AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Boat Tragedy: ಕೇರಳದ ಬೋಟ್ ದುರಂತ ಕಾಡುತ್ತದೆ, ಅದನ್ನು ಮರೆಯಬಾರದು: ಹೈಕೋರ್ಟ್

ತನೂರಿನ ದೋಣಿ ದುರಂತ ಬಗ್ಗೆ ಮೇ 12 ರೊಳಗೆ ವರದಿ ಸಲ್ಲಿಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಅದೇ ವೇಳೆ ದೋಣಿ ದುರಂತ ಘಟನೆಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರವನ್ನು ನ್ಯಾಯಾಲಯ ಟೀಕಿಸಿದೆ

Kerala Boat Tragedy: ಕೇರಳದ ಬೋಟ್ ದುರಂತ ಕಾಡುತ್ತದೆ, ಅದನ್ನು ಮರೆಯಬಾರದು: ಹೈಕೋರ್ಟ್
ಕೇರಳ ದೋಣಿ ದುರಂತ
ರಶ್ಮಿ ಕಲ್ಲಕಟ್ಟ
|

Updated on:May 09, 2023 | 12:57 PM

Share

ತಿರುವನಂತಪುರಂ: ಕೇರಳದ (Kerala) ಮಲಪ್ಪುರಂ (Malappuram) ಜಲ್ಲೆಯ ತಾನೂರಿನಲ್ಲಿ (Tanur Boat Tragedy) ಸಂಭವಿಸಿದ ಹೌಸ್ ಬೋಟ್ ದುರಂತ ಕಾಡುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ. ಈ ದುರಂತದಲ್ಲಿ 15 ಮಕ್ಕಳು ಸೇರಿದಂತೆ 22 ಮಂದಿ ಸಾವಿಗೀಡಾಗಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯಲ್ಲಿ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದ ಹೈಕೋರ್ಟ್,ದುರಂತವನ್ನು ಮರೆಯಬಾರದು ಎಂದು ಹೇಳಿದೆ. ಇದೇ ಮೊದಲಲ್ಲ. ಈ ರೀತಿಯ ಘಟನೆ ನಡೆದಾಗಲೆಲ್ಲಾ ಕೆಲವು ತನಿಖೆ ಅಥವಾ ಶಿಫಾರಸುಗಳು ಇರುತ್ತವೆ. ಎಲ್ಲವೂ ಮರೆತುಹೋಗಿದೆ. (ನಂತರ) ಇದು ಮತ್ತೆ ಸಂಭವಿಸುತ್ತದೆ, ಜನರು ಸಾಯುತ್ತಾರೆ, ಆಪರೇಟರ್ ಹೊರತುಪಡಿಸಿ ಬೇರೆ ಯಾರೂ ಜವಾಬ್ದಾರರಲ್ಲವೇ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ನೇತೃತ್ವದ ವಿಭಾಗೀಯ ಪೀಠವು ಪ್ರದೇಶದ ಉಸ್ತುವಾರಿ ಬಂದರು ಅಧಿಕಾರಿಯಿಂದ ವಿವರಗಳನ್ನು ಕೇಳಿದೆ. ಇನ್‌ಲ್ಯಾಂಡ್ ನ್ಯಾವಿಗೇಷನ್‌ನ ಉಸ್ತುವಾರಿ ಯಾರು? ನಮಗೆ ವಿವರಗಳು ತಿಳಿದಿಲ್ಲ. ನಾವು ಕ್ರಮ ಕೈಗೊಳ್ಳಲಿದ್ದೇವೆ ಎಂದು ಪೀಠ ಹೇಳಿದೆ.

ಹಿಂದಿನ ದುರಂತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಾಲಯ, ಕೆಲವು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲೂ ಇದನ್ನು ಮಾಡಲಾಗಿದೆ. ಆದರೆ ಯಾವುದೇ ನಿರ್ವಾಹಕರು ಇದನ್ನೆಲ್ಲಾ ತಾವಾಗಿಯೇ ಮಾಡಲು ಸಾಧ್ಯವಿಲ್ಲ. ಇದೆಲ್ಲವೂ ಉದ್ದೇಶಪೂರ್ವಕವಾಗಿ ಅಥವಾ ಬೇರೆ ರೀತಿಯಲ್ಲಿ ಕೆಲವು ಬೆಂಬಲ ಸ್ವೀಕರಿಸಿ ಮಾಡಲಾಗಿದೆ. ಸಮಸ್ಯೆಯ ಮೂಲ ಯಾವುದು ಎಂಬುದನ್ನು ನಾವು ತಿಳಿಯಬೇಕಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: Kerala boat tragedy: ಬೋಟ್​​ನ ಗಾಜು ಕೈಯಿಂದಲೇ ಒಡೆದು 7 ಜನರನ್ನು ರಕ್ಷಿಸಿದ ರಶೀದ್, ತಾನೂರಿನ ಸ್ಥಳೀಯರೇ ರಿಯಲ್ ಹೀರೋಗಳು

ತನೂರಿನ ದೋಣಿ ದುರಂತ ಬಗ್ಗೆ ಮೇ 12 ರೊಳಗೆ ವರದಿ ಸಲ್ಲಿಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಅದೇ ವೇಳೆ ದೋಣಿ ದುರಂತ ಘಟನೆಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರವನ್ನು ನ್ಯಾಯಾಲಯ ಟೀಕಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Tue, 9 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ