AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಕುಂಡ್ ಬಳಿ ಭೂಕುಸಿತ; ಕೇದಾರನಾಥಕ್ಕೆ ಹೋಗುತ್ತಿದ್ದ ಮೂವರು ಯಾತ್ರಿಕರ ಸಾವು; ಎಂಟು ಮಂದಿಗೆ ಗಾಯ

Kedarnath piligrims dies of landslide near Gaurikund: ಉತ್ತರಾಖಂಡ್​ನ ಗೌರಿಕುಂಡ್​ ಸಮೀಪದ ಚೀರ್ಬಾಸ ಎಂಬಲ್ಲಿ ಭೂಕುಸಿತಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಾರಾಷ್ಟ್ರದವರು, ಒಬ್ಬರು ಉತ್ತರಾಖಂಡ್​ನವರು. ಗೌರಿಕುಂಡ್​ನಿಂದ ಭಾನುವಾರ ಬೆಳಗ್ಗೆ ಕೇದಾರನಾಥ ಮಂದಿರಕ್ಕೆ ಹೊರಟಿದ್ದ ವೇಳೆ ಈ ದುರಂತ ಸಂಭವಿಸಿದೆ.

ಗೌರಿಕುಂಡ್ ಬಳಿ ಭೂಕುಸಿತ; ಕೇದಾರನಾಥಕ್ಕೆ ಹೋಗುತ್ತಿದ್ದ ಮೂವರು ಯಾತ್ರಿಕರ ಸಾವು; ಎಂಟು ಮಂದಿಗೆ ಗಾಯ
ಭೂಕುಸಿತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2024 | 12:44 PM

Share

ನವದೆಹಲಿ, ಜುಲೈ 21: ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಕುಂಡ್​ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಚೀರ್ಬಾಸ ಎಂಬ ಪ್ರದೇಶದಲ್ಲಿ ಭೂಕುಸಿತ ಘಟಿಸಿರುವುದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ರಕ್ಷಣಾ ತಂಡ ಧಾವಿಸಿ ಹೋಗಿದ್ದು, ಕೆಲವರನ್ನು ರಕ್ಷಿಸಲು ಯಶಸ್ವಿಯಾಗಿದೆ. ಎಂಟು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾವನ್ನಪ್ಪಿದ ಮೂವರನ್ನು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಮಹಾರಾಷ್ಟ್ರದವರಾದರೆ, ಒಬ್ಬರು ಸ್ಥಳೀಯರೆನ್ನಲಾಗಿದೆ. ಮಹಾರಾಷ್ಟ್ರದ ನಾಗಪುರದ ಅರುಣ್ ಪರಟೆ (31 ವರ್ಷ) ಮತ್ತು ಜಲ್ನಾ ಜಿಲ್ಲೆಯ ಸುನೀಲ್ ಮಹಾದೇವ್ ಕಾಳೆ (24 ವರ್ಷ) ಹಾಗು ಉತ್ತರಾಖಂಡ್​ನ ತಿಲ್ವಾರದ ಅನುರಾಗ್ ಬಿಷ್ತ್ ಅವರು ಮೃತ ವ್ಯಕ್ತಿಗಳಾಗಿದ್ದಾರೆ.

ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

‘ಕೇದಾರನಾಥ ಯಾತ್ರೆಯ ಹಾದಿಯಲ್ಲಿ ಗುಡ್ಡದ ಮೇಲಿನಿಂದ ಕಲ್ಲು, ಮಣ್ಣು ಕುಸಿತು ಬಿದ್ದು, ಕೆಲ ಯಾತ್ರಿಕರಿಗೆ ಗಾಯವಾಗಿರುವ ಸುದ್ದಿ ಬಂದಿರುವುದು ವಿಷಾದನೀಯ. ಮೃತರ ಕುಟುಂಬಗಳಿಗೆ ಈ ನೋವು ಸಹಿಸಿಕೊಳ್ಳಲು ಆ ದೇವರು ಶಕ್ತಿ ಕೊಡಲಿ,’ ಎಂದು ಮುಖ್ಯಮಂತ್ರಿಗಳು ಎಕ್ಸ್ ಪೋಸ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು

ಅಮರನಾಥ ಯಾತ್ರೆಗೆ ಜಮ್ಮು ಬಿಟ್ಟ ಹೊಸ ತಂಡ

ಭಾನುವಾರ ಬೆಳಗ್ಗೆ ಮೂರು ಸಾವಿರಕ್ಕೂ ಹೆಚ್ಚು ಯಾತ್ರಿಕರು ಜಮ್ಮುವಿನಿಂದ ಅಮರನಾಥಕ್ಕೆ ಹೊರಟಿದ್ದಾರೆ. ಅನಂತನಾಗ್ ಜಿಲ್ಲೆಯ ಪಹಲ್​ಗಮ್ ಬಳಿಯ ಹಿಮಾಲಯದ 12,756 ಅಡಿ ಎತ್ತರದಲ್ಲಿ ಗುಹೆಯೊಂದರಲ್ಲಿ ಅಮರನಾಥ ಮಂದಿರ ಇದೆ. ಪ್ರತೀ ವರ್ಷ ಲಕ್ಷಾಂತರ ಜನರು ದುರ್ಗಮ ವಾತಾವರಣದಲ್ಲಿ ಪಾದಯಾತ್ರೆ ಮೂಲಕ ಅಮರನಾಥಕ್ಕೆ ಹೋಗುತ್ತಾರೆ. ಈ ವರ್ಷ ಹೆಚ್ಚೂಕಡಿಮೆ ನಾಲ್ಕು ಲಕ್ಷ ಜನರು ಈ ಮಂದಿರಕ್ಕೆ ಹೋಗಿ ಶಿವಲಿಂಗ ದರ್ಶನ ಮಾಡಿ ಬಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ