AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ

ಶಬರಿಮಲೆ ಯಾತ್ರೆ ಮಾಡಿ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಮಿನಿ ಬಸ್ ಪಲ್ಟಿಯಾಗಿದ್ದು, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ

ಕೇರಳ: ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ
ಬಸ್ ಅಪಘಾತImage Credit source: Asianet Newsable
Follow us
ನಯನಾ ರಾಜೀವ್
|

Updated on:Nov 19, 2024 | 9:35 AM

ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಯಾತ್ರಿಕರನ್ನು ಹೊತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಪಲ್ಟಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ. ಶಬರಿಮಲೆಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ಕರ್ನಾಟಕದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿದೆ.

ಬಸ್ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಂದಾಜಿಸಲಾಗಿದೆ. ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು. ಸಹ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಕೂಡಲೇ ರಕ್ಷಣಾ ಕಾರ್ಯಗಳನ್ನು ನಡೆಸಿದರು. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಶಬರಿಮಲೆ ಯಾತ್ರಾರ್ಥಿಗಳನ್ನು ಬೇರೆ ರಾಜ್ಯಗಳಿಂದ ಕರೆದೊಯ್ಯುವ ಬಸ್‌ಗಳು ಮತ್ತು ಮಿನಿ ಬಸ್‌ಗಳು ತಾಮರಸ್ಸೆರಿ ಘಾಟ್ ಮೂಲಕ ವೇಗವಾಗಿ ಚಲಿಸುವ ಬಗ್ಗೆ ದೂರುಗಳಿವೆ. ಶಬರಿಮಲೆಗೆ ಗರಿಷ್ಠ ಟ್ರಿಪ್‌ಗಳನ್ನು ಮಾಡಲು, ಬಸ್‌ಗಳು, ಮಿನಿಬಸ್‌ಗಳನ್ನು ಮಕ್ಕಳಿದ್ದರೂ ಕೂಡ ಹೆಚ್ಚಿನ ವೇಗದಲ್ಲಿ ಓಡಿಸಲಾಗುತ್ತದೆ.

ಬೇರೆ ರಾಜ್ಯಗಳ ಚಾಲಕರು ಕೆಲವೊಮ್ಮೆ ಘಾಟ್ ಪ್ರದೇಶದ ಸಂಚಾರ ನಿಯಮಗಳನ್ನು ನಿರ್ಲಕ್ಷಿಸುತ್ತಾರೆ. ಬಸ್ಸಿನಲ್ಲಿ 53 ಮಂದಿ ಪ್ರಯಾಣಿಕರಿದ್ದರು. ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಇಬ್ಬರು ಮಕ್ಕಳು ಸೇರಿದಂತೆ 25 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಸವಾಲಿನ ಸಂಗತಿಯಾಗಿರುವುದರಿಂದ, ಇತರ ರಾಜ್ಯಗಳ ವಾಹನಗಳು ಘಾಟ್ ಮೂಲಕ ಹಾದು ಹೋಗುವಾಗ ಕನಿಷ್ಠ ನಿಯಮಗಳನ್ನು ಪಾಲಿಸುವ ಬಗ್ಗೆ ಬೇಡಿಕೆ ಕೇಳಿಬರುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:34 am, Tue, 19 November 24

ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್