AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಆದೇಶದ ಮೂಲಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ: ಒಮರ್ ಅಬ್ದುಲ್ಲಾ

ಇದು ಬೇಸರದ ಸಂಗತಿ, ಯಾವುದನ್ನು ಧರಿಸಬೇಕು ಯಾವುದನ್ನು ಧರಿಸಬಾರದು ಎಂಬುದಕ್ಕೆ ಸರ್ಕಾರವು ಮಧ್ಯಪ್ರವೇಶಿಸುತ್ತಿರುವುದೇಕೆ? ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ಆದೇಶಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಇದು ಸಂಭವಿಸಿದಾಗ, ಇದು ಬಿಜೆಪಿ ಸರ್ಕಾರವಾಗಿರುವುದರಿಂದ ನಮಗೆ ಆಶ್ಚರ್ಯವಾಗಲಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಆದೇಶಗಳು ಬಿಡುಗಡೆಯಾಗುತ್ತಿರುವುದು ಬೇಸರ ತಂದಿದೆ.

ಕೆಇಎ ಆದೇಶದ ಮೂಲಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ: ಒಮರ್ ಅಬ್ದುಲ್ಲಾ
ಓಮರ್ ಅಬ್ದುಲ್ಲಾ
ರಶ್ಮಿ ಕಲ್ಲಕಟ್ಟ
|

Updated on:Nov 14, 2023 | 7:40 PM

Share

ಬಾರಾಮುಲ್ಲಾ ನವೆಂಬರ್ 14 : ಮುಂಬರುವ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಹಾಲ್‌ನೊಳಗೆ ತಲೆ ಮುಚ್ಚುವ ವಸ್ತ್ರನಿಷೇಧಿಸುವ ರಾಜ್ಯದ ಪರೀಕ್ಷಾ ಪ್ರಾಧಿಕಾರದ ನಿರ್ಧಾರಕ್ಕೆ ಕರ್ನಾಟಕದ(Karnataka) ಕಾಂಗ್ರೆಸ್ (Congress) ಸರ್ಕಾರವನ್ನು ಟೀಕಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ (Omar Abdullah), ನಿರ್ದಿಷ್ಟವಾಗಿ ಮುಸ್ಲಿಮರನ್ನು ಗುರಿಯಾಗಿಸಲು ಆದೇಶವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇಂತಹ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿಯಲ್ಲ ಎಂಬುದು ಬೇಸರದ ಸಂಗತಿ ಎಂದರು.

“ಇದು  ಬೇಸರದ ಸಂಗತಿ ಆಗಿದೆ, ಯಾವುದನ್ನು ಧರಿಸಬೇಕು ಯಾವುದನ್ನು ಧರಿಸಬಾರದು ಎಂಬುದಕ್ಕೆ ಸರ್ಕಾರವು ಮಧ್ಯಪ್ರವೇಶಿಸುತ್ತಿರುವುದೇಕೆ? ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ಆದೇಶಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಇದು ಸಂಭವಿಸಿದಾಗ, ಇದು ಬಿಜೆಪಿ ಸರ್ಕಾರವಾಗಿರುವುದರಿಂದ ನಮಗೆ ಆಶ್ಚರ್ಯವಾಗಲಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಆದೇಶಗಳು ಬಿಡುಗಡೆಯಾಗುತ್ತಿರುವುದು ಬೇಸರ ತಂದಿದೆ.ಕರ್ನಾಟಕದಲ್ಲಿ ಬಿಡುಗಡೆ ಮಾಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುತ್ತೇನೆ ಎಂದು ಒಮರ್ ಅಬ್ದುಲ್ಲಾ ಹೇಳಿರುವುದಾಗಿ ಎಎನ್‌ಐಗೆ ತಿಳಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರ ರಾಜ್ಯದ ವಿವಿಧ ಮಂಡಳಿಗಳು ಮತ್ತು ನಿಗಮಗಳ ಮುಂಬರುವ ನೇಮಕಾತಿ ಪರೀಕ್ಷೆಗಳ ಸಮಯದಲ್ಲಿ ಪರೀಕ್ಷಾ ಹಾಲ್‌ಗಳ ಒಳಗೆ ತಲೆ ಮೇಲೆ ಯಾವುದೇ ವಸ್ತ್ರವನ್ನು ನಿಷೇಧಿಸಿದೆ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಸಹ ನಿಷೇಧಿಸಿದೆ. ಒಮರ್ ಅಬ್ದುಲ್ಲಾ ಅವರ ಪಕ್ಷವು ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ.

ಇದನ್ನೂ ಓದಿ:ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವಾಗ ಮುಖ, ತಲೆ ಮುಚ್ಚುವ ವಸ್ತ್ರ ನಿಷಿದ್ಧ; ಕೆಇಎ ಕಟ್ಟುನಿಟ್ಟಿನ ಆದೇಶ

ನವೆಂಬರ್ 6 ರಂದು, ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಹಾಜರಾಗುವ ಮಹಿಳೆಯೊಬ್ಬರು ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಮಂಗಳಸೂತ್ರವನ್ನು ತೆಗೆಯುವಂತೆ ಹೇಳಲಾಗಿತ್ತು. ಈ ಘಟನೆ ನಂತರ, ಹಿಂದುತ್ವ ಕಾರ್ಯಕರ್ತರು ಪ್ರತಿಭಟನೆಯನ್ನು ಪ್ರಾರಂಭಿಸಿದರು, ಪ್ರಾಧಿಕಾರವು ಪರೀಕ್ಷಾ ಹಾಲ್‌ನೊಳಗೆ ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಲು ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟಿತು.

ನವೆಂಬರ್ 18 ಮತ್ತು 19 ರಂದು ರಾಜ್ಯಾದ್ಯಂತ ನೇಮಕಾತಿ ಪರೀಕ್ಷೆಗಳು ನಡೆಯಲಿವೆ.

ವಿದ್ಯಾರ್ಥಿಗಳು ಬ್ಲೂಟೂತ್ ಸಾಧನಗಳನ್ನು ಬಳಸುತ್ತಾರೆ ಎಂಬ ದೂರುಗಳ ನಡುವೆ ರಾಜ್ಯ ಸರ್ಕಾರವು ಎಲ್ಲಾ ತಲೆ ಮೇಲಿನ ವಸ್ತ್ರ ನಿಷೇಧಿಸಿದೆ ಎಂದು ವರದಿಯಾಗಿದೆ. 2022ರ ಜನವರಿಯಲ್ಲಿ ಉಡುಪಿಯ ಸರಕಾರಿ ಪಿಯು ಕಾಲೇಜಿನ ಆಡಳಿತ ಮಂಡಳಿಯು ಹಿಜಾಬ್ ಧರಿಸಿದ ಆರು ಹುಡುಗಿಯರನ್ನು ಆವರಣಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದಾಗಿನಿಂದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಕರ್ನಾಟಕದಲ್ಲಿ ದೊಡ್ಡ ರಾಜಕೀಯ ವಿಷಯವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 pm, Tue, 14 November 23

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್