AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Schoking News: 64 ಪ್ರಯಾಣಿಕರನ್ನು ಊಟಕ್ಕೆಂದು ಕೆಳಗಿಳಿಸಿ ಬಹುದೊಡ್ಡ ಶಾಕ್​ ಕೊಟ್ಟ ಕೇರಳ ಖಾಸಗಿ ಬಸ್​ ಡ್ರೈವರ್​; ಪೊಲೀಸರಿಂದ ತನಿಖೆ

ಶುಕ್ರವಾರ ರಾತ್ರಿಯೇ ಘಟನೆ ನಡೆದಿದೆ. ಒಟ್ಟು 64 ಪ್ರಯಾಣಿಕರಲ್ಲಿ 59 ಮಂದಿ ಅಸ್ಸಾಂಗೆ ಹೋಗುವವರು ಆಗಿದ್ದರೆ, 5 ಮಂದಿ ಬಿಹಾರಕ್ಕೆ ಪ್ರಯಾಣ ಮಾಡುವವರಿದ್ದರು. ಭಾನುವಾರದ ಹೊತ್ತಿಗೆ ಅಸ್ಸಾಂ ತಲುಪಬೇಕಿತ್ತು. 

Schoking News: 64 ಪ್ರಯಾಣಿಕರನ್ನು ಊಟಕ್ಕೆಂದು ಕೆಳಗಿಳಿಸಿ ಬಹುದೊಡ್ಡ ಶಾಕ್​ ಕೊಟ್ಟ ಕೇರಳ ಖಾಸಗಿ ಬಸ್​ ಡ್ರೈವರ್​; ಪೊಲೀಸರಿಂದ ತನಿಖೆ
ಬಸ್​​ ಮತ್ತು ಅದರಲ್ಲಿದ್ದ ಪ್ರಯಾಣಿಕರು (ಫೋಟೋ ಕೃಪೆ-ಟಿವಿ 9 ತೆಲುಗು)
TV9 Web
| Edited By: |

Updated on: Nov 06, 2021 | 9:25 AM

Share

ಕೇರಳದಿಂದ ಅಸ್ಸಾಂಗೆ ಹೊರಟಿದ್ದ ಖಾಸಗಿ ಬಸ್​​ನ ಚಾಲಕ ಮತ್ತು ಕ್ಲೀನರ್​ ಸೇರಿ ಪ್ರಯಾಣಿಕರಿಗೆ ಬಹುದೊಡ್ಡ ಶಾಕ್​ ಕೊಟ್ಟಿದ್ದಾರೆ. ಬಹುಶ್ಯಃ ಆ ಪ್ರಯಾಣಿಕರು ಯಾರೂ ಹೀಗೊಂದು ಕೆಟ್ಟ ಸನ್ನಿವೇಶ ಎದುರಾಗಬಹುದು ಎಂದು ನಿರೀಕ್ಷೆ ಮಾಡಿರಲು ಸಾಧ್ಯವೇ ಇಲ್ಲ. ಇದೊಂದು ಕೇರಳ ಮೂಲದ ಖಾಸಗಿ ಬಸ್​ ಆಗಿದ್ದು, 64 ಪ್ರಯಾಣಿಕರನ್ನು ಹೊತ್ತು ಅಸ್ಸಾಂಗೆ ಸಾಗುತ್ತಿತ್ತು. ಹೀಗೆ ಹೋಗುವಾಗ ತೆಲಂಗಾಣದ ನಲ್ಗೊಂಡ ಬಳಿ ಊಟಕ್ಕೆ ಇಳಿದಿದ್ದರು. ಸಹಜವಾಗಿ ಪ್ರಯಾಣಿಕರೆಲ್ಲ ತಮ್ಮ ಲಗೇಜ್​ಗಳನ್ನೆಲ್ಲ ಬಸ್​​ನಲ್ಲೇ ಇಟ್ಟು ಊಟಕ್ಕೆಂದು ಬಸ್​ ಇಳಿದಿದ್ದರು. ಆದರೆ ಅವರೆಲ್ಲ ಇತ್ತ ಊಟ ಮಾಡುತ್ತಿದ್ದರೆ, ಅತ್ತ ಚಾಲಕ ಎಲ್ಲ ಪ್ರಯಾಣಿಕರ ಲಗೇಜ್​, ಬ್ಯಾಗ್​​ಗಳನ್ನೆಲ್ಲ ಕಳವು ಮಾಡಿದ್ದಾನೆ. ಅಂದರೆ ಬಸ್​​ನ್ನು ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಈ ಬ್ಯಾಗ್​​ಗಳಲ್ಲಿ ಪ್ರಯಾಣಿಕರ ಬಟ್ಟೆ, ಹಣ, ಮತ್ತಿತರ ಬೆಲೆಬಾಳುವ ವಸ್ತುಗಳೂ ಇದ್ದವು. 

ಇನ್ನು ನಲ್ಗೊಂಡ ಬಳಿಯ ನರ್ಕತ್​ಪಲ್ಲಿ ಬಳಿ ಬರುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್​ ಇಬ್ಬರೂ ಸೇರಿ ಪ್ರಯಾಣಿಕರ ಬಳಿ, ನೀವೆಲ್ಲ ಇಲ್ಲೇ ಇಳಿದು ಊಟ ಮಾಡುತ್ತಿರಿ. ಬಸ್​ ಯಾಕೋ ಸ್ವಲ್ಪ ಸಮಸ್ಯೆ ಕೊಡುತ್ತಿದೆ. ಇಲ್ಲೇ ಸಮೀಪ ಹೋಗಿ ರಿಪೇರಿ ಮಾಡಿಸಿಕೊಂಡು ಬರುತ್ತೇವೆ ಎಂದಿದ್ದಾರೆ. ಅದನ್ನು ನಂಬಿದ ಜನರು ಕೆಳಗೆ ಇಳಿದು ಹೋಗಿದ್ದರು. ಆದರೆ ಅವರೆಲ್ಲ ಊಟ ಮಾಡಿ ಬಂದು ಕಾದಿದ್ದೇ ಬಂತು. ಆದರೆ ಬಸ್​ ಮಾತ್ರ ವಾಪಸ್​ ಬರಲಿಲ್ಲ.

ಶುಕ್ರವಾರ ರಾತ್ರಿಯೇ ಘಟನೆ ನಡೆದಿದೆ. ಒಟ್ಟು 64 ಪ್ರಯಾಣಿಕರಲ್ಲಿ 59 ಮಂದಿ ಅಸ್ಸಾಂಗೆ ಹೋಗುವವರು ಆಗಿದ್ದರೆ, 5 ಮಂದಿ ಬಿಹಾರಕ್ಕೆ ಪ್ರಯಾಣ ಮಾಡುವವರಿದ್ದರು. ಭಾನುವಾರದ ಹೊತ್ತಿಗೆ ಅಸ್ಸಾಂ ತಲುಪಬೇಕಿತ್ತು.  ನರ್ಕತ್​ಪಲ್ಲಿ ಖಾಸಗಿ ಹೋಟೆಲ್​ವೊಂದರ ಬಳಿ ಡ್ರೈವರ್ ಬಸ್​ ನಿಲ್ಲಿಸಿ ಹೋಗಿದ್ದ. ತುಂಬ ಹೊತ್ತು ಕಾದ ಪ್ರಯಾಣಿಕರು 100ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರೇ ಪ್ರಯಾಣಿಕರಿಗೆ ರಾತ್ರಿ ಊಟ ನೀಡಿದ್ದಾರೆ. ಹಾಗೇ, ಸ್ಥಳೀಯವಾಗಿ ವಾಸವಾಗಿರಲೂ ಅನುವು ಮಾಡಿಕೊಟ್ಟಿದ್ದಾರೆ. ಇನ್ನು ಬಸ್​ನವರು ಪ್ರಯಾಣಿಕರಿಗೆ ನೀಡಿರುವ ಫೋನ್​ ನಂಬರ್​ ಆಧರಿಸಿ ಪೊಲೀಸರು ತನಿಖೆಯನ್ನೂ ಶುರು ಮಾಡಿದ್ದಾರೆ. ತಮ್ಮ ಹಣ, ಬಟ್ಟೆ ಸಿಕ್ಕರೆ ಸಾಕು ಎನ್ನುತ್ತಿದ್ದಾರೆ ಪ್ರಯಾಣಿಕರು.

ಇದನ್ನೂ ಓದಿ: New Play : ‘ಕಾಂತ ಮತ್ತು ಕಾಂತ’ ರಂಗದ ಮೇಲೆ ಮೊಟ್ಟಮೊದಲ ಬಾರಿಗೆ ಒಟ್ಟಿಗೇ ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?