AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಫೋನ್ ಕದ್ದಾಲಿಕೆ; ಬಿಜೆಪಿಯ ಬಿಎಲ್ ಸಂತೋಷ್ ಅವರನ್ನು ಬಂಧಿಸಲು ಕೆಸಿಆರ್ ಪ್ಲಾನ್ ಮಾಡಿದ್ದು ಬಯಲು

ಮಾಜಿ ಉಪ ಪೊಲೀಸ್ ಆಯುಕ್ತ ಪಿ. ರಾಧಾಕೃಷ್ಣ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆ ಪ್ರಕಾರ, ಫೋನ್ ಕದ್ದಾಲಿಕೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ 'ಪೆದ್ದಯ್ಯನ' (ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಬಂಧಿಸಲು ಪ್ಲಾನ್ ಮಾಡಿದ್ದರು.

ತೆಲಂಗಾಣ ಫೋನ್ ಕದ್ದಾಲಿಕೆ; ಬಿಜೆಪಿಯ ಬಿಎಲ್ ಸಂತೋಷ್ ಅವರನ್ನು ಬಂಧಿಸಲು ಕೆಸಿಆರ್ ಪ್ಲಾನ್ ಮಾಡಿದ್ದು ಬಯಲು
ಕೆ. ಚಂದ್ರಶೇಖರ್ ರಾವ್
ಸುಷ್ಮಾ ಚಕ್ರೆ
|

Updated on: May 28, 2024 | 5:05 PM

Share

ಹೈದರಾಬಾದ್: ತೆಲಂಗಾಣ ಫೋನ್ ಸ್ನೂಪಿಂಗ್ ಪ್ರಕರಣದ (Telangana Phone Tapping Case) ವಿಚಾರಣೆಯ ವೇಳೆ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಆಗಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (K Chandrashekar Rao) ಅವರು ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ (BL Santosh) ಅವರನ್ನು ಬಂಧಿಸುವ ಮೂಲಕ ಬಿಜೆಪಿ ಮೇಲೆ ಒತ್ತಡ ಹೇರಲು ಬಯಸಿದ್ದರು.

ಮಾಜಿ ಉಪ ಪೊಲೀಸ್ ಕಮಿಷನರ್ ಪಿ. ರಾಧಾಕೃಷ್ಣ ರಾವ್ ಅವರು 6 ಪುಟಗಳ ತಪ್ಪೊಪ್ಪಿಗೆಯಲ್ಲಿ ಈ ಆರೋಪಗಳನ್ನು ಮಾಡಿದ್ದಾರೆ. ಬಿ.ಎಲ್ ಸಂತೋಷ್ ಅವರನ್ನು ಒಂದುವೇಳೆ ಬಂಧಿಸಿದರೆ ಆ ನೆಪದಲ್ಲಿ ದೆಹಲಿ ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಭಾಗಿಯಾಗಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ತಮ್ಮ ಮಗಳು ಕೆ. ಕವಿತಾ ಅವರನ್ನು ಬಿಡುಗಡೆ ಮಾಡಲು ಒತ್ತಡ ಹೇರಬಹುದು ಎಂಬುದು ಕೆಸಿಆರ್​ ಪ್ಲಾನ್ ಆಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ತೆಲಂಗಾಣ: ಮಗನ ಮಾತು ಕೇಳದೆ ಚುನಾವಣೆಯಲ್ಲಿ ಸೋಲು ತಂದುಕೊಂಡ್ರಾ ಕೆಸಿಆರ್​

ಈ ಬಗ್ಗೆ ಪೊಲೀಸ್ ಇಲಾಖೆಯ ಮಾಜಿ ಉಪ ಆಯುಕ್ತ ಪಿ. ರಾಧಾಕೃಷ್ಣ ರಾವ್ ಮಾಡಿದ ತಪ್ಪೊಪ್ಪಿಗೆಯಲ್ಲಿ ತಿಳಿಸಲಾಗಿದೆ. ಅವರನ್ನು ಮಾರ್ಚ್‌ನಲ್ಲಿ ಅವರ ಬಂಜಾರಾ ಹಿಲ್ಸ್ ಹೈದರಾಬಾದ್ ಮನೆಯಿಂದ ಬಂಧಿಸಲಾಯಿತು.

ಆಗ ಟಿ. ಪ್ರಭಾಕರ್ ರಾವ್ ಅವರು ವಿಶೇಷ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿದ್ದರು ಮತ್ತು ಅಕ್ರಮ ಫೋನ್ ಕದ್ದಾಲಿಕೆ ಕಾರ್ಯಾಚರಣೆಯನ್ನು ಮಾಜಿ ಮುಖ್ಯಮಂತ್ರಿ ವಹಿಸಿದ್ದರು ಎಂದು ವರದಿಯಾಗಿದೆ. ಪ್ರಭಾಕರ್ ರಾವ್ ಶೀಘ್ರದಲ್ಲೇ ಯುನೈಟೆಡ್ ಸ್ಟೇಟ್ಸ್‌ನಿಂದ ಹಿಂತಿರುಗುವ ನಿರೀಕ್ಷೆಯಿದೆ. ಅವರನ್ನು ಈ ಪ್ರಕರಣದಲ್ಲಿ ‘ಆರೋಪಿ ನಂ 1’ ಎಂದು ಹೆಸರಿಸಲಾಗಿದೆ.

ಇದನ್ನೂ ಓದಿ: Lok Sabha Polls 2024: ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ

ಬಿಆರ್​ಎಸ್​ ಎಸ್​ಐಟಿ ಅಥವಾ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ಈ ತಂಡವನ್ನು ಕೆ. ಚಂದ್ರಶೇಖರ್ ರಾವ್ ಅವರು ಬಿಜೆಪಿಯ ಬಿ.ಎಲ್. ಸಂತೋಷ್ ಅವರನ್ನು ಬಂಧಿಸಲು ಬಳಸಲು ಬಯಸಿದ್ದರು ಎಂದು ವರದಿಯಾಗಿದೆ. ಬಿ.ಎಲ್. ಸಂತೋಷ್ ಅವರನ್ನು ಈ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾಯಿತು. ಆದರೆ, ತೆಲಂಗಾಣ ಹೈಕೋರ್ಟ್‌ನಿಂದ ತಡೆಯಾಜ್ಞೆಯ ನಂತರ, ಅಧಿಕಾರಿಗಳು ನವೆಂಬರ್ 2022ರಲ್ಲಿ ಈ ವಿಷಯದಲ್ಲಿ ಅವರನ್ನು ಪ್ರಶ್ನಿಸಲಾಗುವುದಿಲ್ಲ ಎಂದು ದೃಢಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ