AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chardham Yatra 2021: 11 ಕ್ವಿಂಟಲ್ ಹೂವುಗಳಿಂದ ಶೃಂಗಾರಗೊಂಡ ಕೇದಾರನಾಥ ದೇವಸ್ಥಾನ; ಬಾಗಿಲು ತೆಗೆದರೂ ಭಕ್ತರಿಗೆ ಇಲ್ಲ ಪ್ರವೇಶ

Kedarnath Temple: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಚಾರ್​ಧಾಮ್ ಯಾತ್ರೆಯನ್ನು ರದ್ದುಗೊಳಿಸಲಾಗಿದ್ದು, ವರ್ಚ್ಯುವಲ್ ಮೂಲಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿವರ್ಷವೂ ಭಕ್ತರು ಈ ಸಮಯದಲ್ಲಿ ಬದ್ರಿನಾಥ, ಕೇದಾರನಾಥ, ಯಮುನೋತ್ರಿ ಮತ್ತು ಗಂಗೋತ್ರಿ ಪುಣ್ಯಕ್ಷೇತ್ರಗಳಿಗೆ ತೆರಳಿ ದರ್ಶನ ಪಡೆಯುತ್ತಿದ್ದರು.

Chardham Yatra 2021: 11 ಕ್ವಿಂಟಲ್ ಹೂವುಗಳಿಂದ ಶೃಂಗಾರಗೊಂಡ ಕೇದಾರನಾಥ ದೇವಸ್ಥಾನ; ಬಾಗಿಲು ತೆಗೆದರೂ ಭಕ್ತರಿಗೆ ಇಲ್ಲ ಪ್ರವೇಶ
ಹೂವುಗಳಿಂದ ಅಲಂಕೃತಗೊಂಡ ಕೇದಾರನಾಥ ದೇಗುಲ
Lakshmi Hegde
|

Updated on:May 16, 2021 | 10:06 PM

Share

ಉತ್ತರಾಖಂಡ್​: ಕೊರೊನಾ ಸೋಂಕಿನ ಭಯದ ಮಧ್ಯೆಯೂ ಇಲ್ಲಿನ ಐತಿಹಾಸಿಕ ಪುಣ್ಯಕ್ಷೇತ್ರ ಕೇದಾರನಾಥ್​ ದೇವಾಲದಯ ಬಾಗಿಲು ನಾಳೆ ಮುಂಜಾನೆ 5ಗಂಟೆಗೆ ತೆರೆಯಲಿದೆ. ಕೇದಾರನಾಥ್ ದೇವಾಲಯದ ಬಾಗಿಲು ತೆರೆಯಲಿದ್ದರೂ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ಇನ್ನು ನಾಳೆ ಮುಂಜಾನೆ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ಈಗಾಗಲೇ ಸುಮಾರು 11 ಕ್ವಿಂಟಾಲ್​ ಹೂವುಗಳಿಂದ ಇಡೀ ದೇವಸ್ಥಾನವನ್ನು ಶೃಂಗರಿಸಲಾಗಿದೆ.

ಇನ್ನು ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಚಾರ್​ಧಾಮ್ ಯಾತ್ರೆಯನ್ನು ರದ್ದುಗೊಳಿಸಲಾಗಿದ್ದು, ವರ್ಚ್ಯುವಲ್ ಮೂಲಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿವರ್ಷವೂ ಭಕ್ತರು ಈ ಸಮಯದಲ್ಲಿ ಬದ್ರಿನಾಥ, ಕೇದಾರನಾಥ, ಯಮುನೋತ್ರಿ ಮತ್ತು ಗಂಗೋತ್ರಿ ಪುಣ್ಯಕ್ಷೇತ್ರಗಳಿಗೆ ತೆರಳಿ ದರ್ಶನ ಪಡೆಯುತ್ತಿದ್ದರು. ಈ ನಾಲ್ಕೂ ಪುಣ್ಯಕ್ಷೇತ್ರಗಳು ಸೇರಿ ಚಾರ್​ಧಾಮ್ ಯಾತ್ರೆ ಎಂಬ ಹೆಸರು ಬಂದಿದೆ. ಆದರೆ ಈ ಬಾರಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಇಡೀ ಯಾತ್ರೆಯನ್ನು ರದ್ದುಗೊಳಿಸಲಾಗಿದೆ.

ಈ ನಾಲ್ಕೂ ಪುಣ್ಯಕ್ಷೇತ್ರಗಳಿಗೆ ಹೊರಗಿನ ಭಕ್ತರಿಗೆ ಮಾತ್ರವಲ್ಲ, ಸ್ಥಳೀಯರಿಗೆ ಪ್ರವೇಶ ನೀಡುತ್ತಿಲ್ಲ. ಸದ್ಯಕ್ಕಂತೂ ನಾಲ್ಕೂ ಧಾಮಗಳಲ್ಲಿ ಭಕ್ತರಿಗೆ ಪ್ರವೇಶ ಇರುವುದಿಲ್ಲ. ಹಾಗಾಗಿ ಆನ್​ಲೈನ್ ಮೂಲಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಭಕ್ತರು ಸದುಪಯೋಗ ಪಡೆಯಬಹುದು ಎಂದು ಉತ್ತರಾಖಂಡ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ದಿಲೀಪ್ ಜಾವಲ್ಕರ್​ ತಿಳಿಸಿದ್ದಾರೆ. ಹೀಗೆ ಆನ್​​ಲೈನ್ ಮೂಲಕ ದರ್ಶನ ಪಡೆಯಲು ಅಗತ್ಯವಿರುವ ಲಿಂಕ್​, ಮತ್ತಿತರ ವಿಚಾರಗಳನ್ನು ದೇಗುಲದ ವೆಬ್​ಸೈಟ್​​ನಲ್ಲಿ ಪ್ರಕಟಪಡಿಸಿದ್ದಾಗ್ಯೂ ಹೇಳಿದ್ದಾರೆ.

ಇದನ್ನೂ ಓದಿ: Cyclone Tauktae in Karnataka: ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ; ನಾಳೆಯೂ ಮುಂದುವರಿಯಲಿದೆ ಮಳೆ

ಕೊವಿಡ್ ಭಯ; ಕೊರೊನಾ ಸೋಂಕಿತ ಶಿಕ್ಷಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ

Kedarnath Temple decorated with 11 quintals flowers for opening

Published On - 9:58 pm, Sun, 16 May 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ