AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ; ಕೊವಿಡ್ ಸಂಕಷ್ಟ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿಷೇಧ

ಬೆಟ್ಟದ ಕೆಳಗೆ ಇರುವ ಉಗ್ಗಿಮಠದಲ್ಲಿನ ಕೇದಾರನಾಥನ ಉತ್ಸವ ಮೂರ್ತಿ ಇಂದು ರಾತ್ರಿವೇಳೆಗೆ ಬೆಟ್ಟಕ್ಕೆ ತೆರಳಲಿದೆ. ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಕೇವಲ ಪೂಜೆಗೆ ಮಾತ್ರ ಅವಕಾಶ ನೀಡಿದೆ. ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ.

ಐತಿಹಾಸಿಕ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ; ಕೊವಿಡ್ ಸಂಕಷ್ಟ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿಷೇಧ
ಕೇದಾರನಾಥ ದೇವಾಲಯ
TV9 Web
| Updated By: ganapathi bhat

Updated on:Aug 23, 2021 | 12:27 PM

Share

ದಾವಣಗೆರೆ: ಐತಿಹಾಸಿಕ‌ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ. ಈ ಹಿನ್ನೆಲೆಯಲ್ಲಿ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೆಲಿಕಾಪ್ಟರ್​ ಮೂಲಕ ಬೆಟ್ಟಕ್ಕೆ ಆಗಮಿಸಿದ್ದಾರೆ. ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯಶ್ರೀಗೆ ಬೆಟ್ಟಕ್ಕೆ ತೆರಳಲು ಉತ್ತರಾಖಂಡ್ ಮುಖ್ಯಮಂತ್ರಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದಾರೆ. ಶ್ರೀಗಳ ಜತೆ ನಾಲ್ವಡಿ ಶಾಂತಲಿಂಗ ಸ್ವಾಮೀಜಿ‌ ಕೂಡ ಆಗಮಿಸಿದ್ದಾರೆ.

ಐತಿಹಾಸಿಕ‌ ಪುಣ್ಯಕ್ಷೇತ್ರ ಕೇದಾರನಾಥನ ದೇವಸ್ಥಾನ ನಾಳೆ ಬೆಳಿಗ್ಗೆ ಐದು ಗಂಟೆಗೆ ಓಪನ್ ಆಗಲಿದೆ. ಉತ್ತರಾಖಂಡ ರಾಜ್ಯದ ಬೆಟ್ಟದಲ್ಲಿ ಇರುವ ಪುಣ್ಯಕ್ಷೇತ್ರ ಕೇದಾರದ ಕೇದಾರನಾಥ ಮಂದಿರ ನಾಳೆ ತೆರೆಯಲಿದೆ. ಮಂದಿರ ಜಗದ್ಗುರುಗಳಾದ ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಇಂದು ಹೆಲಿಕಾಪ್ಟರ್ ಮೂಲಕ ಬೆಟ್ಟಕ್ಕೆ ಪ್ರವೇಶಿಸಿದ್ದಾರೆ. ಸ್ವಾಮೀಜಿ ಜೊತೆ ದಾವಣಗೆರೆ ಜಿಲ್ಲೆಯ ಜಗಳೂರು ಕಣ್ವಕುಪ್ಪೆ ಮಠದ ನಾಲ್ವಡಿ ಶಾಂತಲಿಂಗ ಸ್ವಾಮೀಜಿ‌ ಕೇದಾರನಾಥ ಪುಣ್ಯಕ್ಷೇತ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಬೆಟ್ಟದ ಕೆಳಗೆ ಇರುವ ಉಗ್ಗಿಮಠದಲ್ಲಿನ ಕೇದಾರನಾಥನ ಉತ್ಸವ ಮೂರ್ತಿ ಇಂದು ರಾತ್ರಿವೇಳೆಗೆ ಬೆಟ್ಟಕ್ಕೆ ತೆರಳಲಿದೆ. ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಕೇವಲ ಪೂಜೆಗೆ ಮಾತ್ರ ಅವಕಾಶ ನೀಡಿದೆ. ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಕೇದಾರ ಪೀಠ ಕರ್ನಾಟಕದ ವೀರಶೈವ ಪಂಚಪೀಠಗಳಲ್ಲೊಂದಾಗಿದೆ. ಕೇದಾರನಾಥನ‌ ಅರ್ಚಕರೆಲ್ಲ ಕರ್ನಾಟಕ ಮೂಲದ ವೀರಶೈವ ಪರಂಪರೆಯ ವೀರಮಹೇಶ್ವರ ಜಂಗಮ ಸಮುದಾಯದವರಾಗಿದ್ದಾರೆ.

ಇದನ್ನೂ ಓದಿ: Tonsure| ದೇವಸ್ಥಾನಗಳಲ್ಲಿ ಮುಡಿ ನೀಡೋದೇಕೆ? ಇದರ ಹಿಂದೆ ಅಡಗಿರೋ ಅರ್ಥವೇನು?

Chanakya Niti: ಈ ಮೂರು ಗುಣಗಳು ಇರುವ ಹೆಂಡತಿ ಇದ್ದರೆ ಮನೆಗೆ ಒಳ್ಳೆಯದು

Published On - 5:19 pm, Sun, 16 May 21

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್