AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಿಲು ತೆರೆದ ಕೇದಾರನಾಥ ದೇಗುಲ: ಮೊದಲ ದಿನವೇ 10 ಸಾವಿರ ಭಕ್ತರಿಂದ ದರ್ಶನ

ಮೊದಲ ದಿನವೇ ಸುಮಾರು 10 ಸಾವಿರ ಭಕ್ತರು ದೇವರ ದರ್ಶನ ಪಡೆದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಗಿಲು ತೆರೆದ ಕೇದಾರನಾಥ ದೇಗುಲ: ಮೊದಲ ದಿನವೇ 10 ಸಾವಿರ ಭಕ್ತರಿಂದ ದರ್ಶನ
ಕೇದಾರನಾಥ್ ದೇಗುಲಕ್ಕೆ ಭಕ್ತರ ಪ್ರವೇಶ
TV9 Web
| Edited By: |

Updated on: May 06, 2022 | 8:47 AM

Share

ದೆಹಲಿ: ಉತ್ತರಾಖಂಡದಲ್ಲಿರುವ ಐತಿಹಾಸಿಕ ಕೇದಾರನಾಥ ದೇಗುಲದ ಬಾಗಿಲನ್ನು ಶುಕ್ರವಾರ (ಮೇ 6) ಮುಂಜಾನೆ 6.25ಕ್ಕೆ ತೆರೆಯಲಾಯಿತು. ಮೊದಲ ದಿನವೇ ಸುಮಾರು 10 ಸಾವಿರ ಭಕ್ತರು ದೇವರ ದರ್ಶನ ಪಡೆದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ಆರು ತಿಂಗಳಿನಿಂದ ದೇಗುಲದ ಬಾಗಿಲು ಮುಚ್ಚಿತ್ತು. ಮೇ 3ರಂದು ಗಂಗೋತ್ರಿ ಧಾಮ, ಯಮುನೋತ್ರಿ ಧಾಮಗಳನ್ನು ಮೇ 3ರಂದು ಅಕ್ಷಯ ತೃತೀಯದ ಪ್ರಯುಕ್ತ ತೆರೆಯಲಾಗಿತ್ತು.

ದೇಗುಲವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ಕೆಲವೇ ಗಂಟೆಗಳ ಮೊದಲು ಮುಖ್ಯಮಂತ್ರಿ ಧಾಮಿ ಒಂದು ವಿಡಿಯೊ ತುಣುಕನ್ನು ಟ್ವೀಟ್ ಮಾಡಿದ್ದಾರೆ. ಭಕ್ತರನ್ನು ಸ್ವಾಗತಿಸಿರುವ ಅವರು, ದೇಗುಲ ಸಂದರ್ಶಿಸಲು ಬರುವ ಭಕ್ತರಿಗೆ ಸುರಕ್ಷಿತ ಪ್ರಯಾಣವನ್ನು ನಮ್ಮ ಸರ್ಕಾರ ಖಾತ್ರಿಪಡಿಸುತ್ತದೆ ಎಂದು ಹೇಳಿದ್ದಾರೆ.

ಕೊವಿಡ್-19 ಶಿಷ್ಟಾಚಾರದ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಪ್ರತಿದಿನ ಸಂದರ್ಶಿಸಬಹುದಾದ ಭಕ್ತರ ಸಂಖ್ಯೆಯನ್ನು 12 ಸಾವಿರಕ್ಕೆ ಮಿತಿಗೊಳಿಸಲಾಗಿದೆ. ಬದರಿನಾಥಕ್ಕೆ ಒಂದು ದಿನಕ್ಕೆ 15 ಸಾವಿರ ಮಂದಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಚಾರ್ ಧಾಮ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪ್ರವಾಸಿಗರು ಕೊವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಇನ್ನೂ ಮಂಜುಗಾಲ ಪೂರ್ತಿ ಆವರಿಸಿಲ್ಲ, ಅದಾಗಲೇ ಕೇದಾರನಾಥ ದೇಗುಲ ವಾತಾವರಣ ಹೀಗಿದೆ ನೋಡಿ

ಇದನ್ನೂ ಓದಿ: ಧರಮ್ ಸಂಸದ್​​ ಕುರಿತು ಉತ್ತರಾಖಂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ