AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ 14.65 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಕೀನ್ಯಾದಿಂದ ಬಂದಿದ್ದ ಮಹಿಳೆ ವಶಕ್ಕೆ

ಮಹಿಳೆ ಮೊದಲು ಅನುಮಾನಾಸ್ಪದವಾಗಿ ಕಾಣದೆ, ಸಹಜ ನಡವಳಿಕೆ ತೋರಿದ್ದಾಳೆ. ಹೀಗಾಗಿ ಹೆಚ್ಚಿನ ತನಿಖೆಗೆ ಆಕೆಯನ್ನು ಹಾಗೂ ಲಗೇಜ್​ಗಳನ್ನು ಒಳಪಡಿಸಲಾಗಿದೆ. ಆಗ ಸೂಟ್​ಕೇಸ್ ಅಸಹಜ ತೂಕ ಹೊಂದಿರುವುದು ಕಂಡುಬಂದಿದೆ.

ಜೈಪುರದಲ್ಲಿ 14.65 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಕೀನ್ಯಾದಿಂದ ಬಂದಿದ್ದ ಮಹಿಳೆ ವಶಕ್ಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Dec 19, 2021 | 10:09 PM

ಜೈಪುರ: ಬರೋಬ್ಬರಿ 2,150 ಗ್ರಾಂನಷ್ಟು ಮಾದಕ ದ್ರವ್ಯ ಹೊಂದಿದ್ದ ಕೀನ್ಯಾ ಪ್ರಜೆ ಒಬ್ಬಾಕೆಯನ್ನು ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡೆದುಕೊಂಡಿದ್ದಾರೆ. 2,150 ಗ್ರಾಂ ಹೆರಾಯಿನ್ ಹೊಂದಿದ್ದ ಕೀನ್ಯಾ ಪ್ರಜೆ ಮಹಿಳೆಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಹೆರಾಯಿನ್ ಸುಮಾರು 14.65 ಕೋಟಿ ಬೆಲೆಬಾಳುತ್ತದೆ ಎಂದು ಹೇಳಲಾಗಿದೆ.

ವಿಮಾನ ನಿಲ್ದಾಣದ ಪತ್ರಿಕಾ ಪ್ರಕಟಣೆಯಂತೆ 33 ವರ್ಷದ ಮಹಿಳೆ ಶಾರ್ಜಾದಿಂದ ಏರ್ ಅರೇಬಿಯಾ ವಿಮಾನದಲ್ಲಿ ಬಂದು ಇಳಿದಿದ್ದಾರೆ. ಆ ವೇಳೆ ಅವರನ್ನು ವಿಚಾರಿಸಲಾಗಿದೆ. ಆಕೆಯ ಮೊಬೈಲ್ ಸಂಖ್ಯೆ ಹಾಗೂ ಈ ಮೊದಲು ನವೆಂಬರ್ 13 ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ 90 ಕೋಟಿ ಬೆಲೆ ಬಾಳುವ 12.9 ಕಿಲೋ ಗ್ರಾಂ ಮಾದಕ ದ್ರವ್ಯ ಜಪ್ತಿ ಆದಾಗ ಸಿಕ್ಕಿದ ಉಗಾಂಡ ಮಹಿಳೆಯರ ಮೊಬೈಲ್ ಸಂಖ್ಯೆ ಒಂದೇ ಆಗಿರುವುದು ತಿಳಿದುಬಂದಿದೆ.

ಹೀಗಾಗಿ ಸಂಶಯಾಸ್ಪದವಾಗಿ ಕಂಡ ಅವರ ಲಗೇಜ್​ಗಳನ್ನು ಸೂಕ್ಷ್ಮವಾಗಿ ತನಿಖೆ ಮಾಡಲಾಗಿದೆ. ಮಾದಕ ದ್ರವ್ಯ, ನಾರ್ಕೊಟಿಕ್ಸ್​ಗಳ ಸ್ಮಗ್ಲಿಂಗ್ ಜಾಲದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ದೈಹಿಕವಾಗಿ ಮತ್ತು ಎಕ್ಸ್ ರೇ ಮೂಲಕ ತನಿಖೆ ನಡೆಸಲಾಗಿದೆ.

ಮಹಿಳೆ ಮೊದಲು ಅನುಮಾನಾಸ್ಪದವಾಗಿ ಕಾಣದೆ, ಸಹಜ ನಡವಳಿಕೆ ತೋರಿದ್ದಾಳೆ. ಹೀಗಾಗಿ ಹೆಚ್ಚಿನ ತನಿಖೆಗೆ ಆಕೆಯನ್ನು ಹಾಗೂ ಲಗೇಜ್​ಗಳನ್ನು ಒಳಪಡಿಸಲಾಗಿದೆ. ಆಗ ಸೂಟ್​ಕೇಸ್ ಅಸಹಜ ತೂಕ ಹೊಂದಿರುವುದು ಕಂಡುಬಂದಿದೆ. ಮತ್ತು ಸೂಟ್​ಕೇಸ್​ನ ತಳ ಹಾಗೂ ಮೇಲಿನ ಭಾಗ ಹೆಚ್ಚುವರಿಯಾಗಿ ಇರುವಂತೆ ಕಂಡುಬಂದಿದೆ. ಅದನ್ನು ಕತ್ತರಿಸಿ ನೋಡಿದಾಗ ಎರಡೂ ಕಡೆಗಳಲ್ಲಿ ಎನ್ವೆಲಪ್​ನಲ್ಲಿ ಬಿಳಿ ಬಣ್ಣದ ವಸ್ತು ಇರುವುದು ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಅದು ಹೆರಾಯಿನ್ ಎಂಬುದು ಬಯಲಾಗಿದೆ. ಹೆಚ್ಚಿನ ಪರೀಕ್ಷೆ ಹಾಗೂ ತನಿಖೆಗೆ ವಸ್ತುವನ್ನು ಕೆಮಿಕಲ್ ಲ್ಯಾಬೊರೇಟರಿಗೆ ಕಳುಹಿಸಿಕೊಡಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ವರ್ಷದ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸದಂತೆ ಪೊಲೀಸ್ ಇಲಾಖೆಯ ಹದ್ದಿನ ಕಣ್ಣು

ಇದನ್ನೂ ಓದಿ: ಹಾಲಿನ ಪೌಡರ್‌ ಬಾಕ್ಸ್‌ನಲ್ಲಿ ಮತ್ತೇರಿಸುವ ಡ್ರಗ್ಸ್ ಪೂರೈಕೆ: ವಿಚಾರಣೆಗೆ ಬರುವಂತೆ ಪ್ರೆಸ್ಟೀಜ್ ಗ್ರೂಪ್‌ ಮುಖ್ಯಸ್ಥೆ ಅಂಜುಂಗೆ ನೋಟಿಸ್

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!