AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Schoking News: 64 ಪ್ರಯಾಣಿಕರನ್ನು ಊಟಕ್ಕೆಂದು ಕೆಳಗಿಳಿಸಿ ಬಹುದೊಡ್ಡ ಶಾಕ್​ ಕೊಟ್ಟ ಕೇರಳ ಖಾಸಗಿ ಬಸ್​ ಡ್ರೈವರ್​; ಪೊಲೀಸರಿಂದ ತನಿಖೆ

ಶುಕ್ರವಾರ ರಾತ್ರಿಯೇ ಘಟನೆ ನಡೆದಿದೆ. ಒಟ್ಟು 64 ಪ್ರಯಾಣಿಕರಲ್ಲಿ 59 ಮಂದಿ ಅಸ್ಸಾಂಗೆ ಹೋಗುವವರು ಆಗಿದ್ದರೆ, 5 ಮಂದಿ ಬಿಹಾರಕ್ಕೆ ಪ್ರಯಾಣ ಮಾಡುವವರಿದ್ದರು. ಭಾನುವಾರದ ಹೊತ್ತಿಗೆ ಅಸ್ಸಾಂ ತಲುಪಬೇಕಿತ್ತು. 

Schoking News: 64 ಪ್ರಯಾಣಿಕರನ್ನು ಊಟಕ್ಕೆಂದು ಕೆಳಗಿಳಿಸಿ ಬಹುದೊಡ್ಡ ಶಾಕ್​ ಕೊಟ್ಟ ಕೇರಳ ಖಾಸಗಿ ಬಸ್​ ಡ್ರೈವರ್​; ಪೊಲೀಸರಿಂದ ತನಿಖೆ
ಬಸ್​​ ಮತ್ತು ಅದರಲ್ಲಿದ್ದ ಪ್ರಯಾಣಿಕರು (ಫೋಟೋ ಕೃಪೆ-ಟಿವಿ 9 ತೆಲುಗು)
TV9 Web
| Edited By: |

Updated on: Nov 06, 2021 | 9:25 AM

Share

ಕೇರಳದಿಂದ ಅಸ್ಸಾಂಗೆ ಹೊರಟಿದ್ದ ಖಾಸಗಿ ಬಸ್​​ನ ಚಾಲಕ ಮತ್ತು ಕ್ಲೀನರ್​ ಸೇರಿ ಪ್ರಯಾಣಿಕರಿಗೆ ಬಹುದೊಡ್ಡ ಶಾಕ್​ ಕೊಟ್ಟಿದ್ದಾರೆ. ಬಹುಶ್ಯಃ ಆ ಪ್ರಯಾಣಿಕರು ಯಾರೂ ಹೀಗೊಂದು ಕೆಟ್ಟ ಸನ್ನಿವೇಶ ಎದುರಾಗಬಹುದು ಎಂದು ನಿರೀಕ್ಷೆ ಮಾಡಿರಲು ಸಾಧ್ಯವೇ ಇಲ್ಲ. ಇದೊಂದು ಕೇರಳ ಮೂಲದ ಖಾಸಗಿ ಬಸ್​ ಆಗಿದ್ದು, 64 ಪ್ರಯಾಣಿಕರನ್ನು ಹೊತ್ತು ಅಸ್ಸಾಂಗೆ ಸಾಗುತ್ತಿತ್ತು. ಹೀಗೆ ಹೋಗುವಾಗ ತೆಲಂಗಾಣದ ನಲ್ಗೊಂಡ ಬಳಿ ಊಟಕ್ಕೆ ಇಳಿದಿದ್ದರು. ಸಹಜವಾಗಿ ಪ್ರಯಾಣಿಕರೆಲ್ಲ ತಮ್ಮ ಲಗೇಜ್​ಗಳನ್ನೆಲ್ಲ ಬಸ್​​ನಲ್ಲೇ ಇಟ್ಟು ಊಟಕ್ಕೆಂದು ಬಸ್​ ಇಳಿದಿದ್ದರು. ಆದರೆ ಅವರೆಲ್ಲ ಇತ್ತ ಊಟ ಮಾಡುತ್ತಿದ್ದರೆ, ಅತ್ತ ಚಾಲಕ ಎಲ್ಲ ಪ್ರಯಾಣಿಕರ ಲಗೇಜ್​, ಬ್ಯಾಗ್​​ಗಳನ್ನೆಲ್ಲ ಕಳವು ಮಾಡಿದ್ದಾನೆ. ಅಂದರೆ ಬಸ್​​ನ್ನು ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಈ ಬ್ಯಾಗ್​​ಗಳಲ್ಲಿ ಪ್ರಯಾಣಿಕರ ಬಟ್ಟೆ, ಹಣ, ಮತ್ತಿತರ ಬೆಲೆಬಾಳುವ ವಸ್ತುಗಳೂ ಇದ್ದವು. 

ಇನ್ನು ನಲ್ಗೊಂಡ ಬಳಿಯ ನರ್ಕತ್​ಪಲ್ಲಿ ಬಳಿ ಬರುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್​ ಇಬ್ಬರೂ ಸೇರಿ ಪ್ರಯಾಣಿಕರ ಬಳಿ, ನೀವೆಲ್ಲ ಇಲ್ಲೇ ಇಳಿದು ಊಟ ಮಾಡುತ್ತಿರಿ. ಬಸ್​ ಯಾಕೋ ಸ್ವಲ್ಪ ಸಮಸ್ಯೆ ಕೊಡುತ್ತಿದೆ. ಇಲ್ಲೇ ಸಮೀಪ ಹೋಗಿ ರಿಪೇರಿ ಮಾಡಿಸಿಕೊಂಡು ಬರುತ್ತೇವೆ ಎಂದಿದ್ದಾರೆ. ಅದನ್ನು ನಂಬಿದ ಜನರು ಕೆಳಗೆ ಇಳಿದು ಹೋಗಿದ್ದರು. ಆದರೆ ಅವರೆಲ್ಲ ಊಟ ಮಾಡಿ ಬಂದು ಕಾದಿದ್ದೇ ಬಂತು. ಆದರೆ ಬಸ್​ ಮಾತ್ರ ವಾಪಸ್​ ಬರಲಿಲ್ಲ.

ಶುಕ್ರವಾರ ರಾತ್ರಿಯೇ ಘಟನೆ ನಡೆದಿದೆ. ಒಟ್ಟು 64 ಪ್ರಯಾಣಿಕರಲ್ಲಿ 59 ಮಂದಿ ಅಸ್ಸಾಂಗೆ ಹೋಗುವವರು ಆಗಿದ್ದರೆ, 5 ಮಂದಿ ಬಿಹಾರಕ್ಕೆ ಪ್ರಯಾಣ ಮಾಡುವವರಿದ್ದರು. ಭಾನುವಾರದ ಹೊತ್ತಿಗೆ ಅಸ್ಸಾಂ ತಲುಪಬೇಕಿತ್ತು.  ನರ್ಕತ್​ಪಲ್ಲಿ ಖಾಸಗಿ ಹೋಟೆಲ್​ವೊಂದರ ಬಳಿ ಡ್ರೈವರ್ ಬಸ್​ ನಿಲ್ಲಿಸಿ ಹೋಗಿದ್ದ. ತುಂಬ ಹೊತ್ತು ಕಾದ ಪ್ರಯಾಣಿಕರು 100ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರೇ ಪ್ರಯಾಣಿಕರಿಗೆ ರಾತ್ರಿ ಊಟ ನೀಡಿದ್ದಾರೆ. ಹಾಗೇ, ಸ್ಥಳೀಯವಾಗಿ ವಾಸವಾಗಿರಲೂ ಅನುವು ಮಾಡಿಕೊಟ್ಟಿದ್ದಾರೆ. ಇನ್ನು ಬಸ್​ನವರು ಪ್ರಯಾಣಿಕರಿಗೆ ನೀಡಿರುವ ಫೋನ್​ ನಂಬರ್​ ಆಧರಿಸಿ ಪೊಲೀಸರು ತನಿಖೆಯನ್ನೂ ಶುರು ಮಾಡಿದ್ದಾರೆ. ತಮ್ಮ ಹಣ, ಬಟ್ಟೆ ಸಿಕ್ಕರೆ ಸಾಕು ಎನ್ನುತ್ತಿದ್ದಾರೆ ಪ್ರಯಾಣಿಕರು.

ಇದನ್ನೂ ಓದಿ: New Play : ‘ಕಾಂತ ಮತ್ತು ಕಾಂತ’ ರಂಗದ ಮೇಲೆ ಮೊಟ್ಟಮೊದಲ ಬಾರಿಗೆ ಒಟ್ಟಿಗೇ ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು