Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ ಸಚಿವಾಲಯ, ಉದ್ಯಮಗಳಿಗೆ ಪ್ರೋತ್ಸಾಹ; ಕೇರಳ ಯುಡಿಎಫ್ ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ

Kerala Assembly Elections 2021: ಶಬರಿಮಲೆ ಸ್ವಾಮಿ ಅಯ್ಯಪ್ಪನ ಕ್ಷೇತ್ರದ ಸಂಪ್ರದಾಯಗಳನ್ನು ರಕ್ಷಿಸಲು ನೂತನ ಕಾನೂನನ್ನು ಜಾರಿಗೊಳಿಸುವುದಾಗಿ ಮತ್ತು ರಾಜಸ್ಥಾನದ ಮಾದರಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಇಲಾಖೆಯನ್ನು ತರುವುದಾಗಿ ಯುಡಿಎಫ್ ಭರವಸೆ ನೀಡಿದೆ.

ಸಂತೋಷ ಸಚಿವಾಲಯ, ಉದ್ಯಮಗಳಿಗೆ ಪ್ರೋತ್ಸಾಹ; ಕೇರಳ ಯುಡಿಎಫ್ ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರಣಾಳಿಕೆ ಬಿಡುಗಡೆ
Follow us
TV9 Web
| Updated By: ganapathi bhat

Updated on:Apr 06, 2022 | 6:57 PM

ತಿರುವನಂತಪುರ: ಏಪ್ರಿಲ್ 6ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರೆಟಿಕ್ ಫ್ರಂಟ್ (UDF) ಇಂದು (ಮಾರ್ಚ್ 20) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ವಿಶೇಷ ಎಂಬಂತೆ, ಪ್ರಣಾಳಿಕೆಯ ಹಲವು ಅಂಶಗಳೊಂದಿಗೆ ಯುಡಿಎಫ್, ‘ಸಂತೋಷದ ಸಚಿವಾಲಯ’ (Ministry of Happiness) ರಚಿಸುವುದಾಗಿ ಹೇಳಿಕೆ ನೀಡಿದೆ.

ಉದ್ಯಮಗಳಿಗೆ ಪ್ರೋತ್ಸಾಹ ನಿಟ್ಟಿನಲ್ಲಿಯೂ ಕಾಂಗ್ರೆಸ್ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವುದಾಗಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಹೂಡಿಕೆದಾರರಿಗೆ ರಕ್ಷಣೆ ನೀಡುವ ಸಲುವಾಗಿ Investor Protection Act ತರುವುದಾಗಿ, ಜೊತೆಗೆ, ಯಾವುದೇ ವಿಧದ ಸ್ಟ್ರೈಕ್​ಗಳು ಹಾಗೂ ಒತ್ತಾಯಪೂರ್ವಕವಾಗಿ ವ್ಯವಹಾರ ಮುಚ್ಚಿಸುವುದನ್ನು ನಿರ್ಬಂಧಿಸುವುದಾಗಿ ತಿಳಿಸಿದೆ.

ಯುಡಿಎಫ್ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಶಿ ತರೂರ್, ಇದು ಒಂದು ಸಂಯೋಜಿತ ಪ್ರಣಾಳಿಕೆಯಾಗಿದೆ. ವಾಣಿಜ್ಯ ವ್ಯವಹಾರಗಳಿಗೆ ನಾವು ತೆರೆದುಕೊಂಡಿದ್ದೇವೆ. ಹೂಡಿಕೆದಾರರಿಗೆ ರಕ್ಷಣೆಯನ್ನೂ ನೀಡುತ್ತೇವೆ. ಸಂತೋಷದ ಸಚಿವಾಲಯವನ್ನೂ ರಚಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಕೇರಳದಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದೆ. ತನ್ನ ಪ್ರಣಾಳಿಕೆಯನ್ನು ಕಾಂಗ್ರೆಸ್, ಜನರ ಪ್ರಣಾಳಿಕೆ ಎಂದು ಕರೆದುಕೊಂಡಿದೆ. ಯುಡಿಎಫ್ ಚುನಾಯಿತವಾದರೆ, ಅರ್ಹ ಗೃಹಿಣಿಯರಿಗೆ ಪ್ರತಿ ತಿಂಗಳು ₹2,000 ಪಿಂಚಣಿ, 5 ಕೆ.ಜಿ. ಉಚಿತ ಅಕ್ಕಿ ಹಾಗೂ ಬಡವರಿಗೆ 5 ಲಕ್ಷ ಮನೆ ನಿರ್ಮಿಸಿ ಕೊಡುವುದಾಗಿ ತಿಳಿಸಿದೆ.

ಶಬರಿಮಲೆ ಸ್ವಾಮಿ ಅಯ್ಯಪ್ಪನ ಕ್ಷೇತ್ರದ ಸಂಪ್ರದಾಯಗಳನ್ನು ರಕ್ಷಿಸಲು ನೂತನ ಕಾನೂನನ್ನು ಜಾರಿಗೊಳಿಸುವುದಾಗಿ ಮತ್ತು ರಾಜಸ್ಥಾನದ ಮಾದರಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಇಲಾಖೆಯನ್ನು ತರುವುದಾಗಿ ಯುಡಿಎಫ್ ಭರವಸೆ ನೀಡಿದೆ.

ಮಹಿಳಾ ಮತದಾರರನ್ನು ಕೇಂದ್ರೀಕರಿಸಿ, ಸರ್ಕಾರಿ ನೌಕರಿ ಪರೀಕ್ಷೆಗಳಿಗೆ ಹಾಜರಾಗುವ ತಾಯಂದಿರಿಗೆ ಎರಡು ವರ್ಷಗಳ ಹೆಚ್ಚುವರಿ ಅವಕಾಶ ನೀಡುವುದಾಗಿ ಹೇಳಿದೆ. Nyay ಯೋಜನೆ ಅಡಿಯಲ್ಲಿ ಒಳಗೊಳ್ಳದ 40ರಿಂದ 60 ವರ್ಷದ ಗೃಹಿಣಿಯರಿಗೆ ಮಾಸಿಕ 2000 ರೂ. ಪಿಂಚಣಿ ನೀಡುವುದಾಗಿ ಘೋಷಿಸಿದೆ. ಕೊವಿಡ್-19ಗೆ ತುತ್ತಾದವರಿಗೆ ಉಚಿತ ಆಹಾರ ಕಿಟ್ ನೀಡುವ ವಿಶ್ವಾಸವನ್ನು ಕೂಡ ಕಾಂಗ್ರೆಸ್ ನೀಡಿದೆ.

140 ವಿಧಾನಸಭಾ ಕ್ಷೇತ್ರಗಳಿಗೆ ಕೇರಳದಲ್ಲಿ ಏಪ್ರಿಲ್ 6ರಂದು ಮತದಾನ ನಡೆಯಲಿದೆ. ಮತ ಎಣಿಕೆ ಪ್ರಕ್ರಿಯೆಯು ಮೇ 2ರಂದು ನಡೆಯಲಿದೆ.

ಇದನ್ನೂ ಓದಿ: Kerala Assembly Elections 2021: ಕಲ್ಯಾಣ ಪಿಂಚಣಿ 2500 ರೂ, ಗೃಹಿಣಿಯರಿಗೂ ಸಿಗಲಿದೆ ಪಿಂಚಣಿ: ಚುನಾವಣೆ ಪ್ರಣಾಳಿಕೆ ಪ್ರಕಟಿಸಿದ ಎಲ್​ಡಿಎಫ್

Tamil Nadu Assembly Elections 2021: ಮದ್ಯದಂಗಡಿ ಮುಚ್ಚುವ ಭರವಸೆ, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ; ಆಕರ್ಷಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್

Published On - 3:35 pm, Sat, 20 March 21

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ