AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Assembly Elections 2021: ಕೇರಳ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಸಿಪಿಎಂ, ಯುವ ನಾಯಕರಿಗೆ ಮಣೆ

CPM Candidate Lists : ಅಭ್ಯರ್ಥಿಗಳ ಪಟ್ಟಿಯಲ್ಲಿ 13 ಮಂದಿ ಯುವ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದವರಾಗಿದ್ದಾರೆ. ಹಾಲಿ 33 ಶಾಸಕರು, 5 ಮಾಜಿ ಸಚಿವರು ಈ ಬಾರಿ ಕಣಕ್ಕಿಳಿಯುವುದಿಲ್ಲ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಅಭ್ಯರ್ಥಿಗಳಿದ್ದಾರೆ.

Kerala Assembly Elections 2021: ಕೇರಳ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಸಿಪಿಎಂ, ಯುವ ನಾಯಕರಿಗೆ ಮಣೆ
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಸಿಪಿಎಂ ಹಂಗಾಮಿ ಕಾರ್ಯದರ್ಶಿ ಎ.ವಿಜಯರಾಘವನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 10, 2021 | 1:25 PM

Share

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ಸಿಪಿಎಂ ಪಕ್ಷ  ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದೆ. 85 ಸೀಟುಗಳ ಪೈಕಿ 83 ಅಭ್ಯರ್ಥಿಗಳ ಹೆಸರನ್ನು ಸಿಪಿಎಂ ಪಕ್ಷದ ಹಂಗಾಮಿ ಕಾರ್ಯದರ್ಶಿ ಎಂ.ವಿಜಯರಾಘವನ್ ಬುಧವಾರ ಪ್ರಕಟಿಸಿದ್ದಾರೆ.ಇದರಲ್ಲಿ 74 ಮಂದಿ ಪಕ್ಷದ ಅಭ್ಯರ್ಥಿಗಳಾಗಿದ್ದು, 9 ಮಂದಿ ಸಿಪಿಎಂ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳಾಗಿದ್ದಾರೆ. ಇಬ್ಬರು ಅಭ್ಯರ್ಥಿಗಳ ಹೆಸರನ್ನು ನಂತರ ಬಿಡುಗಡೆ ಮಾಡಲಾಗುವುದು ಎಂದು ಸಿಪಿಎಂ ಹೇಳಿದೆ. ಅಭ್ಯರ್ಥಿಗಳ ಪಟ್ಟಿಯಲ್ಲಿ 13 ಮಂದಿ ಯುವ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದವರಾಗಿದ್ದಾರೆ. ಹಾಲಿ 33 ಶಾಸಕರು, 5 ಮಾಜಿ ಸಚಿವರು ಈ ಬಾರಿ ಕಣಕ್ಕಿಳಿಯುವುದಿಲ್ಲ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಅಭ್ಯರ್ಥಿಗಳಿದ್ದಾರೆ.

ಸಿಪಿಎಂ ನಾಯಕರಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೆ.ಕೆ.ಶೈಲಜಾ, ಟಿ.ಪಿ. ರಾಮಕೃಷ್ಣನ್, ಎಂ.ಎಂ. ಮಣಿ, ಎಂ.ವಿ. ಗೋವಿಂದನ್, ಕೆ.ರಾಧಾಕೃಷ್ಣನ್, ಪಿ.ರಾಜೀವ್, ಕೆ.ಎನ್, ಬಾಲಗೋಪಾಲ್ ಸ್ಪರ್ಧಿಸಲಿದ್ದಾರೆ. ಪದವೀಧರರಾದ 42 ಮಂದಿ, ವಕೀಲ ವೃತ್ತಿಯಲ್ಲಿರುವ 28 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ. 40 ವರ್ಷಕ್ಕಿಂತ ಕಡಿಮೆ ವಯಸ್ಸಿನ 8 ಮಂದಿ, ಸ್ನಾತಕೋತ್ತರ ಪದವಿ ಇರುವ 14 ಮಂದಿ, ಪಿಹೆಚ್​ಡಿ ಪಡೆದವರು- 2, ವಾಸ್ತು ಶಿಲ್ಪಿ-1 ಮತ್ತು ಎಂಬಿಬಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಇಬ್ಬರು ಇದ್ದಾರೆ. 12 ಸೀಟುಗಳಲ್ಲಿ ಮಹಿಳೆಯರು ಸ್ಪರ್ಧಿಸುತ್ತಿದ್ದಾರೆ.

ಇತ್ತೀಚೆಗೆ ಎಲ್​ಡಿಎಫ್ ಮೈತ್ರಿಕೂಟಕ್ಕೆ ಸೇರಿದ ಕೇರಳ ಕಾಂಗ್ರೆಸ್ ಎಂ ಮತ್ತು ಎಲ್​ಜೆಡಿಗೆ ಸೀಟು ಕೊಡಬೇಕಾಗಿ ಬರುವುದರಿಂದ 2016ರಲ್ಲಿ ಸಿಪಿಎಂ ಪಕ್ಷಕ್ಕೆ ನೀಡಿದ್ದ ಸೀಟುಗಳಷ್ಟೇ ಸೀಟುಗಳು ಈ ಬಾರಿ ಲಭಿಸುವುದಿಲ್ಲ. ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅವರ ಸಂಸದೀಯ ಕಾರ್ಯಗಳು ಮಾತ್ರವಲ್ಲ ಪಕ್ಷವನ್ನು ಸಂಘಟಿಸುವ ಸಾಮರ್ಥ್ಯವನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಹೊಸಬರಿಗೆ ಅವಕಾಶ ನೀಡುವುದಕ್ಕೆ ಒತ್ತು ನೀಡಲಾಗಿದೆ ಎಂದು ವಿಜಯರಾಘವನ್ ಹೇಳಿದ್ದಾರೆ.

ಚುನಾವಣಾ ಕಣದಲ್ಲಿರುವ ಪ್ರಮುಖರು ಮಾಜಿ ರಾಜ್ಯಸಭಾ ಸಂಸದ ಪಿ. ರಾಜೀವ್ (ಕಳಮಶ್ಶೇರಿ) ತಿರುವನಂತಪುರಂ ಮಾಜಿ ಮೇಯರ್ ವಿ.ಕೆ .ಪ್ರಶಾಂತ್ (ವಟ್ಟಿಯೂರ್ ಕಾವ್) ಅಬಕಾರಿ ಸಚಿವ ಟಿಪಿ ರಾಮಕೃಷ್ಣನ್ (ಪೆರಂಬ್ರ ) ಆರೋಗ್ಯ ಸಚಿವೆ ಕೆ.ಕೆ.ಶೈಲಜಾ (ಮಟ್ಟನ್ನೂರ್) ಡಿವೈಎಫ್ಐ ನಾಯಕ ಪಿ.ಎ ಮುಹಮ್ಮದ್ ರಿಯಾಸ್ (ಬೇಪೂರ್) ಪಾಲಕ್ಕಾಡ್ ಮಾಜಿ ಸಂಸದ ಎಂಬಿ ರಾಜೇಶ್ (ತ್ರಿತಲ) ಕಾರ್ಮಿಕ ಸಚಿವ ಎ.ಸಿ. ಮೊಯಿದ್ದೀನ್ (ಕುನ್ನಂಕುಳಂ) ದೇವಸ್ವಂ ಸಚಿವ ಕಡಕಂಪಳ್ಳಿ ಸುರೇಂದ್ರನ್ (ಕಳಕ್ಕೂಟ್ಟಂ) ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ (ತಾವನೂರ್) ಮೀನುಗಾರಿಕೆ ಇಲಾಖೆ ಸಚಿವೆ ಜೆ.ಮೆರ್ಸಿ ಕುಟ್ಟಿ ಅಮ್ಮ (ಕುಂಡರಾ)

ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಅಭ್ಯರ್ಥಿ ಘೋಷಿಸಿಲ್ಲ ಕೇರಳದ 14 ಜಿಲ್ಲೆಗಳಲ್ಲಿನ ವಿಧಾನಸಭೆಕ್ಷೇತ್ರಗಳಲ್ಲಿ ಚುನಾವಣೆ ಕಣಕ್ಕಿಳಿಯಲಿರುವ ಸಿಪಿಎಂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಕಾಸರಗೋಡಿನ ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಯ ಹೆಸರು ಘೋಷಣೆಯಾಗಿಲ್ಲ.  ಇಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಯ ಹೆಸರು ಆಮೇಲೆ ಘೋಷಿಸುವುದಾಗಿ ವಿಜಯರಾಘವನ್ ಹೇಳಿದ್ದಾರೆ. ಕಾಸರಗೋಡು ಜಿಲ್ಲೆಯ ಉದುಮದಲ್ಲಿ ಸಿ.ಎಚ್.ಕುಂಞಂಬು, ತೃಕರೀಪುರದಲ್ಲಿ ಎ. ರಾಜಗೋಪಾಲ್ ಸ್ಪರ್ಧಿಸಲಿದ್ದಾರೆ.

ಕಣ್ಣೂರ್ ಜಿಲ್ಲೆ ಧರ್ಮಡಂ – ಪಿಣರಾಯಿ ವಿಜಯನ್ ತಲಶ್ಶೇರಿ- ಎ.ಎನ್.ಶಂಸೀರ್ ಪಯ್ಯನ್ನೂರ್- ಟಿ.ಎ. ಮಧುಸೂದನ್ ಕಲ್ಯಾಶ್ಶೇರಿ- ಎಂ.ವಿಜಿನ ಅಳಿಕ್ಕೋಡ್- ಕೆ.ವಿ.ಸುಮೇಶ್ ಪೆರಾವೂರ್- ಜಕೀರ್ ಹುಸೇನ್ ಮಟ್ಟನ್ನೂರ್- ಶೈಲಜಾ ತಳಿಪರಂಬ್- ಎಂ.ವಿ.ಗೋವಿಂದನ್

ಚುನಾವಣೆ ಕಣದಲ್ಲಿ 12 ಮಹಿಳೆಯರು ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸಿಪಿಎಂ ಅಭ್ಯರ್ಥಿಗಳಾಗಿ 12ಮಂದಿ ಮಹಿಳೆಯರು ಕಣಕ್ಕಿಳಿದಿದ್ದಾರೆ. ಒ.ಎಸ್. ಅಂಬಿಕಾ, ಮೆರ್ಸಿ ಕುಟ್ಟಿಯಮ್ಮ, ವೀಣಾ ಜಾರ್ಜ್‌, ಯು.ಪ್ರತಿಭಾ, ದಲೀಮಾ ಜೊಜೊ, ಶೆಲ್ನಾ ನಿಷಾದ್, ಆ. ಬಿಂದು, ಕಾನತ್ತಿಲ್ ಜಮೀಲಾ, ಪಿ.ಮಿಥುನಾ, ಕೆ.ಶಾಂತಾಕುಮಾರಿ, ಕೆ.ಕೆ.ಶೈಲಜಾ, ಪಿ.ಜಿಜಿ – ಚುನಾವಣಾ ಕಣದಲ್ಲಿದ್ದಾರೆ.

ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್  ಎಂದ ಸಮೀಕ್ಷೆ 

ಕೇರಳದಲ್ಲಿ ಈಗ ಆಡಳಿತದಲ್ಲಿರುವ ಎಡಪಕ್ಷ ಮತ್ತೆ ಅಧಿಕಾರ ಗಳಿಸಲಿದೆ. ಕೇರಳದಲ್ಲಿ ಆಡಳಿತ ವಹಿಸಿರುವ ಎಲ್​ಡಿಎಫ್ 140ರಲ್ಲಿ 82 ಸ್ಥಾನ ಪಡೆದರೆ, ಕಾಂಗ್ರೆಸ್​ ನೇತೃತ್ವದ ಯುಡಿಎಫ್ 56 ಸೀಟ್ ಪಡೆಯಬಹುದು. ಬಿಜೆಪಿ 1 ಸೀಟು ಗೆಲ್ಲಬಹುದು ಎಂಬ ನಿರೀಕ್ಷೆ ಇದೆ ಟೈಮ್ಸ್ ನೌ ಹಾಗೂ ಸಿ-ವೋಟರ್ ಜಂಟಿಯಾಗಿ ನಡೆಸಿರುವ ಸಮೀಕ್ಷೆಯ ವರದಿ ತಿಳಿಸಿದೆ.

 ಇದನ್ನೂ ಓದಿ: Kerala Assembly Elections 2021: ವಿಭಿನ್ನ ಘೋಷವಾಕ್ಯಗಳೊಂದಿಗೆ ಕೇರಳ ಚುನಾವಣೆ ಪ್ರಚಾರಕ್ಕಿಳಿದ ಎಲ್​ಡಿಎಫ್, ಯುಡಿಎಫ್ ಮತ್ತು ಎನ್​ಡಿಎ

Published On - 1:06 pm, Wed, 10 March 21

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್