AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedarnath Temple: ಶಿವನ ದರ್ಶನಕ್ಕೆ ಶುಭ ಮುಹೂರ್ತ ಫೀಕ್ಸ್, ಕೇದಾರನಾಥ ದೇವಾಲಯದ ಬಾಗಿಲು ಏಪ್ರಿಲ್ 25ಕ್ಕೆ ಓಪನ್

ಉತ್ತರಾಖಂಡದಲ್ಲಿರುವ ಕೇದಾರನಾಥ ಧಾಮದ ಬಾಗಿಲು ಏಪ್ರಿಲ್ 25ಕ್ಕೆ ತೆರೆಯುತ್ತದೆ ಎಂದು ಘೋಷಿಸಲಾಗಿದೆ. ಶನಿವಾರ ಮಹಾಶಿವರಾತ್ರಿಯಂದು, ಉಖಿಮಠದಲ್ಲಿ ಸಾಂಪ್ರದಾಯಿಕ ಪೂಜೆಯ ನಂತರ, ಪಂಚಾಂಗದ ಲೆಕ್ಕಾಚಾರದ ಪ್ರಕಾರ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲು ಶುಭ ಮುಹೂರ್ತವನ್ನು ನಿಗದಿಪಡಿಸಲಾಯಿತು.

Kedarnath Temple: ಶಿವನ ದರ್ಶನಕ್ಕೆ ಶುಭ ಮುಹೂರ್ತ ಫೀಕ್ಸ್, ಕೇದಾರನಾಥ ದೇವಾಲಯದ ಬಾಗಿಲು ಏಪ್ರಿಲ್ 25ಕ್ಕೆ ಓಪನ್
ಕೇದಾರನಾಥ
ಅಕ್ಷಯ್​ ಪಲ್ಲಮಜಲು​​
|

Updated on:Feb 18, 2023 | 11:15 AM

Share

ಉತ್ತರಾಖಂಡದಲ್ಲಿರುವ ಕೇದಾರನಾಥ (Kedarnath) ಧಾಮದ ಬಾಗಿಲು ಏಪ್ರಿಲ್ 25ಕ್ಕೆ ತೆರೆಯುತ್ತದೆ ಎಂದು ಘೋಷಿಸಲಾಗಿದೆ. ಶನಿವಾರ ಮಹಾಶಿವರಾತ್ರಿಯಂದು, ಉಖಿಮಠದಲ್ಲಿ ಸಾಂಪ್ರದಾಯಿಕ ಪೂಜೆಯ ನಂತರ, ಪಂಚಾಂಗದ ಲೆಕ್ಕಾಚಾರದ ಪ್ರಕಾರ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲು ಶುಭ ಮುಹೂರ್ತವನ್ನು ನಿಗದಿಪಡಿಸಲಾಯಿತು. ಈ ವರ್ಷ ಮೇಘ ಲಗ್ನದಲ್ಲಿ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆ. ಏಪ್ರಿಲ್ 25ರಂದು ಬೆಳಗ್ಗೆ 6.20ಕ್ಕೆ ದೇವಸ್ಥಾನದ ಬಾಗಿಲು ತೆರೆಯಲಿದೆ. ಕೇದಾರನಾಥ ದೇವಾಲಯದ ಬಾಗಿಲು ತೆರೆಯುವುದರೊಂದಿಗೆ ಬಾಬಾ ದರ್ಬಾರ್‌ನಲ್ಲಿ ಭಕ್ತರ ಉಪಸ್ಥಿತಿಯು ಪ್ರಾರಂಭವಾಗಲಿದೆ.

ಕೇದಾರನಾಥ ದೇವಾಲಯದ ಬಾಗಿಲು ತೆರೆಯುವ ಮೊದಲು ಆಚರಿಸಲಾಗುವ ಸಂಪ್ರದಾಯಗಳು ಮತ್ತು ಆಚರಣೆಗಳು ನಾಲ್ಕು ದಿನಗಳ ಮುಂಚಿತವಾಗಿ ಅಂದರೆ ಏಪ್ರಿಲ್ 21 ರಿಂದ ಪ್ರಾರಂಭವಾಗುತ್ತವೆ. ಏಪ್ರಿಲ್ 21 ರಂದು ಡೋಲಿಯು ಚಳಿಗಾಲದ ಸಿಂಹಾಸನವಾದ ಉಖಿಮಠದ ಓಂಕಾರೇಶ್ವರ ದೇವಾಲಯದಿಂದ ಕೇದಾರನಾಥಕ್ಕೆ ಹೊರಡಲಿದೆ ಎಂದು ಹೇಳಲಾಗುತ್ತದೆ.

ಬಾಬಾ ಕೇದಾರರ ಡೋಲಿ ಯಾತ್ರೆ ಏಪ್ರಿಲ್ 24 ರಂದು ಕೇದಾರನಾಥ ತಲುಪಲಿದೆ. ಉಖಿಮಠದ ಓಂಕಾರೇಶ್ವರ ದೇವಸ್ಥಾನದಿಂದ ಕೇದಾರನಾಥವನ್ನು ಕಾಲ್ನಡಿಗೆಯಲ್ಲಿ ತಲುಪಿದ ನಂತರ, ಮರುದಿನ ದೇವಾಲಯದ ಬಾಗಿಲು ತೆರೆಯಲು ಧಾರ್ಮಿಕ ಆಚರಣೆಗಳು ಪ್ರಾರಂಭವಾಗುತ್ತವೆ. ಧಾರ್ಮಿಕ ವಿಧಿವಿಧಾನಗಳ ನಂತರ ಕೇದಾರನಾಥ ದೇವಾಲಯದ ಬಾಗಿಲು ಬೆಳಗ್ಗೆ 6.20ಕ್ಕೆ ತೆರೆಯಲಿದೆ.

Published On - 11:08 am, Sat, 18 February 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ