AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chardham Yatra 2021: 11 ಕ್ವಿಂಟಲ್ ಹೂವುಗಳಿಂದ ಶೃಂಗಾರಗೊಂಡ ಕೇದಾರನಾಥ ದೇವಸ್ಥಾನ; ಬಾಗಿಲು ತೆಗೆದರೂ ಭಕ್ತರಿಗೆ ಇಲ್ಲ ಪ್ರವೇಶ

Kedarnath Temple: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಚಾರ್​ಧಾಮ್ ಯಾತ್ರೆಯನ್ನು ರದ್ದುಗೊಳಿಸಲಾಗಿದ್ದು, ವರ್ಚ್ಯುವಲ್ ಮೂಲಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿವರ್ಷವೂ ಭಕ್ತರು ಈ ಸಮಯದಲ್ಲಿ ಬದ್ರಿನಾಥ, ಕೇದಾರನಾಥ, ಯಮುನೋತ್ರಿ ಮತ್ತು ಗಂಗೋತ್ರಿ ಪುಣ್ಯಕ್ಷೇತ್ರಗಳಿಗೆ ತೆರಳಿ ದರ್ಶನ ಪಡೆಯುತ್ತಿದ್ದರು.

Chardham Yatra 2021: 11 ಕ್ವಿಂಟಲ್ ಹೂವುಗಳಿಂದ ಶೃಂಗಾರಗೊಂಡ ಕೇದಾರನಾಥ ದೇವಸ್ಥಾನ; ಬಾಗಿಲು ತೆಗೆದರೂ ಭಕ್ತರಿಗೆ ಇಲ್ಲ ಪ್ರವೇಶ
ಹೂವುಗಳಿಂದ ಅಲಂಕೃತಗೊಂಡ ಕೇದಾರನಾಥ ದೇಗುಲ
Lakshmi Hegde
|

Updated on:May 16, 2021 | 10:06 PM

Share

ಉತ್ತರಾಖಂಡ್​: ಕೊರೊನಾ ಸೋಂಕಿನ ಭಯದ ಮಧ್ಯೆಯೂ ಇಲ್ಲಿನ ಐತಿಹಾಸಿಕ ಪುಣ್ಯಕ್ಷೇತ್ರ ಕೇದಾರನಾಥ್​ ದೇವಾಲದಯ ಬಾಗಿಲು ನಾಳೆ ಮುಂಜಾನೆ 5ಗಂಟೆಗೆ ತೆರೆಯಲಿದೆ. ಕೇದಾರನಾಥ್ ದೇವಾಲಯದ ಬಾಗಿಲು ತೆರೆಯಲಿದ್ದರೂ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ಇನ್ನು ನಾಳೆ ಮುಂಜಾನೆ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ಈಗಾಗಲೇ ಸುಮಾರು 11 ಕ್ವಿಂಟಾಲ್​ ಹೂವುಗಳಿಂದ ಇಡೀ ದೇವಸ್ಥಾನವನ್ನು ಶೃಂಗರಿಸಲಾಗಿದೆ.

ಇನ್ನು ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಚಾರ್​ಧಾಮ್ ಯಾತ್ರೆಯನ್ನು ರದ್ದುಗೊಳಿಸಲಾಗಿದ್ದು, ವರ್ಚ್ಯುವಲ್ ಮೂಲಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿವರ್ಷವೂ ಭಕ್ತರು ಈ ಸಮಯದಲ್ಲಿ ಬದ್ರಿನಾಥ, ಕೇದಾರನಾಥ, ಯಮುನೋತ್ರಿ ಮತ್ತು ಗಂಗೋತ್ರಿ ಪುಣ್ಯಕ್ಷೇತ್ರಗಳಿಗೆ ತೆರಳಿ ದರ್ಶನ ಪಡೆಯುತ್ತಿದ್ದರು. ಈ ನಾಲ್ಕೂ ಪುಣ್ಯಕ್ಷೇತ್ರಗಳು ಸೇರಿ ಚಾರ್​ಧಾಮ್ ಯಾತ್ರೆ ಎಂಬ ಹೆಸರು ಬಂದಿದೆ. ಆದರೆ ಈ ಬಾರಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಇಡೀ ಯಾತ್ರೆಯನ್ನು ರದ್ದುಗೊಳಿಸಲಾಗಿದೆ.

ಈ ನಾಲ್ಕೂ ಪುಣ್ಯಕ್ಷೇತ್ರಗಳಿಗೆ ಹೊರಗಿನ ಭಕ್ತರಿಗೆ ಮಾತ್ರವಲ್ಲ, ಸ್ಥಳೀಯರಿಗೆ ಪ್ರವೇಶ ನೀಡುತ್ತಿಲ್ಲ. ಸದ್ಯಕ್ಕಂತೂ ನಾಲ್ಕೂ ಧಾಮಗಳಲ್ಲಿ ಭಕ್ತರಿಗೆ ಪ್ರವೇಶ ಇರುವುದಿಲ್ಲ. ಹಾಗಾಗಿ ಆನ್​ಲೈನ್ ಮೂಲಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಭಕ್ತರು ಸದುಪಯೋಗ ಪಡೆಯಬಹುದು ಎಂದು ಉತ್ತರಾಖಂಡ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ದಿಲೀಪ್ ಜಾವಲ್ಕರ್​ ತಿಳಿಸಿದ್ದಾರೆ. ಹೀಗೆ ಆನ್​​ಲೈನ್ ಮೂಲಕ ದರ್ಶನ ಪಡೆಯಲು ಅಗತ್ಯವಿರುವ ಲಿಂಕ್​, ಮತ್ತಿತರ ವಿಚಾರಗಳನ್ನು ದೇಗುಲದ ವೆಬ್​ಸೈಟ್​​ನಲ್ಲಿ ಪ್ರಕಟಪಡಿಸಿದ್ದಾಗ್ಯೂ ಹೇಳಿದ್ದಾರೆ.

ಇದನ್ನೂ ಓದಿ: Cyclone Tauktae in Karnataka: ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ; ನಾಳೆಯೂ ಮುಂದುವರಿಯಲಿದೆ ಮಳೆ

ಕೊವಿಡ್ ಭಯ; ಕೊರೊನಾ ಸೋಂಕಿತ ಶಿಕ್ಷಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ

Kedarnath Temple decorated with 11 quintals flowers for opening

Published On - 9:58 pm, Sun, 16 May 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್