AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಚಮಯವಿಳಕ್ಕು ಉತ್ಸವದ ವೇಳೆ ಅಪಘಾತ; ಐದು ವರ್ಷದ ಬಾಲಕಿಯ ದುರಂತ ಅಂತ್ಯ

ಕೇರಳದ ಕೊಲ್ಲಂನ ಕೊಟ್ಟನ್​ಕುಳಂಗರ ದೇವಸ್ಥಾನದಲ್ಲಿ ನಡೆದ ಪ್ರಸಿದ್ಧ ಚಮಯವಿಳಕ್ಕು ಉತ್ಸವದ ವೇಳೆ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ಭಕ್ತರು ರಥವನ್ನು ಎಳೆಯುವ ಸಂದರ್ಭದಲ್ಲಿ ದೊಡ್ಡ ಚಕ್ರಗಳ ಅಡಿ ಸಿಲುಕಿ ಬಾಲಕಿ ಮೃತಪಟ್ಟಿದ್ದಾಳೆ. ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಪ್ರಾಣ ಕಳೆದುಕೊಂಡ ಬಾಲಕಿಯಾಗಿದ್ದಾಳೆ.

ಕೇರಳ: ಚಮಯವಿಳಕ್ಕು ಉತ್ಸವದ ವೇಳೆ ಅಪಘಾತ; ಐದು ವರ್ಷದ ಬಾಲಕಿಯ ದುರಂತ ಅಂತ್ಯ
ಮಗು
ನಯನಾ ರಾಜೀವ್
|

Updated on: Mar 25, 2024 | 1:59 PM

Share

ಕೇರಳದ ಕೊಲ್ಲಂನ ಕೊಟ್ಟನ್​ಕುಳಂಗರ ದೇವಸ್ಥಾನದಲ್ಲಿ ನಡೆದ ಪ್ರಸಿದ್ಧ ಚಮಯವಿಳಕ್ಕು ಉತ್ಸವದ ವೇಳೆ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ಭಕ್ತರು ರಥವನ್ನು ಎಳೆಯುವ ಸಂದರ್ಭದಲ್ಲಿ ದೊಡ್ಡ ಚಕ್ರಗಳ ಅಡಿ ಸಿಲುಕಿ ಬಾಲಕಿ ಮೃತಪಟ್ಟಿದ್ದಾಳೆ. ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಪ್ರಾಣ ಕಳೆದುಕೊಂಡ ಬಾಲಕಿಯಾಗಿದ್ದಾಳೆ.

ಮಾರ್ಚ್​ 24ರಂದು ರಾತ್ರಿ 11.30ರ ವೇಳೆಗೆ ಅಪಘಾತ ಸಂಭವಿಸಿದೆ. ಮಗು ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು. ಪೋಷಕರು ಪೊಲೀಸರ ಸಹಾಯ ಪಡೆದು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದರೂ ಕೂಡ ಉಳಿಸಿಕೊಳ್ಳಲಾಗಲಿಲ್ಲ.

ಮತ್ತೊಂದು ಸುದ್ದಿ ತಂದೆಯ ತೋಳಿನಲ್ಲಿದ್ದ ಮಗು, ಕೈ ಜಾರಿ ಮೂರನೇ ಮಹಡಿಯಿಂದ ಬಿದ್ದು ಸಾವು ಶಾಪಿಂಗ್ ಮಾಲ್‌ನ ಮೂರನೇ ಮಹಡಿಯಲ್ಲಿ ಲಿಫ್ಟ್​​​​​ ಹತ್ತುವಾಗ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಮಾಲ್‌ನಲ್ಲಿ ನಡೆದಿದೆ. ಸುಮಾರು 40 ಅಡಿಗಳಷ್ಟು ಆಳಕ್ಕೆ ಮಗು ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ಓದಿ: Viral Video: ಮಾಡೆಲಿಂಗ್​​​​ನಿಂದ ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸುವ 8 ತಿಂಗಳ ಕಂದಮ್ಮ

ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬರು ಒಂದು ಕೈಯಲ್ಲಿ 5ವರ್ಷದ ಮಗುವನ್ನು ಮತ್ತು ಮತ್ತೊಂದು ತೋಳಿನಲ್ಲಿ ಒಂದು ವರ್ಷದ ಮಗುವನ್ನು ಎತ್ತಿಕೊಂಡು ಲಿಫ್ಟ್​​ ಬಳಿ ಬರುತ್ತಿರುವುದು ಸೆರೆಯಾಗಿದೆ.

ಲಿಫ್ಟ್​​ ಹತ್ತುವ ವೇಳೆ 5ವರ್ಷದ ಮಗು ಕಷ್ಟಪಡುತ್ತಿದ್ದು, ಈ ವೇಳೆ ಅಪ್ಪ ಸಹಾಯಕ್ಕೆ ಮುಂದಾಗಿದ್ದು,ಆಕಸ್ಮಿಕವಾಗಿ ತೋಳಿನಲ್ಲಿದ್ದ ಒಂದು ವರ್ಷದ ಮಗು ಕೈಯಿಂದ ಜಾರಿ 40 ಅಡಿಗಳಷ್ಟು ಆಳಕ್ಕೆ ಬಿದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ