡೆಪಾಸಿಟ್ ಮಾಡಿದ ಹಣದ ಪೂರ್ಣ ಮರುಪಾವತಿಯನ್ನು ಮಾಡಬೇಕೆಂದು ಕೋರಿದ್ದಾರೆ. KMCH ಅಧಿಕಾರಿಗಳು ಇನ್ನೂ ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?
ಸನ್ಯಾಸಿ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ!
ಸನ್ಯಾಸಿ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ!