AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಿಲು ತೆರೆದ ಕೇದಾರನಾಥ ದೇಗುಲ: ಮೊದಲ ದಿನವೇ 10 ಸಾವಿರ ಭಕ್ತರಿಂದ ದರ್ಶನ

ಮೊದಲ ದಿನವೇ ಸುಮಾರು 10 ಸಾವಿರ ಭಕ್ತರು ದೇವರ ದರ್ಶನ ಪಡೆದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಗಿಲು ತೆರೆದ ಕೇದಾರನಾಥ ದೇಗುಲ: ಮೊದಲ ದಿನವೇ 10 ಸಾವಿರ ಭಕ್ತರಿಂದ ದರ್ಶನ
ಕೇದಾರನಾಥ್ ದೇಗುಲಕ್ಕೆ ಭಕ್ತರ ಪ್ರವೇಶ
TV9 Web
| Edited By: |

Updated on: May 06, 2022 | 8:47 AM

Share

ದೆಹಲಿ: ಉತ್ತರಾಖಂಡದಲ್ಲಿರುವ ಐತಿಹಾಸಿಕ ಕೇದಾರನಾಥ ದೇಗುಲದ ಬಾಗಿಲನ್ನು ಶುಕ್ರವಾರ (ಮೇ 6) ಮುಂಜಾನೆ 6.25ಕ್ಕೆ ತೆರೆಯಲಾಯಿತು. ಮೊದಲ ದಿನವೇ ಸುಮಾರು 10 ಸಾವಿರ ಭಕ್ತರು ದೇವರ ದರ್ಶನ ಪಡೆದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ಆರು ತಿಂಗಳಿನಿಂದ ದೇಗುಲದ ಬಾಗಿಲು ಮುಚ್ಚಿತ್ತು. ಮೇ 3ರಂದು ಗಂಗೋತ್ರಿ ಧಾಮ, ಯಮುನೋತ್ರಿ ಧಾಮಗಳನ್ನು ಮೇ 3ರಂದು ಅಕ್ಷಯ ತೃತೀಯದ ಪ್ರಯುಕ್ತ ತೆರೆಯಲಾಗಿತ್ತು.

ದೇಗುಲವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ಕೆಲವೇ ಗಂಟೆಗಳ ಮೊದಲು ಮುಖ್ಯಮಂತ್ರಿ ಧಾಮಿ ಒಂದು ವಿಡಿಯೊ ತುಣುಕನ್ನು ಟ್ವೀಟ್ ಮಾಡಿದ್ದಾರೆ. ಭಕ್ತರನ್ನು ಸ್ವಾಗತಿಸಿರುವ ಅವರು, ದೇಗುಲ ಸಂದರ್ಶಿಸಲು ಬರುವ ಭಕ್ತರಿಗೆ ಸುರಕ್ಷಿತ ಪ್ರಯಾಣವನ್ನು ನಮ್ಮ ಸರ್ಕಾರ ಖಾತ್ರಿಪಡಿಸುತ್ತದೆ ಎಂದು ಹೇಳಿದ್ದಾರೆ.

ಕೊವಿಡ್-19 ಶಿಷ್ಟಾಚಾರದ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಪ್ರತಿದಿನ ಸಂದರ್ಶಿಸಬಹುದಾದ ಭಕ್ತರ ಸಂಖ್ಯೆಯನ್ನು 12 ಸಾವಿರಕ್ಕೆ ಮಿತಿಗೊಳಿಸಲಾಗಿದೆ. ಬದರಿನಾಥಕ್ಕೆ ಒಂದು ದಿನಕ್ಕೆ 15 ಸಾವಿರ ಮಂದಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಚಾರ್ ಧಾಮ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪ್ರವಾಸಿಗರು ಕೊವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಇನ್ನೂ ಮಂಜುಗಾಲ ಪೂರ್ತಿ ಆವರಿಸಿಲ್ಲ, ಅದಾಗಲೇ ಕೇದಾರನಾಥ ದೇಗುಲ ವಾತಾವರಣ ಹೀಗಿದೆ ನೋಡಿ

ಇದನ್ನೂ ಓದಿ: ಧರಮ್ ಸಂಸದ್​​ ಕುರಿತು ಉತ್ತರಾಖಂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ