AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಫೋನ್ ಕದ್ದಾಲಿಕೆ; ಬಿಜೆಪಿಯ ಬಿಎಲ್ ಸಂತೋಷ್ ಅವರನ್ನು ಬಂಧಿಸಲು ಕೆಸಿಆರ್ ಪ್ಲಾನ್ ಮಾಡಿದ್ದು ಬಯಲು

ಮಾಜಿ ಉಪ ಪೊಲೀಸ್ ಆಯುಕ್ತ ಪಿ. ರಾಧಾಕೃಷ್ಣ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆ ಪ್ರಕಾರ, ಫೋನ್ ಕದ್ದಾಲಿಕೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ 'ಪೆದ್ದಯ್ಯನ' (ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಬಂಧಿಸಲು ಪ್ಲಾನ್ ಮಾಡಿದ್ದರು.

ತೆಲಂಗಾಣ ಫೋನ್ ಕದ್ದಾಲಿಕೆ; ಬಿಜೆಪಿಯ ಬಿಎಲ್ ಸಂತೋಷ್ ಅವರನ್ನು ಬಂಧಿಸಲು ಕೆಸಿಆರ್ ಪ್ಲಾನ್ ಮಾಡಿದ್ದು ಬಯಲು
ಕೆ. ಚಂದ್ರಶೇಖರ್ ರಾವ್
ಸುಷ್ಮಾ ಚಕ್ರೆ
|

Updated on: May 28, 2024 | 5:05 PM

Share

ಹೈದರಾಬಾದ್: ತೆಲಂಗಾಣ ಫೋನ್ ಸ್ನೂಪಿಂಗ್ ಪ್ರಕರಣದ (Telangana Phone Tapping Case) ವಿಚಾರಣೆಯ ವೇಳೆ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಆಗಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (K Chandrashekar Rao) ಅವರು ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ (BL Santosh) ಅವರನ್ನು ಬಂಧಿಸುವ ಮೂಲಕ ಬಿಜೆಪಿ ಮೇಲೆ ಒತ್ತಡ ಹೇರಲು ಬಯಸಿದ್ದರು.

ಮಾಜಿ ಉಪ ಪೊಲೀಸ್ ಕಮಿಷನರ್ ಪಿ. ರಾಧಾಕೃಷ್ಣ ರಾವ್ ಅವರು 6 ಪುಟಗಳ ತಪ್ಪೊಪ್ಪಿಗೆಯಲ್ಲಿ ಈ ಆರೋಪಗಳನ್ನು ಮಾಡಿದ್ದಾರೆ. ಬಿ.ಎಲ್ ಸಂತೋಷ್ ಅವರನ್ನು ಒಂದುವೇಳೆ ಬಂಧಿಸಿದರೆ ಆ ನೆಪದಲ್ಲಿ ದೆಹಲಿ ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಭಾಗಿಯಾಗಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ತಮ್ಮ ಮಗಳು ಕೆ. ಕವಿತಾ ಅವರನ್ನು ಬಿಡುಗಡೆ ಮಾಡಲು ಒತ್ತಡ ಹೇರಬಹುದು ಎಂಬುದು ಕೆಸಿಆರ್​ ಪ್ಲಾನ್ ಆಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ತೆಲಂಗಾಣ: ಮಗನ ಮಾತು ಕೇಳದೆ ಚುನಾವಣೆಯಲ್ಲಿ ಸೋಲು ತಂದುಕೊಂಡ್ರಾ ಕೆಸಿಆರ್​

ಈ ಬಗ್ಗೆ ಪೊಲೀಸ್ ಇಲಾಖೆಯ ಮಾಜಿ ಉಪ ಆಯುಕ್ತ ಪಿ. ರಾಧಾಕೃಷ್ಣ ರಾವ್ ಮಾಡಿದ ತಪ್ಪೊಪ್ಪಿಗೆಯಲ್ಲಿ ತಿಳಿಸಲಾಗಿದೆ. ಅವರನ್ನು ಮಾರ್ಚ್‌ನಲ್ಲಿ ಅವರ ಬಂಜಾರಾ ಹಿಲ್ಸ್ ಹೈದರಾಬಾದ್ ಮನೆಯಿಂದ ಬಂಧಿಸಲಾಯಿತು.

ಆಗ ಟಿ. ಪ್ರಭಾಕರ್ ರಾವ್ ಅವರು ವಿಶೇಷ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿದ್ದರು ಮತ್ತು ಅಕ್ರಮ ಫೋನ್ ಕದ್ದಾಲಿಕೆ ಕಾರ್ಯಾಚರಣೆಯನ್ನು ಮಾಜಿ ಮುಖ್ಯಮಂತ್ರಿ ವಹಿಸಿದ್ದರು ಎಂದು ವರದಿಯಾಗಿದೆ. ಪ್ರಭಾಕರ್ ರಾವ್ ಶೀಘ್ರದಲ್ಲೇ ಯುನೈಟೆಡ್ ಸ್ಟೇಟ್ಸ್‌ನಿಂದ ಹಿಂತಿರುಗುವ ನಿರೀಕ್ಷೆಯಿದೆ. ಅವರನ್ನು ಈ ಪ್ರಕರಣದಲ್ಲಿ ‘ಆರೋಪಿ ನಂ 1’ ಎಂದು ಹೆಸರಿಸಲಾಗಿದೆ.

ಇದನ್ನೂ ಓದಿ: Lok Sabha Polls 2024: ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ

ಬಿಆರ್​ಎಸ್​ ಎಸ್​ಐಟಿ ಅಥವಾ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ಈ ತಂಡವನ್ನು ಕೆ. ಚಂದ್ರಶೇಖರ್ ರಾವ್ ಅವರು ಬಿಜೆಪಿಯ ಬಿ.ಎಲ್. ಸಂತೋಷ್ ಅವರನ್ನು ಬಂಧಿಸಲು ಬಳಸಲು ಬಯಸಿದ್ದರು ಎಂದು ವರದಿಯಾಗಿದೆ. ಬಿ.ಎಲ್. ಸಂತೋಷ್ ಅವರನ್ನು ಈ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾಯಿತು. ಆದರೆ, ತೆಲಂಗಾಣ ಹೈಕೋರ್ಟ್‌ನಿಂದ ತಡೆಯಾಜ್ಞೆಯ ನಂತರ, ಅಧಿಕಾರಿಗಳು ನವೆಂಬರ್ 2022ರಲ್ಲಿ ಈ ವಿಷಯದಲ್ಲಿ ಅವರನ್ನು ಪ್ರಶ್ನಿಸಲಾಗುವುದಿಲ್ಲ ಎಂದು ದೃಢಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?