AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedarnath Temple: ಶಿವನ ದರ್ಶನಕ್ಕೆ ಶುಭ ಮುಹೂರ್ತ ಫೀಕ್ಸ್, ಕೇದಾರನಾಥ ದೇವಾಲಯದ ಬಾಗಿಲು ಏಪ್ರಿಲ್ 25ಕ್ಕೆ ಓಪನ್

ಉತ್ತರಾಖಂಡದಲ್ಲಿರುವ ಕೇದಾರನಾಥ ಧಾಮದ ಬಾಗಿಲು ಏಪ್ರಿಲ್ 25ಕ್ಕೆ ತೆರೆಯುತ್ತದೆ ಎಂದು ಘೋಷಿಸಲಾಗಿದೆ. ಶನಿವಾರ ಮಹಾಶಿವರಾತ್ರಿಯಂದು, ಉಖಿಮಠದಲ್ಲಿ ಸಾಂಪ್ರದಾಯಿಕ ಪೂಜೆಯ ನಂತರ, ಪಂಚಾಂಗದ ಲೆಕ್ಕಾಚಾರದ ಪ್ರಕಾರ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲು ಶುಭ ಮುಹೂರ್ತವನ್ನು ನಿಗದಿಪಡಿಸಲಾಯಿತು.

Kedarnath Temple: ಶಿವನ ದರ್ಶನಕ್ಕೆ ಶುಭ ಮುಹೂರ್ತ ಫೀಕ್ಸ್, ಕೇದಾರನಾಥ ದೇವಾಲಯದ ಬಾಗಿಲು ಏಪ್ರಿಲ್ 25ಕ್ಕೆ ಓಪನ್
ಕೇದಾರನಾಥ
ಅಕ್ಷಯ್​ ಪಲ್ಲಮಜಲು​​
|

Updated on:Feb 18, 2023 | 11:15 AM

Share

ಉತ್ತರಾಖಂಡದಲ್ಲಿರುವ ಕೇದಾರನಾಥ (Kedarnath) ಧಾಮದ ಬಾಗಿಲು ಏಪ್ರಿಲ್ 25ಕ್ಕೆ ತೆರೆಯುತ್ತದೆ ಎಂದು ಘೋಷಿಸಲಾಗಿದೆ. ಶನಿವಾರ ಮಹಾಶಿವರಾತ್ರಿಯಂದು, ಉಖಿಮಠದಲ್ಲಿ ಸಾಂಪ್ರದಾಯಿಕ ಪೂಜೆಯ ನಂತರ, ಪಂಚಾಂಗದ ಲೆಕ್ಕಾಚಾರದ ಪ್ರಕಾರ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲು ಶುಭ ಮುಹೂರ್ತವನ್ನು ನಿಗದಿಪಡಿಸಲಾಯಿತು. ಈ ವರ್ಷ ಮೇಘ ಲಗ್ನದಲ್ಲಿ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆ. ಏಪ್ರಿಲ್ 25ರಂದು ಬೆಳಗ್ಗೆ 6.20ಕ್ಕೆ ದೇವಸ್ಥಾನದ ಬಾಗಿಲು ತೆರೆಯಲಿದೆ. ಕೇದಾರನಾಥ ದೇವಾಲಯದ ಬಾಗಿಲು ತೆರೆಯುವುದರೊಂದಿಗೆ ಬಾಬಾ ದರ್ಬಾರ್‌ನಲ್ಲಿ ಭಕ್ತರ ಉಪಸ್ಥಿತಿಯು ಪ್ರಾರಂಭವಾಗಲಿದೆ.

ಕೇದಾರನಾಥ ದೇವಾಲಯದ ಬಾಗಿಲು ತೆರೆಯುವ ಮೊದಲು ಆಚರಿಸಲಾಗುವ ಸಂಪ್ರದಾಯಗಳು ಮತ್ತು ಆಚರಣೆಗಳು ನಾಲ್ಕು ದಿನಗಳ ಮುಂಚಿತವಾಗಿ ಅಂದರೆ ಏಪ್ರಿಲ್ 21 ರಿಂದ ಪ್ರಾರಂಭವಾಗುತ್ತವೆ. ಏಪ್ರಿಲ್ 21 ರಂದು ಡೋಲಿಯು ಚಳಿಗಾಲದ ಸಿಂಹಾಸನವಾದ ಉಖಿಮಠದ ಓಂಕಾರೇಶ್ವರ ದೇವಾಲಯದಿಂದ ಕೇದಾರನಾಥಕ್ಕೆ ಹೊರಡಲಿದೆ ಎಂದು ಹೇಳಲಾಗುತ್ತದೆ.

ಬಾಬಾ ಕೇದಾರರ ಡೋಲಿ ಯಾತ್ರೆ ಏಪ್ರಿಲ್ 24 ರಂದು ಕೇದಾರನಾಥ ತಲುಪಲಿದೆ. ಉಖಿಮಠದ ಓಂಕಾರೇಶ್ವರ ದೇವಸ್ಥಾನದಿಂದ ಕೇದಾರನಾಥವನ್ನು ಕಾಲ್ನಡಿಗೆಯಲ್ಲಿ ತಲುಪಿದ ನಂತರ, ಮರುದಿನ ದೇವಾಲಯದ ಬಾಗಿಲು ತೆರೆಯಲು ಧಾರ್ಮಿಕ ಆಚರಣೆಗಳು ಪ್ರಾರಂಭವಾಗುತ್ತವೆ. ಧಾರ್ಮಿಕ ವಿಧಿವಿಧಾನಗಳ ನಂತರ ಕೇದಾರನಾಥ ದೇವಾಲಯದ ಬಾಗಿಲು ಬೆಳಗ್ಗೆ 6.20ಕ್ಕೆ ತೆರೆಯಲಿದೆ.

Published On - 11:08 am, Sat, 18 February 23

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ