AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಕುಂಡ್ ಬಳಿ ಭೂಕುಸಿತ; ಕೇದಾರನಾಥಕ್ಕೆ ಹೋಗುತ್ತಿದ್ದ ಮೂವರು ಯಾತ್ರಿಕರ ಸಾವು; ಎಂಟು ಮಂದಿಗೆ ಗಾಯ

Kedarnath piligrims dies of landslide near Gaurikund: ಉತ್ತರಾಖಂಡ್​ನ ಗೌರಿಕುಂಡ್​ ಸಮೀಪದ ಚೀರ್ಬಾಸ ಎಂಬಲ್ಲಿ ಭೂಕುಸಿತಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಾರಾಷ್ಟ್ರದವರು, ಒಬ್ಬರು ಉತ್ತರಾಖಂಡ್​ನವರು. ಗೌರಿಕುಂಡ್​ನಿಂದ ಭಾನುವಾರ ಬೆಳಗ್ಗೆ ಕೇದಾರನಾಥ ಮಂದಿರಕ್ಕೆ ಹೊರಟಿದ್ದ ವೇಳೆ ಈ ದುರಂತ ಸಂಭವಿಸಿದೆ.

ಗೌರಿಕುಂಡ್ ಬಳಿ ಭೂಕುಸಿತ; ಕೇದಾರನಾಥಕ್ಕೆ ಹೋಗುತ್ತಿದ್ದ ಮೂವರು ಯಾತ್ರಿಕರ ಸಾವು; ಎಂಟು ಮಂದಿಗೆ ಗಾಯ
ಭೂಕುಸಿತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2024 | 12:44 PM

Share

ನವದೆಹಲಿ, ಜುಲೈ 21: ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಕುಂಡ್​ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಚೀರ್ಬಾಸ ಎಂಬ ಪ್ರದೇಶದಲ್ಲಿ ಭೂಕುಸಿತ ಘಟಿಸಿರುವುದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ರಕ್ಷಣಾ ತಂಡ ಧಾವಿಸಿ ಹೋಗಿದ್ದು, ಕೆಲವರನ್ನು ರಕ್ಷಿಸಲು ಯಶಸ್ವಿಯಾಗಿದೆ. ಎಂಟು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾವನ್ನಪ್ಪಿದ ಮೂವರನ್ನು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಮಹಾರಾಷ್ಟ್ರದವರಾದರೆ, ಒಬ್ಬರು ಸ್ಥಳೀಯರೆನ್ನಲಾಗಿದೆ. ಮಹಾರಾಷ್ಟ್ರದ ನಾಗಪುರದ ಅರುಣ್ ಪರಟೆ (31 ವರ್ಷ) ಮತ್ತು ಜಲ್ನಾ ಜಿಲ್ಲೆಯ ಸುನೀಲ್ ಮಹಾದೇವ್ ಕಾಳೆ (24 ವರ್ಷ) ಹಾಗು ಉತ್ತರಾಖಂಡ್​ನ ತಿಲ್ವಾರದ ಅನುರಾಗ್ ಬಿಷ್ತ್ ಅವರು ಮೃತ ವ್ಯಕ್ತಿಗಳಾಗಿದ್ದಾರೆ.

ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

‘ಕೇದಾರನಾಥ ಯಾತ್ರೆಯ ಹಾದಿಯಲ್ಲಿ ಗುಡ್ಡದ ಮೇಲಿನಿಂದ ಕಲ್ಲು, ಮಣ್ಣು ಕುಸಿತು ಬಿದ್ದು, ಕೆಲ ಯಾತ್ರಿಕರಿಗೆ ಗಾಯವಾಗಿರುವ ಸುದ್ದಿ ಬಂದಿರುವುದು ವಿಷಾದನೀಯ. ಮೃತರ ಕುಟುಂಬಗಳಿಗೆ ಈ ನೋವು ಸಹಿಸಿಕೊಳ್ಳಲು ಆ ದೇವರು ಶಕ್ತಿ ಕೊಡಲಿ,’ ಎಂದು ಮುಖ್ಯಮಂತ್ರಿಗಳು ಎಕ್ಸ್ ಪೋಸ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು

ಅಮರನಾಥ ಯಾತ್ರೆಗೆ ಜಮ್ಮು ಬಿಟ್ಟ ಹೊಸ ತಂಡ

ಭಾನುವಾರ ಬೆಳಗ್ಗೆ ಮೂರು ಸಾವಿರಕ್ಕೂ ಹೆಚ್ಚು ಯಾತ್ರಿಕರು ಜಮ್ಮುವಿನಿಂದ ಅಮರನಾಥಕ್ಕೆ ಹೊರಟಿದ್ದಾರೆ. ಅನಂತನಾಗ್ ಜಿಲ್ಲೆಯ ಪಹಲ್​ಗಮ್ ಬಳಿಯ ಹಿಮಾಲಯದ 12,756 ಅಡಿ ಎತ್ತರದಲ್ಲಿ ಗುಹೆಯೊಂದರಲ್ಲಿ ಅಮರನಾಥ ಮಂದಿರ ಇದೆ. ಪ್ರತೀ ವರ್ಷ ಲಕ್ಷಾಂತರ ಜನರು ದುರ್ಗಮ ವಾತಾವರಣದಲ್ಲಿ ಪಾದಯಾತ್ರೆ ಮೂಲಕ ಅಮರನಾಥಕ್ಕೆ ಹೋಗುತ್ತಾರೆ. ಈ ವರ್ಷ ಹೆಚ್ಚೂಕಡಿಮೆ ನಾಲ್ಕು ಲಕ್ಷ ಜನರು ಈ ಮಂದಿರಕ್ಕೆ ಹೋಗಿ ಶಿವಲಿಂಗ ದರ್ಶನ ಮಾಡಿ ಬಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​