AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Assembly Election Results 2021: 91 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್​ಡಿಎಫ್, ಪಾಲಕ್ಕಾಡ್​ನಲ್ಲಿ ಬಿಜೆಪಿ ಅಭ್ಯರ್ಥಿ ಇ.ಶ್ರೀಧರನ್ ಮುನ್ನಡೆ

Assembly Election 2021: ಆರಂಭಿಕ ಹಂತದ ಮತಎಣಿಕೆಯಲ್ಲಿ ಎಲ್​ಡಿಎಫ್ 91 ಮತ್ತು ಯುಡಿಎಫ್ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್​ಡಿಎ ಎರಡು ಸೀಟುಗಳಲ್ಲಿ ಮುಂದೆ ಇದೆ. ಪಾಲಕ್ಕಾಡ್, ನೇಮಂ ಮತ್ತು ತ್ರಿಶ್ಶೂರ್ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

Kerala Assembly Election Results 2021: 91 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್​ಡಿಎಫ್, ಪಾಲಕ್ಕಾಡ್​ನಲ್ಲಿ ಬಿಜೆಪಿ ಅಭ್ಯರ್ಥಿ ಇ.ಶ್ರೀಧರನ್ ಮುನ್ನಡೆ
ಇ.ಶ್ರೀಧರನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 02, 2021 | 11:04 AM

Share

ತಿರುವನಂತಪುರಂ: ಕೇರಳದ ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಎಲ್​ಡಿಎಫ್ 91ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. 140 ಸೀಟುಗಳಿರುವ ಕೇರಳ ವಿಧಾನಸಭೆಗೆ ಏಪ್ರಿಲ್ 6ರಂದು ಚುನಾವಣೆ ನಡೆದಿದೆ. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಹಂತದ ಮತಎಣಿಕೆಯಲ್ಲಿ ಎಲ್​ಡಿಎಫ್ 91 ಮತ್ತು ಯುಡಿಎಫ್ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್​ಡಿಎ ಎರಡು ಸೀಟುಗಳಲ್ಲಿ ಮುಂದೆ ಇದೆ. ಪಾಲಕ್ಕಾಡ್, ನೇಮಂ  ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಯುಡಿಎಫ್ ಭದ್ರಕೋಟೆಯಾದ ಕೋಟ್ಟಯಂ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಯುಡಿಎಫ್ ಮುನ್ನಡ ಸಾಧಿಸಿದೆ. ಪುದುಪ್ಪಳ್ಳಿ, ಕೋಟ್ಟಯಂ ಮತ್ತು ಪಾಲಾದಲ್ಲಿ ಯುಡಿಎಫ್ ಮುನ್ನಡೆ ಸಾಧಿಸಿಕೊಂಡಿದೆ. ಪೂಂಞಾರ್​ನಲ್ಲಿ ಪಿ.ಸಿ. ಜಾರ್ಜ್ ಮೂರನೇ ಸ್ಥಾನದಲ್ಲಿದ್ದಾರೆ. ತ್ರಿಕೋನ ಸ್ಪರ್ಧೆ ಇರುವ ಏಟ್ಟುಮಾನೂರ್​ನಲ್ಲಿ ಎಲ್​ಡಿಎಫ್ ಅಭ್ಯರ್ಥಿ ವಿ.ಎನ್. ವಾಸವನ್ ಮುನ್ನಡೆ ಸಾಧಿಸಿದ್ದಾರೆ.

ಅಂಚೆ ಮತಗಳ ಕವರ್ ಮೇಲೆ ಸಹಿ ಇಲ್ಲ: ಪಾಲಕ್ಕಾಡ್ ನಲ್ಲಿ ತಡವಾಗಿ ಆರಂಭವಾದ ಮತ ಎಣಿಕೆ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭವಾದಾಗ 6 ಅಂಚೆಮತಗಳ ಕವರ್ ಮೇಲೆ ಸಹಿ ಇರದ ಕಾರಣ ಅದನ್ನು ಪ್ರತ್ಯೇಕವಾಗಿಡಲು ಬಿಜೆಪಿ ಒತ್ತಾಯಿಸಿದೆ. ಈ ಮತಗಳು ಅಸಿಂಧುವಾಗುವ ಸಾಧ್ಯತೆ ಇದೆ. ಬಿಜೆಪಿ ಕಾರ್ಯಕರ್ತರು ಮತ ಎಣಿಕೆ ಕೇಂದ್ರದಲ್ಲಿ ವಾಗ್ವಾದ ಮಾಡಿದದು ಬೆಳಗ್ಗೆ 8.40ಕ್ಕೆ ಇಲ್ಲಿ ಮತ ಎಣಿಕೆ ಆರಂಭವಾಗಿದೆ.

ಪಾಲಕ್ಕಾಡ್​ನಲ್ಲಿ ಇ. ಶ್ರೀಧರನ್ ಮುನ್ನಡೆ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿ  ಮೆಟ್ರೊಮ್ಯಾನ್ ಇ. ಶ್ರೀಧರನ್ ಮುನ್ನಡೆ ಸಾಧಿಸಿದ್ದಾರೆ. ತ್ರಿಕೋನ ಸ್ಪರ್ಧೆ ನಡೆಯುತ್ತಿರುವ ಇಲ್ಲಿ 1791 ಮತಗಳಿಂದ ಶ್ರೀಧರನ್ ಮುಂದೆ ಇದ್ದಾರೆ. ಬೆಳಗ್ಗೆ ಅಂಚೆ ಮತ ಎಣಿಕೆ ಪ್ರಾರಂಭಾವಗಿ ಇಲ್ಲಿಯವರೆಗೆ ಕಾಂಗ್ರೆಸ್  ಅಭ್ಯರ್ಥಿ ಶಾಫಿ  ಪರಂಬಿಲ್ ಅವರನ್ನು ಹಿಂದಿಕ್ಕಿ ಶ್ರೀಧರನ್ ಅವರೇ ಮುಂದೆ ಇದ್ದಾರೆ.

ವಡಗರದಲ್ಲಿ ಯುಡಿಎಫ್ ಅಭ್ಯರ್ಥಿ ಕೆ.ಕೆ. ರಮ ಮುನ್ನಡೆ ಸಾಧಿಸಿದ್ದಾರೆ. ಕಳಕ್ಕೂಟ್ಟಂನಲ್ಲಿ ಎಲ್ ಡಿಎಫ್ ಅಭ್ಯರ್ಥಿ ಕಡಕಂಪಳ್ಳಿ ಸುರೇಂದ್ರನ್ 4000 ಮತಗಳಿಂದ ಮುಂದೆ ಇದ್ದಾರೆ.

ಕಾಸರಗೋಡಿನಲ್ಲಿ ಯುಡಿಎಫ್ 4 , ಎಲ್ ಡಿಎಫ್ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಕಣ್ಣೂರ್ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್​ಡಿಎಫ್ ಮುನ್ನಡೆಯಲ್ಲಿದೆ. ಇರಿಕ್ಕೂರ್ ವಿಧಾನಸಭಾ ಕ್ಷೇತ್ರ ಹೊರತು ಪಡಿಸಿ ಇನ್ನುಳಿದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್​ಡಿಎಫ್ ಮುಂದೆ ಇದೆ.

ಧರ್ಮಡಂ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 5000 ಮತಗಳಿಂದ ಮುಂದೆ ಇದ್ದಾರೆ. ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಮಟ್ಟನ್ನೂರ್ನ​ಲ್ಲಿ.ಟಿಎಂ. ಮಧುಸೂದನ್ ಪಯ್ಯನ್ನೂರ್ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: 5 State Assembly Election Results 2021 LIVE: ಪಂಚರಾಜ್ಯಗಳ ಚುನಾವಣಾ ಫಲಿತಾಂಶ, ಮತ ಎಣಿಕೆ ಆರಂಭ

PM Modi in Kerala: ಕೇರಳದ ಜನರು ಎಲ್​ಡಿಎಫ್ ಮತ್ತು ಯುಡಿಎಫ್​ನಿಂದ ಬೇಸತ್ತಿದ್ದಾರೆ, ಅವರಿಗೆ ಬದಲಾವಣೆ ಬೇಕಿದೆ: ನರೇಂದ್ರ ಮೋದಿ

Published On - 10:48 am, Sun, 2 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!