AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸಿಎಂ ಕೆಸಿಆರ್​ ಘೋಷಿಸಿದ ಏರ್​ಪೋರ್ಟ್​ ಎಕ್ಸ್​ಪ್ರೆಸ್​ ಮೆಟ್ರೋ ಕೇವಲ ವಿಷಯಾಂತರದ ಹುನ್ನಾರ: ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ

‘ಹೈದರಾಬಾದ್​ ಮೆಟ್ರೋ ನಿರ್ಮಾಣ ವಿಚಾರದಲ್ಲಿ ಕೆಸಿಆರ್ ಎಡವಿದ್ದಾರೆ. ಅವರು ತಮ್ಮ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಸತತ ಪ್ರಯತ್ನ ನಡೆಸುತ್ತಿದ್ದಾರೆ’ ಎಂದು ಕಿಶನ್ ರೆಡ್ಡಿ ಹೇಳಿದರು.

ತೆಲಂಗಾಣ ಸಿಎಂ ಕೆಸಿಆರ್​ ಘೋಷಿಸಿದ ಏರ್​ಪೋರ್ಟ್​ ಎಕ್ಸ್​ಪ್ರೆಸ್​ ಮೆಟ್ರೋ ಕೇವಲ ವಿಷಯಾಂತರದ ಹುನ್ನಾರ: ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ
ಜಿ ಕಿಶನ್ ರೆಡ್ಡಿ
TV9 Web
| Edited By: |

Updated on: Dec 09, 2022 | 10:16 AM

Share

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (K Chandrashekhar Rao) ಅವರು ಏರ್​ಪೋರ್ಟ್​ ಎಕ್ಸ್​ಪ್ರೆಸ್​ ಮೆಟ್ರೋಗೆ ಶಿಲಾನ್ಯಾಸ ನೆರವೇರಿಸುವ ಮೂಲಕ ವಿಷಯಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಈಶಾನ್ಯ ಪ್ರದೇಶ ಅಭಿವೃದ್ಧಿ ಖಾತೆ ಸಚಿವ ಜಿ.ಕಿಶನ್ ರೆಡ್ಡಿ (G Kishan Reddy) ಆರೋಪಿಸಿದರು. ಹೈದರಾಬಾದ್​ ಮೆಟ್ರೋ ಯೋಜನೆಯನ್ನು ಪೂರ್ಣಗೊಳಿಸಲು ವಿಫಲರಾಗಿರುವ ಅವರು, ಹೈದರಾಬಾದ್​ನ ಬಹುಮಾದರಿ ಸಾರಿಗೆ ವ್ಯವಸ್ಥೆಗೆ (Hyderabad Multi-Modal Transport System – MMTS) ರಾಜ್ಯದ ಪಾಲಿನ ಅನುದಾನ ನೀಡುವಲ್ಲಿಯೂ ಎಡವಿದರು. ಇದೀಗ ತಮ್ಮ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಏರ್​ಪೋರ್ಟ್​ ಎಕ್ಸ್​ಪ್ರೆಸ್ ಮೆಟ್ರೋಗೆ ಅಡಿಗಲ್ಲು ಹಾಕಿದ್ದಾರೆ ಎಂದು ದೂರಿದರು. ಡಿಸೆಂಬರ್ 9ರಂದು ಏರ್​ಪೋರ್ಟ್​ ಮೆಟ್ರೋಗೆ ಶಿಲಾನ್ಯಾಸ ನೆರವೇರಿಸುವುದಾಗಿ ಕೆಸಿಆರ್ ಘೋಷಿಸಿದ್ದರು.

‘ಹೈದರಾಬಾದ್​ ಮೆಟ್ರೋ ನಿರ್ಮಾಣ ವಿಚಾರದಲ್ಲಿ ಕೆಸಿಆರ್ ಎಡವಿದ್ದಾರೆ. ಇದೀಗ ಹೊಸದಾಗಿ ಮತ್ತೊಂದು ಮೆಟ್ರೋ ಲೈನ್​ಗೆ ಅಡಿಗಲ್ಲು ಹಾಕಿರುವ ಅವರ ನಡೆಯಿಂದ ನಮಗೆ ಅಚ್ಚರಿಯೇನೂ ಆಗಿಲ್ಲ. ಅವರು ತಮ್ಮ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಸತತ ಪ್ರಯತ್ನ ನಡೆಸುತ್ತಿದ್ದಾರೆ’ ಎಂದು ಕಿಶನ್ ರೆಡ್ಡಿ ಹೇಳಿದರು.

‘ಹೈದರಾಬಾದ್​ ಮೆಟ್ರೋದ ಗ್ರೀನ್​ ಲೈನ್ (ಕಾರಿಡಾರ್-2) ಸಿಕಂದರಾಬಾದ್​ನ ಜುಬಿಲಿ ಬಸ್ ನಿಲ್ದಾಣದಿಂದ ಹೈದರಾಬಾದ್​ನ ಓಲ್ಡ್​ ಸಿಟಿಯನ್ನು ಚಾರ್​ಮಿನಾರ್ ಮಾರ್ಗವಾಗಿ ಸಂಪರ್ಕ ಕಲ್ಪಿಸಬೇಕಿತ್ತು. ಅದೇ ರೀತಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಒಪ್ಪಂದವೂ ಆಗಿತ್ತು. ಆದರೆ, ಹೈದರಾಬಾದ್​ನ ಮಹಾತ್ಮಾ ಗಾಂಧಿ ಬಸ್ ನಿಲ್ದಾಣದ ಅಫ್ಜಲ್​ ಗಂಜ್ ಬಳಿಯೇ ಗ್ರೀನ್​ ಲೈನ್ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದಾಗಿ ಓಲ್ಡ್​ ಸಿಟಿಯ ಪಶ್ಚಿಮ ಭಾಗದಲ್ಲಿರುವ ಜನರು ಹಲವು ಕಷ್ಟಗಳನ್ನು ಅನುಭವಿಸುವಂತಾಗಿದೆ. ಓಲ್ಡ್​ ಸಿಟಿಯ ಪೂರ್ವ ಭಾಗದಲ್ಲಿರುವ ಜನರು ಮಾಲಕ್​ಪೆಟ್ ಮೆಟ್ರೋ ಸ್ಟೇಷನ್ ಮೆಟ್ರೋ ಜಾಲವನ್ನು ಬಳಸಿಕೊಳ್ಳಬಹುದಾಗಿದೆ. ಆದರೆ ಓಲ್ಡ್ ಸಿಟಿಯ ಪಶ್ಚಿಮ ಭಾಗದಲ್ಲಿರುವವರು ಮೆಟ್ರೋ ಮತ್ತು ಎಂಎಂಟಿಎಸ್​ ಸಂಪರ್ಕಕ್ಕಾಗಿ ಹೆಚ್ಚಿನ ಹಣ ಮತ್ತು ಸಮಯವನ್ನು ವ್ಯಯಿಸಬೇಕಾಗಿದೆ’ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.

‘ಅನುಮೋದನೆಗೊಂಡಿದ್ದ ಯೋಜನೆಯನ್ನು ಮುಖ್ಯಮಂತ್ರಿ ಏಕಪಕ್ಷೀಯವಾಗಿ ಬದಲಿಸಿದರು. ಇದರಿಂದಾಗಿ ಯೋಜನಾ ವೆಚ್ಚವು ₹ 3,500 ಕೋಟಿಗಳಷ್ಟು ಹೆಚ್ಚಾಯಿತು. ಯೋಜನೆ ಪೂರ್ಣಗೊಳ್ಳುವುದೂ ತಡವಾಯಿತು. ಈ ಮೊದಲು ಯೋಜನೆಯು 2016ಕ್ಕೆ ಪೂರ್ಣಗೊಂಡು ಅನುಷ್ಠಾನಗೊಳ್ಳಬೇಕು ಎಂಬ ಲೆಕ್ಕಾಚಾರವಿತ್ತು. ಅನುಷ್ಠಾನದಲ್ಲಿರುವ ಯೋಜನೆಗಳನ್ನು ಪೂರ್ಣಗೊಳಿಸುವ ಮೊದಲೇ ತೆಲಂಗಾಣ ಸರ್ಕಾರವು ಹೊಸ ಯೋಜನೆಗಳನ್ನು ಪ್ರಕಟಿಸುವ ಮೂಲಕ ಜನರ ಗಮನ ಬದಲಿಸಲು ಯತ್ನಿಸುತ್ತಿದೆ. ಮೆಟ್ರೋ ರೈಲು ಯೋಜನೆ ಪೂರ್ಣಗೊಳಿಸಲು ಸಾಧ್ಯವಾಗದ ಮತ್ತು ಹೈದರಾಬಾದ್​ ಎಂಎಂಟಿಎಸ್ ಯೋಜನೆಗೆ ರಾಜ್ಯದ ಪಾಲಿನ ಬಂಡವಾಳ ಒದಗಿಸಲು ವಿಫಲವಾದ ಸರ್ಕಾರವು ಹೊಸ ಯೋಜನೆ ಪ್ರಕಟಿಸುತ್ತಿದೆ’ ಎಂದು ಅವರು ಆಕ್ಷೇಪಿಸಿದ್ದಾರೆ.

‘ಎಂಎಂಟಿಎಸ್ 2ನೇ ಹಂತದ ಕಾಮಗಾರಿಯ ಬಗ್ಗೆ ದಕ್ಷಿಣ ಮಧ್ಯ ರೈಲ್ವೆ ಮತ್ತು ತೆಲಂಗಾಣ ಸರ್ಕಾರದ ನಡುವೆ ಒಡಂಬಡಿಕೆಯಾಗಿತ್ತು. ಈ ಯೋಜನೆಗಾಗಿ ಈವರೆಗೆ ₹ 832 ಕೋಟಿ ಮೊತ್ತವನ್ನು ವ್ಯಯಿಸಲಾಗಿದೆ. ಕಾಮಗಾರಿಯ ಒಟ್ಟು ಮೊತ್ತದ ಮೂರನೇ ಎರಡರಷ್ಟು ಭಾಗವನ್ನು ರಾಜ್ಯ ಸರ್ಕಾರವು ನೀಡಬೇಕಿತ್ತು. ಆದರೆ ಈ ಹಣ ನೀಡಲು ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಕಾಮಗಾರಿ ಅನುಷ್ಠಾನ ತಡವಾಯಿತು. ಇದರಿಂದಾಗಿ ಕಾಮಗಾರಿ ವೆಚ್ಚವೂ ವಿಪರೀತ ಎನ್ನುವಷ್ಟು ಹೆಚ್ಚಾಯಿತು’ ಎಂದು ಕಿಶನ್ ರೆಡ್ಡಿ ವಿವರಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!