Kedarnath Temple: ಶಿವನ ದರ್ಶನಕ್ಕೆ ಶುಭ ಮುಹೂರ್ತ ಫೀಕ್ಸ್, ಕೇದಾರನಾಥ ದೇವಾಲಯದ ಬಾಗಿಲು ಏಪ್ರಿಲ್ 25ಕ್ಕೆ ಓಪನ್

ಉತ್ತರಾಖಂಡದಲ್ಲಿರುವ ಕೇದಾರನಾಥ ಧಾಮದ ಬಾಗಿಲು ಏಪ್ರಿಲ್ 25ಕ್ಕೆ ತೆರೆಯುತ್ತದೆ ಎಂದು ಘೋಷಿಸಲಾಗಿದೆ. ಶನಿವಾರ ಮಹಾಶಿವರಾತ್ರಿಯಂದು, ಉಖಿಮಠದಲ್ಲಿ ಸಾಂಪ್ರದಾಯಿಕ ಪೂಜೆಯ ನಂತರ, ಪಂಚಾಂಗದ ಲೆಕ್ಕಾಚಾರದ ಪ್ರಕಾರ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲು ಶುಭ ಮುಹೂರ್ತವನ್ನು ನಿಗದಿಪಡಿಸಲಾಯಿತು.

Kedarnath Temple: ಶಿವನ ದರ್ಶನಕ್ಕೆ ಶುಭ ಮುಹೂರ್ತ ಫೀಕ್ಸ್, ಕೇದಾರನಾಥ ದೇವಾಲಯದ ಬಾಗಿಲು ಏಪ್ರಿಲ್ 25ಕ್ಕೆ ಓಪನ್
ಕೇದಾರನಾಥ

Updated on: Feb 18, 2023 | 11:15 AM

ಉತ್ತರಾಖಂಡದಲ್ಲಿರುವ ಕೇದಾರನಾಥ (Kedarnath) ಧಾಮದ ಬಾಗಿಲು ಏಪ್ರಿಲ್ 25ಕ್ಕೆ ತೆರೆಯುತ್ತದೆ ಎಂದು ಘೋಷಿಸಲಾಗಿದೆ. ಶನಿವಾರ ಮಹಾಶಿವರಾತ್ರಿಯಂದು, ಉಖಿಮಠದಲ್ಲಿ ಸಾಂಪ್ರದಾಯಿಕ ಪೂಜೆಯ ನಂತರ, ಪಂಚಾಂಗದ ಲೆಕ್ಕಾಚಾರದ ಪ್ರಕಾರ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲು ಶುಭ ಮುಹೂರ್ತವನ್ನು ನಿಗದಿಪಡಿಸಲಾಯಿತು. ಈ ವರ್ಷ ಮೇಘ ಲಗ್ನದಲ್ಲಿ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆ. ಏಪ್ರಿಲ್ 25ರಂದು ಬೆಳಗ್ಗೆ 6.20ಕ್ಕೆ ದೇವಸ್ಥಾನದ ಬಾಗಿಲು ತೆರೆಯಲಿದೆ. ಕೇದಾರನಾಥ ದೇವಾಲಯದ ಬಾಗಿಲು ತೆರೆಯುವುದರೊಂದಿಗೆ ಬಾಬಾ ದರ್ಬಾರ್‌ನಲ್ಲಿ ಭಕ್ತರ ಉಪಸ್ಥಿತಿಯು ಪ್ರಾರಂಭವಾಗಲಿದೆ.

ಕೇದಾರನಾಥ ದೇವಾಲಯದ ಬಾಗಿಲು ತೆರೆಯುವ ಮೊದಲು ಆಚರಿಸಲಾಗುವ ಸಂಪ್ರದಾಯಗಳು ಮತ್ತು ಆಚರಣೆಗಳು ನಾಲ್ಕು ದಿನಗಳ ಮುಂಚಿತವಾಗಿ ಅಂದರೆ ಏಪ್ರಿಲ್ 21 ರಿಂದ ಪ್ರಾರಂಭವಾಗುತ್ತವೆ. ಏಪ್ರಿಲ್ 21 ರಂದು ಡೋಲಿಯು ಚಳಿಗಾಲದ ಸಿಂಹಾಸನವಾದ ಉಖಿಮಠದ ಓಂಕಾರೇಶ್ವರ ದೇವಾಲಯದಿಂದ ಕೇದಾರನಾಥಕ್ಕೆ ಹೊರಡಲಿದೆ ಎಂದು ಹೇಳಲಾಗುತ್ತದೆ.

ಬಾಬಾ ಕೇದಾರರ ಡೋಲಿ ಯಾತ್ರೆ ಏಪ್ರಿಲ್ 24 ರಂದು ಕೇದಾರನಾಥ ತಲುಪಲಿದೆ. ಉಖಿಮಠದ ಓಂಕಾರೇಶ್ವರ ದೇವಸ್ಥಾನದಿಂದ ಕೇದಾರನಾಥವನ್ನು ಕಾಲ್ನಡಿಗೆಯಲ್ಲಿ ತಲುಪಿದ ನಂತರ, ಮರುದಿನ ದೇವಾಲಯದ ಬಾಗಿಲು ತೆರೆಯಲು ಧಾರ್ಮಿಕ ಆಚರಣೆಗಳು ಪ್ರಾರಂಭವಾಗುತ್ತವೆ. ಧಾರ್ಮಿಕ ವಿಧಿವಿಧಾನಗಳ ನಂತರ ಕೇದಾರನಾಥ ದೇವಾಲಯದ ಬಾಗಿಲು ಬೆಳಗ್ಗೆ 6.20ಕ್ಕೆ ತೆರೆಯಲಿದೆ.

 

Published On - 11:08 am, Sat, 18 February 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us