AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟುಗಳಲ್ಲಿ ಲಕ್ಷ್ಮೀ ಹಾಗೂ ಗಣೇಶನ ಚಿತ್ರ ಮುದ್ರಿಸಿ: ಪ್ರಧಾನಿ ಮೋದಿಗೆ ಪತ್ರ ಬರೆದು ಒತ್ತಾಯಿಸಿದ ಆಪ್​ ನಾಯಕ ಕೇಜ್ರಿವಾಲ್

ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಭಾರತೀಯ ಕರೆನ್ಸಿ ನೋಟುಗಳಲ್ಲಿ ಗಾಂಧೀಜಿ ಜತೆಯಲ್ಲಿ ಲಕ್ಷ್ಮೀ ಹಾಗೂ ಗಣೇಶನ ಭಾವಚಿತ್ರವನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವುದಾಗಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ನೋಟುಗಳಲ್ಲಿ ಲಕ್ಷ್ಮೀ ಹಾಗೂ ಗಣೇಶನ ಚಿತ್ರ ಮುದ್ರಿಸಿ: ಪ್ರಧಾನಿ ಮೋದಿಗೆ ಪತ್ರ ಬರೆದು ಒತ್ತಾಯಿಸಿದ ಆಪ್​ ನಾಯಕ ಕೇಜ್ರಿವಾಲ್
Arvind Kejriwal and Narendra Modi
TV9 Web
| Edited By: |

Updated on:Oct 28, 2022 | 10:41 AM

Share

ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಭಾರತೀಯ ಕರೆನ್ಸಿ ನೋಟುಗಳಲ್ಲಿ ಗಾಂಧೀಜಿ ಜತೆಯಲ್ಲಿ ಲಕ್ಷ್ಮೀ ಹಾಗೂ ಗಣೇಶನ ಭಾವಚಿತ್ರವನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವುದಾಗಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಟ್ವೀಟ್ ಮೂಲಕ ಈ ವಿಷಯ ಹಂಚಿಕೊಂಡಿದ್ದು, ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಲಕ್ಷ್ಮಿದೇವಿ, ಗಣೇಶ ದೇವರ ಫೋಟೊಗಳನ್ನು ಸಹ ಮುದ್ರಿಸಬೇಕು ಎನ್ನುವುದು ನನ್ನ ಅಭಿಲಾಷೆ, ಈ ಕುರಿತು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ನಮ್ಮ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಹಲವು ಪ್ರಯತ್ನಗಳನ್ನು ನಾವು ಮಾಡಬೇಕಿದೆ, ಮೊದಲನೆಯದಾಗಿ ನೋಟುಗಳ ಮೇಲೆ ಲಕ್ಷ್ಮೀಯನ್ನು ಮುದ್ರಿಸಬೇಕಿದೆ ಎಂದರು.

ಕೆಲವೊಮ್ಮೆ ನಾವು ಎಷ್ಟೇ ಕಷ್ಟಪಟ್ಟರೂ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುವುದಿಲ್ಲ, ಆಗ ನಮಗೆ ದೇವರ ಅನುಗ್ರಹ ಬೇಕಾಗುತ್ತದೆ. ಹೀಗಾಗಿ ಹೊಸದಾಗಿ ಮುದ್ರಿಸುವ ನೋಟುಗಳಲ್ಲಿ ಲಕ್ಷ್ಮಿದೇವಿ ಮತ್ತು ಗಣೇಶ ದೇವರ ಭಾವಚಿತ್ರಗಳಿದ್ದರೆ ಇಡೀ ದೇಶಕ್ಕೆ ಆಶೀರ್ವಾದ ಸಿಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೇಶದಲ್ಲಿ ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ. ದೇಶದ ಆರ್ಥಿಕತೆ ಸುಧಾರಿಸಲು ಹಲವಾರು ಹಂತಗಳಿವೆ, ಈ ಪೈಕಿ ಹೆಚ್ಚಿನ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ಮೂಲಸೌಕರ್ಯ ಸೌಲಭ್ಯಗಳನ್ನು ಸುಧಾರಿಸುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಇಂಡೋನೇಷ್ಯಾವು ತಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ದೇವರ ಫೋಟೋ ಮುದ್ರಿಸಿದೆ. ಹೀಗಾಗಿ ನಾವೇಕೆ ನಮ್ಮ ಕರೆನ್ಸಿ ನೋಟುಗಳ ಮೇಲೆ ಗಣೇಶನ ಫೋಟೋ ಮುದ್ರಿಸಬಾರದು? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಹೇಳಿಕೆ

ನೋಟುಗಳ ಮೇಲೆ ಲಕ್ಷ್ಮೀ ಮತ್ತು ಗಣಪತಿ ಚಿತ್ರಗಳು ಬೇಕು ಎನ್ನುವ ಕೇಜ್ರೀವಾಲ್ ಹೇಳಿಕೆಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೆ ಸಿದ್ಧತೆ ತೀವ್ರಗೊಂಡಿರುವ ಈ ಹಂತದಲ್ಲಿ ತನ್ನ ಸಾಂಪ್ರದಾಯಿತ ಹಿಂದೂ ಮತ ಬ್ಯಾಂಕ್​ಗೆ ಕೈ ಹಾಕಲು ಕೇಜ್ರಿವಾಲ್ ಈ ಹೇಳಿಕೆ ನೀಡಿರಬಹುದು ಎಂಬ ಮಾತು ಬಿಜೆಪಿಯ ವಲಯದಲ್ಲಿ ಕೇಳಿಬರುತ್ತಿದೆ.

ಮತ್ತೊಂದೆಡೆ ಕಾಂಗ್ರೆಸ್ ನಾಯಕರು ’ಹೀಗೆ ಮಾಡುವುದು ತಪ್ಪು. ನಿರ್ದಿಷ್ಟ ಧರ್ಮದ ಚಿಹ್ನೆಯನ್ನು ನೋಟಿನ ಮೇಲೆ ತರುವುದು ಸರಿಯಾಗಲಾರದು. ಲಕ್ಷ್ಮೀ-ಗಣಪತಿ ಫೋಟೊ ಹಾಕಿದ ತಕ್ಷಣ ದೇಶದ ಸಮಸ್ಯೆಗಳು ಪರಿಹಾರವಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:35 am, Fri, 28 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ