AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ; ಕೊವಿಡ್ ಸಂಕಷ್ಟ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿಷೇಧ

ಬೆಟ್ಟದ ಕೆಳಗೆ ಇರುವ ಉಗ್ಗಿಮಠದಲ್ಲಿನ ಕೇದಾರನಾಥನ ಉತ್ಸವ ಮೂರ್ತಿ ಇಂದು ರಾತ್ರಿವೇಳೆಗೆ ಬೆಟ್ಟಕ್ಕೆ ತೆರಳಲಿದೆ. ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಕೇವಲ ಪೂಜೆಗೆ ಮಾತ್ರ ಅವಕಾಶ ನೀಡಿದೆ. ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ.

ಐತಿಹಾಸಿಕ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ; ಕೊವಿಡ್ ಸಂಕಷ್ಟ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿಷೇಧ
ಕೇದಾರನಾಥ ದೇವಾಲಯ
TV9 Web
| Edited By: |

Updated on:Aug 23, 2021 | 12:27 PM

Share

ದಾವಣಗೆರೆ: ಐತಿಹಾಸಿಕ‌ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ. ಈ ಹಿನ್ನೆಲೆಯಲ್ಲಿ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೆಲಿಕಾಪ್ಟರ್​ ಮೂಲಕ ಬೆಟ್ಟಕ್ಕೆ ಆಗಮಿಸಿದ್ದಾರೆ. ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯಶ್ರೀಗೆ ಬೆಟ್ಟಕ್ಕೆ ತೆರಳಲು ಉತ್ತರಾಖಂಡ್ ಮುಖ್ಯಮಂತ್ರಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದಾರೆ. ಶ್ರೀಗಳ ಜತೆ ನಾಲ್ವಡಿ ಶಾಂತಲಿಂಗ ಸ್ವಾಮೀಜಿ‌ ಕೂಡ ಆಗಮಿಸಿದ್ದಾರೆ.

ಐತಿಹಾಸಿಕ‌ ಪುಣ್ಯಕ್ಷೇತ್ರ ಕೇದಾರನಾಥನ ದೇವಸ್ಥಾನ ನಾಳೆ ಬೆಳಿಗ್ಗೆ ಐದು ಗಂಟೆಗೆ ಓಪನ್ ಆಗಲಿದೆ. ಉತ್ತರಾಖಂಡ ರಾಜ್ಯದ ಬೆಟ್ಟದಲ್ಲಿ ಇರುವ ಪುಣ್ಯಕ್ಷೇತ್ರ ಕೇದಾರದ ಕೇದಾರನಾಥ ಮಂದಿರ ನಾಳೆ ತೆರೆಯಲಿದೆ. ಮಂದಿರ ಜಗದ್ಗುರುಗಳಾದ ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಇಂದು ಹೆಲಿಕಾಪ್ಟರ್ ಮೂಲಕ ಬೆಟ್ಟಕ್ಕೆ ಪ್ರವೇಶಿಸಿದ್ದಾರೆ. ಸ್ವಾಮೀಜಿ ಜೊತೆ ದಾವಣಗೆರೆ ಜಿಲ್ಲೆಯ ಜಗಳೂರು ಕಣ್ವಕುಪ್ಪೆ ಮಠದ ನಾಲ್ವಡಿ ಶಾಂತಲಿಂಗ ಸ್ವಾಮೀಜಿ‌ ಕೇದಾರನಾಥ ಪುಣ್ಯಕ್ಷೇತ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಬೆಟ್ಟದ ಕೆಳಗೆ ಇರುವ ಉಗ್ಗಿಮಠದಲ್ಲಿನ ಕೇದಾರನಾಥನ ಉತ್ಸವ ಮೂರ್ತಿ ಇಂದು ರಾತ್ರಿವೇಳೆಗೆ ಬೆಟ್ಟಕ್ಕೆ ತೆರಳಲಿದೆ. ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಕೇವಲ ಪೂಜೆಗೆ ಮಾತ್ರ ಅವಕಾಶ ನೀಡಿದೆ. ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಕೇದಾರ ಪೀಠ ಕರ್ನಾಟಕದ ವೀರಶೈವ ಪಂಚಪೀಠಗಳಲ್ಲೊಂದಾಗಿದೆ. ಕೇದಾರನಾಥನ‌ ಅರ್ಚಕರೆಲ್ಲ ಕರ್ನಾಟಕ ಮೂಲದ ವೀರಶೈವ ಪರಂಪರೆಯ ವೀರಮಹೇಶ್ವರ ಜಂಗಮ ಸಮುದಾಯದವರಾಗಿದ್ದಾರೆ.

ಇದನ್ನೂ ಓದಿ: Tonsure| ದೇವಸ್ಥಾನಗಳಲ್ಲಿ ಮುಡಿ ನೀಡೋದೇಕೆ? ಇದರ ಹಿಂದೆ ಅಡಗಿರೋ ಅರ್ಥವೇನು?

Chanakya Niti: ಈ ಮೂರು ಗುಣಗಳು ಇರುವ ಹೆಂಡತಿ ಇದ್ದರೆ ಮನೆಗೆ ಒಳ್ಳೆಯದು

Published On - 5:19 pm, Sun, 16 May 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!