AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Assembly Elections: ಬಿಜೆಪಿ ಸೇರಲಿದ್ದಾರೆ ಮೆಟ್ರೊಮ್ಯಾನ್ ಇ.ಶ್ರೀಧರನ್

Kerala Assembly Elections 2021: ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಇನ್ನು ಔಪಚಾರಿಕ ಪ್ರಕ್ರಿಯೆಗಳು ಬಾಕಿ ಇದೆ ಎಂದು ಭಾರತದ ಮೆಟ್ರೊಮ್ಯಾನ್ ಇ.ಶ್ರೀಧರನ್ ಹೇಳಿದ್ದಾರೆ.

Kerala Assembly Elections: ಬಿಜೆಪಿ ಸೇರಲಿದ್ದಾರೆ ಮೆಟ್ರೊಮ್ಯಾನ್ ಇ.ಶ್ರೀಧರನ್
ಇ. ಶ್ರೀಧರನ್
ರಶ್ಮಿ ಕಲ್ಲಕಟ್ಟ
|

Updated on: Feb 18, 2021 | 7:52 PM

Share

ನವದೆಹಲಿ: ಭಾರತದ ಮೆಟ್ರೊಮ್ಯಾನ್ ಇ.ಶ್ರೀಧರನ್ ಬಿಜೆಪಿ ಸೇರಲಿದ್ದಾರೆ. ಚುನಾವಣೆಗೆ ಸಿದ್ಧವಾಗಿರುವ ಕೇರಳದಲ್ಲಿ ಭಾನುವಾರ ನಡೆಯಲಿರುವ ಬಿಜೆಪಿ ವಿಜಯ ಯಾತ್ರೆ ವೇಳೆ 88ರ ಹರೆಯದ ಶ್ರೀಧರನ್ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.  ಶ್ರೀಧರನ್ ಬಿಜೆಪಿ ಪಕ್ಷದಿಂದ ಈ ಬಾರಿ ಚುನಾವಣೆ ಸ್ಪರ್ಧಿಸುವ ಸಾಧ್ಯತೆಯೂ ಇದೆ. ಅದೇ ವೇಳೆ ಚುನಾವಣೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ವಯಸ್ಸು 75 ದಾಟಿರಬಾರದು ಎಂದು ಬಿಜೆಪಿ ಪಕ್ಷ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಶ್ರೀಧರನ್ ಅವರಿಗೆ ಈ ಅವಕಾಶ ಸಿಗಬಹುದೇ ಎಂಬುದನ್ನು ಕಾದು ನೋಡಬೇಕಿದೆ.

ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಇನ್ನು ಔಪಚಾರಿಕ ಪ್ರಕ್ರಿಯೆಗಳು ಬಾಕಿ ಇದೆ. ನಿವೃತ್ತಿ ಹೊಂದಿದ ನಂತರ ಕಳೆದ 10 ವರ್ಷಗಳಿಂದ ನಾನು ಕೇರಳದಲ್ಲಿ ವಾಸಿಸುತ್ತಿದ್ದೇನೆ. ನಾನು ವಿವಿಧ ಸರ್ಕಾರಗಳನ್ನು ನೋಡಿದ್ದು, ಅವರು ಯಾರೂ ಜನರಿಗಾಗಿ ಕೆಲಸ ಮಾಡಿಲ್ಲ. ನನ್ನ ಅನುಭವಗಳನ್ನು ಬಳಸಿ ನನ್ನ ಕಡೆಯಿಂದ ಏನು ಮಾಡಲು ಸಾಧ್ಯವೋ ಅದನ್ನು ಮಾಡುವುದಕ್ಕಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದು ಶ್ರೀಧರನ್ ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ರಾಜಕೀಯ ಪಕ್ಷಗಳು ಭಾರತವನ್ನು ಕೆಟ್ಟದಾಗಿ ಬಿಂಬಿಸುತ್ತಿವೆ. ವಿರೋಧ ವ್ಯಕ್ತಪಡಿಸಲೇ ಬೇಕು ಎಂದು ಪಟ್ಟು ಹಿಡಿದು ಎಲ್ಲವನ್ನೂ ವಿರೋಧಿಸುತ್ತಿವೆ. ಕಾಂಗ್ರೆಸ್​ನಂಥಾ ಪಕ್ಷಗಳು ಭಾರತವನ್ನು ಕೆಟ್ಟದಾಗಿ ತೋರಿಸುತ್ತಿವೆ.

ಶಬರಿ ಮಲೆಗೆ ಮಹಿಳೆಯರಿಗೆ ಮುಕ್ತ ಪ್ರವೇಶ ನೀಡಿರುವ ಸುಪ್ರೀಂಕೋರ್ಟ್ ನಿರ್ದೇಶನ ಮತ್ತು ಪಿಣರಾಯಿ ವಿಜಯನ್ ನೇತೃತ್ವದ ನಿರ್ಧಾರವನ್ನ ಬಿಜೆಪಿ ವಿರೋಧಿಸಿತ್ತು. ಈ ಹಿಂದೆ ಇದ್ದಂತೆ 10 ವರ್ಷಕ್ಕಿಂತ ಕೆಳಗಿನ ಮತ್ತು 50 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಮಾತ್ರ ಶಬರಿಮಲೆಗೆ ಹೋಗಬೇಕು ಎಂಬ ನಿಲುವು ಬಿಜೆಪಿಯದ್ದು. ಇದಕ್ಕಾಗಿ ಬಿಜೆಪಿ, ಕೇರಳ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳನ್ನು ನಡೆದಿತ್ತು. ಅದೇ ವೇಳೆ ಹಿಂದೂ ಮತ್ತು ಮುಸ್ಲಿಂ ವಿವಾಹ ‘ಲವ್ ಜಿಹಾದ್’ ಎಂದು ಆರೋಪಿಸುತ್ತಿರುವ ಬಿಜೆಪಿ ನಿಲುವಿನ ಬಗ್ಗೆ ಶ್ರೀಧರನ್ ಅವರಲ್ಲಿ ಕೇಳಿದಾಗ, ಬಿಜೆಪಿ ನಿಲುವು ಸರಿ. ನಾನು ಬಿಜೆಪಿ ಸೇರುವುದಕ್ಕೆ ಇದೇ ಕಾರಣ. ಪಕ್ಷ ಬಯಸಿದರೆ ನಾನು ಚುನಾವಣೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

140 ಸದಸ್ಯರಿರುವ ಕೇರಳ ವಿಧಾನಸಭೆಯಲ್ಲಿ ಬಿಜೆಪಿಯ ಒಬ್ಬರು ಶಾಸಕರಿದ್ದಾರೆ. ಕಾಂಗ್ರೆಸ್ ಮತ್ತು ಸಿಪಿಎಂ ಪಕ್ಷಗಳು ಪೈಪೋಟಿಯಲ್ಲಿರುವ ಕೇರಳದಲ್ಲಿ ಈ ಬಾರಿ ಹೆಚ್ಚಿನ ಸೀಟುಗಳನ್ನು ಗಳಿಸಲು ಬಿಜೆಪಿ ಹೆಚ್ಚು ಪರಿಶ್ರಮವಹಿಸಿದೆ. ಅದೇ ವೇಳೆ ಕಳೆದ ಚುನಾವಣೆಯ ವೇಳೆ ನೀಡಿದ ಎಲ್ಲ ಭರವಸೆಗಳನ್ನು ಪೂರೈಸಿ ಮತ್ತೊಮ್ಮೆ ಅಧಿಕಾರಕ್ಕೇರಲು ಪಿಣರಾಯಿ ನೇತೃತ್ವದ ಎಡಪಕ್ಷ ಸಿದ್ಧತೆ ನಡೆಸುತ್ತಿದ್ದರೆ, ಕಾಂಗ್ರೆಸ್ ಪಕ್ಷವು ನಾಯಕರ ಭಿನ್ನಾಭಿಪ್ರಾಯ ಶಮನಗೊಳಿಸುವ ಕಾರ್ಯದಲ್ಲಿ ತೊಡಗಿದೆ.

ಇದನ್ನೂ ಓದಿ: ಕೇರಳದಲ್ಲಿ 5 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ