AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಯ ಅಣ್ಣನ ಕೊಂದು, ರೈಲಿಗೆ ತಲೆಕೊಟ್ಟ ಯುವಕ

ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಯುವತಿಯ ಅಣ್ಣನನ್ನು ಕೊಂದು, ತಂದೆಯ ಮೇಲೂ ಹಲ್ಲೆ ನಡೆಸಿ ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಆರೋಪಿ ತೇಜಸ್ ಕೊಲ್ಲಂನ ಉಲಿಯಕೋವಿಲ್ ಪ್ರದೇಶದಲ್ಲಿರುವ ಫಿಬಿನ್ ಮತ್ತು ಆತನ ತಂದೆ ಗೋಮಾಸ್ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.

ಕೇರಳ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಯ ಅಣ್ಣನ ಕೊಂದು, ರೈಲಿಗೆ ತಲೆಕೊಟ್ಟ ಯುವಕ
ಕ್ರೈಂ Image Credit source: Galbally Parker
ನಯನಾ ರಾಜೀವ್
|

Updated on:Mar 18, 2025 | 9:13 AM

Share

ತಿರುವನಂತಪುರಂ, ಮಾರ್ಚ್​ 18: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಯುವತಿಯ ಅಣ್ಣನನ್ನು ಕೊಂದು, ತಂದೆಯ ಮೇಲೂ ಹಲ್ಲೆ ನಡೆಸಿ ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಆರೋಪಿ ತೇಜಸ್ ಕೊಲ್ಲಂನ ಉಲಿಯಕೋವಿಲ್ ಪ್ರದೇಶದಲ್ಲಿರುವ ಫಿಬಿನ್ ಮತ್ತು ಆತನ ತಂದೆ ಗೋಮಾಸ್ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.

ಫಿಬಿನ್ ಮೇಲೆ ಹಲವಾರು ಬಾರಿ ಚಾಕುವಿನಿಂದ ಹಲ್ಲೆ ನಡೆಸಿದ್ದು ಆತ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಗೆ ಓಡಿ ಬಂದಿದ್ದ. ಕೆಲವು ಮೀಟರ್ ದೂರ ಹೋದ ನಂತರ, ಅವರು ಪ್ರಜ್ಞಾಹೀನರಾಗಿ ಬಿದ್ದಿದ್ದಾರೆ. ಸ್ಥಳೀಯರು ಫಿಬಿನ್ ಮತ್ತು ಅವರ ತಂದೆ ಗೋಮಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಫಿಬಿನ್ ಆಸ್ಪತ್ರೆಗೆ ತಲುಪುವ ಮೊದಲೇ ಸಾವನ್ನಪ್ಪಿದರು. ಅವರ ತಂದೆ ಗೋಮಾಸ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದಾದ ನಂತರ, ಆರೋಪಿ ತೇಜಸ್ ಹತ್ತಿರದ ರೈಲ್ವೆ ಹಳಿಗೆ ಹೋಗಿ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ತೇಜಸ್ ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯ ಮಗ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ
Image
ಪ್ರೀತ್ಸೇ...ಪ್ರೀತ್ಸೇ ಎಂದು ಬಾಲಕಿಯನ್ನು ಬಲಿ ಪಡೆದ ಪಾಗಲ್ ಪ್ರೇಮಿ:
Image
ಸ್ನೇಹಿತರಿಂದಲೇ ಗೆಳೆಯನ ಹತ್ಯೆ:ತಲೆ ಮೇಲೆ ಕಲ್ಲೆತ್ತಿ ಹಾಕುವ ದೃಶ್ಯ ಸೆರೆ
Image
ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಪತಿ ಪರಶಿವಮೂರ್ತಿ ಆತ್ಮಹತ್ಯೆ
Image
ಹಣದಲ್ಲಿ ಪಾಲು ಕೊಡದ್ದಕ್ಕೆ ಜೊತೆಗಾರ್ತಿಯನ್ನೇ ಬೆತ್ತಲೆ ಮಾಡಿ ಹಲ್ಲೆ!

ಮತ್ತಷ್ಟು ಓದಿ: ರಾಯಚೂರನ್ನೇ ಬೆಚ್ಚಿಬೀಳಿಸಿದ್ದ ಭೀಕರ ಕೊಲೆ: 31 ಬಾರಿ ಇರಿದು ಕೊಂದವರು ಸಿಕ್ಕಿಬಿದ್ದರು

ಆರೋಪಿ ತೇಜಸ್ ಮತ್ತು ಫಿಬಿನ್ ಸಹೋದರಿ ಒಟ್ಟಿಗೆ ಎಂಜಿನಿಯರಿಂಗ್ ಓದಿದ್ದರು, ನಂತರ ಫಿಬಿನ್ ಸಹೋದರಿ ಬ್ಯಾಂಕ್ ಕೋಚಿಂಗ್ ತೆಗೆದುಕೊಂಡು ಕೋಳಿಕ್ಕೋಡ್‌ನ ಖಾಸಗಿ ಬ್ಯಾಂಕಿನಲ್ಲಿ ಕೆಲಸ ಪಡೆದರು. ಎಂಜಿನಿಯರಿಂಗ್ ಮುಗಿಸಿದ ನಂತರ ಎರಡೂ ಕುಟುಂಬಗಳು ತಮ್ಮ ಮದುವೆಯ ಬಗ್ಗೆ ಮಾತನಾಡಿದರು.

ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಕೊಂಡಿದ್ದವು, ಆದರೆ ಕೆಲವು ದಿನಗಳ ಹಿಂದೆ, ಫಿಬಿನ್‌ನ ಸಹೋದರಿ ತನ್ನ ನಿರ್ಧಾರವನ್ನು ಬದಲಾಯಿಸಿದಳು ಮತ್ತು ತೇಜಸ್‌ನನ್ನು ಮದುವೆಯಾಗುವುದು ತನಗೆ ಇಷ್ಟವಿಲ್ಲವೆಂದು ಹೇಳಿದಳು.

ತೇಜಸ್​ಗೆ ಇದರ ಬಗ್ಗೆ ಚಿಂತೆ ಕಾಡುತ್ತಿತ್ತು, ಇದು ಆತನ ಪೊಲೀಸ್ ತರಬೇತಿ ಮೇಲೂ ಪರಿಣಾಮ ಬೀರಿತ್ತು. ದೈಹಿಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದ. ಖಿನ್ನತೆ ಶುರುವಾಗಿತ್ತು. ತಂದೆ ಆತನಿಗೆ ಕೌನ್ಸೆಲಿಂಗ್ ಮಾಡಿಸಿದರು ಆದರೂ ಯಾವುದೇ ಪ್ರಯೋಜನವಾಗಲಿಲ್ಲ.

ಗೋಮಸ್ ಅವರ ಪತ್ನಿ, ಮಗಳು ತೇಜಸ್ ಅವರನ್ನು ಮದುವೆಯಾಗಲು ಬಯಸದಿದ್ದರೆ, ಅವರ ಮೇಲೆ ಯಾವುದೇ ಒತ್ತಡ ಹೇರುವುದಿಲ್ಲ ಎಂದು ಹೇಳಿದರು.

ಫಿಬಿನ್‌ನ ಸಹೋದರಿ ತೇಜಸ್ ತನಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದಾಳೆ. ಇದಾದ ನಂತರ, ಫಿಬಿನ್ ತೇಜಸ್ ಗೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿದರು. ತೇಜಸ್ ಫಿಬಿನ್ ಮನೆಗೆ ಹೋಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Tue, 18 March 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!