AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಿಲು ತೆರೆದ ಕೇದಾರನಾಥ ದೇಗುಲ: ಮೊದಲ ದಿನವೇ 10 ಸಾವಿರ ಭಕ್ತರಿಂದ ದರ್ಶನ

ಮೊದಲ ದಿನವೇ ಸುಮಾರು 10 ಸಾವಿರ ಭಕ್ತರು ದೇವರ ದರ್ಶನ ಪಡೆದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಗಿಲು ತೆರೆದ ಕೇದಾರನಾಥ ದೇಗುಲ: ಮೊದಲ ದಿನವೇ 10 ಸಾವಿರ ಭಕ್ತರಿಂದ ದರ್ಶನ
ಕೇದಾರನಾಥ್ ದೇಗುಲಕ್ಕೆ ಭಕ್ತರ ಪ್ರವೇಶ
TV9 Web
| Edited By: |

Updated on: May 06, 2022 | 8:47 AM

Share

ದೆಹಲಿ: ಉತ್ತರಾಖಂಡದಲ್ಲಿರುವ ಐತಿಹಾಸಿಕ ಕೇದಾರನಾಥ ದೇಗುಲದ ಬಾಗಿಲನ್ನು ಶುಕ್ರವಾರ (ಮೇ 6) ಮುಂಜಾನೆ 6.25ಕ್ಕೆ ತೆರೆಯಲಾಯಿತು. ಮೊದಲ ದಿನವೇ ಸುಮಾರು 10 ಸಾವಿರ ಭಕ್ತರು ದೇವರ ದರ್ಶನ ಪಡೆದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ಆರು ತಿಂಗಳಿನಿಂದ ದೇಗುಲದ ಬಾಗಿಲು ಮುಚ್ಚಿತ್ತು. ಮೇ 3ರಂದು ಗಂಗೋತ್ರಿ ಧಾಮ, ಯಮುನೋತ್ರಿ ಧಾಮಗಳನ್ನು ಮೇ 3ರಂದು ಅಕ್ಷಯ ತೃತೀಯದ ಪ್ರಯುಕ್ತ ತೆರೆಯಲಾಗಿತ್ತು.

ದೇಗುಲವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ಕೆಲವೇ ಗಂಟೆಗಳ ಮೊದಲು ಮುಖ್ಯಮಂತ್ರಿ ಧಾಮಿ ಒಂದು ವಿಡಿಯೊ ತುಣುಕನ್ನು ಟ್ವೀಟ್ ಮಾಡಿದ್ದಾರೆ. ಭಕ್ತರನ್ನು ಸ್ವಾಗತಿಸಿರುವ ಅವರು, ದೇಗುಲ ಸಂದರ್ಶಿಸಲು ಬರುವ ಭಕ್ತರಿಗೆ ಸುರಕ್ಷಿತ ಪ್ರಯಾಣವನ್ನು ನಮ್ಮ ಸರ್ಕಾರ ಖಾತ್ರಿಪಡಿಸುತ್ತದೆ ಎಂದು ಹೇಳಿದ್ದಾರೆ.

ಕೊವಿಡ್-19 ಶಿಷ್ಟಾಚಾರದ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಪ್ರತಿದಿನ ಸಂದರ್ಶಿಸಬಹುದಾದ ಭಕ್ತರ ಸಂಖ್ಯೆಯನ್ನು 12 ಸಾವಿರಕ್ಕೆ ಮಿತಿಗೊಳಿಸಲಾಗಿದೆ. ಬದರಿನಾಥಕ್ಕೆ ಒಂದು ದಿನಕ್ಕೆ 15 ಸಾವಿರ ಮಂದಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಚಾರ್ ಧಾಮ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪ್ರವಾಸಿಗರು ಕೊವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಇನ್ನೂ ಮಂಜುಗಾಲ ಪೂರ್ತಿ ಆವರಿಸಿಲ್ಲ, ಅದಾಗಲೇ ಕೇದಾರನಾಥ ದೇಗುಲ ವಾತಾವರಣ ಹೀಗಿದೆ ನೋಡಿ

ಇದನ್ನೂ ಓದಿ: ಧರಮ್ ಸಂಸದ್​​ ಕುರಿತು ಉತ್ತರಾಖಂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ