AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ; ಕೊವಿಡ್ ಸಂಕಷ್ಟ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿಷೇಧ

ಬೆಟ್ಟದ ಕೆಳಗೆ ಇರುವ ಉಗ್ಗಿಮಠದಲ್ಲಿನ ಕೇದಾರನಾಥನ ಉತ್ಸವ ಮೂರ್ತಿ ಇಂದು ರಾತ್ರಿವೇಳೆಗೆ ಬೆಟ್ಟಕ್ಕೆ ತೆರಳಲಿದೆ. ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಕೇವಲ ಪೂಜೆಗೆ ಮಾತ್ರ ಅವಕಾಶ ನೀಡಿದೆ. ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ.

ಐತಿಹಾಸಿಕ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ; ಕೊವಿಡ್ ಸಂಕಷ್ಟ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿಷೇಧ
ಕೇದಾರನಾಥ ದೇವಾಲಯ
TV9 Web
| Edited By: |

Updated on:Aug 23, 2021 | 12:27 PM

Share

ದಾವಣಗೆರೆ: ಐತಿಹಾಸಿಕ‌ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ. ಈ ಹಿನ್ನೆಲೆಯಲ್ಲಿ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೆಲಿಕಾಪ್ಟರ್​ ಮೂಲಕ ಬೆಟ್ಟಕ್ಕೆ ಆಗಮಿಸಿದ್ದಾರೆ. ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯಶ್ರೀಗೆ ಬೆಟ್ಟಕ್ಕೆ ತೆರಳಲು ಉತ್ತರಾಖಂಡ್ ಮುಖ್ಯಮಂತ್ರಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದಾರೆ. ಶ್ರೀಗಳ ಜತೆ ನಾಲ್ವಡಿ ಶಾಂತಲಿಂಗ ಸ್ವಾಮೀಜಿ‌ ಕೂಡ ಆಗಮಿಸಿದ್ದಾರೆ.

ಐತಿಹಾಸಿಕ‌ ಪುಣ್ಯಕ್ಷೇತ್ರ ಕೇದಾರನಾಥನ ದೇವಸ್ಥಾನ ನಾಳೆ ಬೆಳಿಗ್ಗೆ ಐದು ಗಂಟೆಗೆ ಓಪನ್ ಆಗಲಿದೆ. ಉತ್ತರಾಖಂಡ ರಾಜ್ಯದ ಬೆಟ್ಟದಲ್ಲಿ ಇರುವ ಪುಣ್ಯಕ್ಷೇತ್ರ ಕೇದಾರದ ಕೇದಾರನಾಥ ಮಂದಿರ ನಾಳೆ ತೆರೆಯಲಿದೆ. ಮಂದಿರ ಜಗದ್ಗುರುಗಳಾದ ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಇಂದು ಹೆಲಿಕಾಪ್ಟರ್ ಮೂಲಕ ಬೆಟ್ಟಕ್ಕೆ ಪ್ರವೇಶಿಸಿದ್ದಾರೆ. ಸ್ವಾಮೀಜಿ ಜೊತೆ ದಾವಣಗೆರೆ ಜಿಲ್ಲೆಯ ಜಗಳೂರು ಕಣ್ವಕುಪ್ಪೆ ಮಠದ ನಾಲ್ವಡಿ ಶಾಂತಲಿಂಗ ಸ್ವಾಮೀಜಿ‌ ಕೇದಾರನಾಥ ಪುಣ್ಯಕ್ಷೇತ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಬೆಟ್ಟದ ಕೆಳಗೆ ಇರುವ ಉಗ್ಗಿಮಠದಲ್ಲಿನ ಕೇದಾರನಾಥನ ಉತ್ಸವ ಮೂರ್ತಿ ಇಂದು ರಾತ್ರಿವೇಳೆಗೆ ಬೆಟ್ಟಕ್ಕೆ ತೆರಳಲಿದೆ. ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಕೇವಲ ಪೂಜೆಗೆ ಮಾತ್ರ ಅವಕಾಶ ನೀಡಿದೆ. ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಕೇದಾರ ಪೀಠ ಕರ್ನಾಟಕದ ವೀರಶೈವ ಪಂಚಪೀಠಗಳಲ್ಲೊಂದಾಗಿದೆ. ಕೇದಾರನಾಥನ‌ ಅರ್ಚಕರೆಲ್ಲ ಕರ್ನಾಟಕ ಮೂಲದ ವೀರಶೈವ ಪರಂಪರೆಯ ವೀರಮಹೇಶ್ವರ ಜಂಗಮ ಸಮುದಾಯದವರಾಗಿದ್ದಾರೆ.

ಇದನ್ನೂ ಓದಿ: Tonsure| ದೇವಸ್ಥಾನಗಳಲ್ಲಿ ಮುಡಿ ನೀಡೋದೇಕೆ? ಇದರ ಹಿಂದೆ ಅಡಗಿರೋ ಅರ್ಥವೇನು?

Chanakya Niti: ಈ ಮೂರು ಗುಣಗಳು ಇರುವ ಹೆಂಡತಿ ಇದ್ದರೆ ಮನೆಗೆ ಒಳ್ಳೆಯದು

Published On - 5:19 pm, Sun, 16 May 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್