AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರಿ ಪಂಡಿತರು ಪಲಾಯನ ಮಾಡುತ್ತಿದ್ದಾರೆ, ಶಾಂತಿ ನೆಲೆಸಲು ಕ್ರಮಕೈಗೊಳ್ಳಿ: ಮೋದಿಗೆ ರಾಹುಲ್ ಗಾಂಧಿ ಒತ್ತಾಯ

ಬ್ಯಾಂಕ್ ಮ್ಯಾನೇಜರ್, ಶಿಕ್ಷಕರು ಮತ್ತು ಅನೇಕ ಅಮಾಯಕರು ಪ್ರತಿದಿನ ಹತ್ಯೆಯಾಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಪಲಾಯನ ಮಾಡುತ್ತಿದ್ದಾರೆ. ಅವರನ್ನು ಕಾಪಾಡಬೇಕಾದವರಿಗೆ ಸಮಯವಿಲ್ಲ, ಅವರು ಸಿನಿಮಾ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಕಾಶ್ಮೀರಿ ಪಂಡಿತರು ಪಲಾಯನ ಮಾಡುತ್ತಿದ್ದಾರೆ, ಶಾಂತಿ ನೆಲೆಸಲು ಕ್ರಮಕೈಗೊಳ್ಳಿ: ಮೋದಿಗೆ ರಾಹುಲ್ ಗಾಂಧಿ ಒತ್ತಾಯ
ರಾಹುಲ್ ಗಾಂಧಿ
TV9 Web
| Edited By: |

Updated on: Jun 02, 2022 | 10:53 PM

Share

ದೆಹಲಿ: ಕಾಶ್ಮೀರದಲ್ಲಿ ಮುಗ್ಧರು ಬಲಿಯಾಗುತ್ತಿದ್ದು, ಕಾಶ್ಮೀರಿ ಪಂಡಿತರು (Kashmiri Pandits) ಪಲಾಯನ ಮಾಡುತ್ತಿದ್ದಾರೆ ಎಂದಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೂಡಲೇ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ (Narendra Modi) ಒತ್ತಾಯಿಸಿದ್ದಾರೆ. “ಬ್ಯಾಂಕ್ ಮ್ಯಾನೇಜರ್, ಶಿಕ್ಷಕರು ಮತ್ತು ಅನೇಕ ಅಮಾಯಕರು ಪ್ರತಿದಿನ ಹತ್ಯೆಯಾಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಪಲಾಯನ ಮಾಡುತ್ತಿದ್ದಾರೆ. ಅವರನ್ನು ಕಾಪಾಡಬೇಕಾದವರಿಗೆ ಸಮಯವಿಲ್ಲ, ಅವರು ಸಿನಿಮಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಬಿಜೆಪಿಯು ಅಧಿಕಾರ ಪಡೆಯಲು ಮಾತ್ರ ಕಾಶ್ಮೀರ ಬಗ್ಗೆ ಮಾತನಾಡುತ್ತದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿಯವರೇ, ಕಾಶ್ಮೀರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಿ ಎಂದಿದ್ದಾರೆ ರಾಹುಲ್. ಕಳೆದ ಕೆಲವು ದಿನಗಳಲ್ಲಿ ಹತ್ಯೆಯಾದವರ ಕೊಲಾಜ್ ಅನ್ನು ಹಂಚಿಕೊಂಡಿರುವ ರಾಹುಲ್ “ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳು ಭಯಾನಕತೆ” ಎಂದು ಹೇಳಿದ್ದಾರೆ.  ಕೇಂದ್ರಾಡಳಿತ ಪ್ರದೇಶದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಉದ್ದೇಶಿತ ಹತ್ಯೆಗಳು ನಡೆಯುತ್ತಲೇ ಇದೆ ಗುರುವಾರ ಕುಲ್ಗಾಮ್ ಜಿಲ್ಲೆಯಲ್ಲಿ ಇಲಕ್ವೈ ದೇಹತಿ ಬ್ಯಾಂಕ್‌ನ ವ್ಯವಸ್ಥಾಪಕ ವಿಜಯ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಕುಮಾರ್ ರಾಜಸ್ಥಾನ ಮೂಲದವರಾಗಿದ್ದಾರೆ.

ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಣಿವೆಯಿಂದ ಪಲಾಯನ ಮಾಡುವಾಗ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಕಾಶ್ಮೀರಿ ಪಂಡಿತರು ಸರತಿ ಸಾಲಿನಲ್ಲಿ ನಿಂತಿರುವ ಫೋಟೊಗಳಿರುವ ಮಾಧ್ಯಮ ವರದಿಗಳನ್ನು ಹಂಚಿಕೊಂಡಿದ್ದಾರೆ.

100 ಕಾಶ್ಮೀರಿ ಹಿಂದೂ ಕುಟುಂಬಗಳು ವಲಸೆ ಹೋಗಿವೆ. ಭಯಭೀತರಾದ ಜನಸಮೂಹವಿರುವುದು ಉಕ್ರೇನ್ ನಲ್ಲಿ ಅಲ್ಲ ಶ್ರೀನಗರ ವಿಮಾನ ನಿಲ್ದಾಣದಲ್ಲಿ! ಇಂದು ಮತ್ತೆ ಭಯೋತ್ಪಾದಕರು ರಾಜಸ್ಥಾನದ ನೋಹರ್ ನಿವಾಸಿ ವಿಜಯ್ ಬೇನಿವಾಲ್ ಎಂಬ ಬ್ಯಾಂಕ್ ಮ್ಯಾನೇಜರ್ ಅವರನ್ನು ಹತ್ಯೆ ಮಾಡಿದ್ದಾರೆ. ‘ಪ್ರಜಾಪ್ರಭುತ್ವದ ವಿಘಟನೆ’ಯಲ್ಲಿ ತೊಡಗಿರುವ ರಾಜಸ್ಥಾನದ ಬಿಜೆಪಿ ನಾಯಕರು ಮೋದಿಯವರಿಂದ ಕ್ರಮಕ್ಕೆ ಏಕೆ ಒತ್ತಾಯಿಸುವುದಿಲ್ಲ” ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ