AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪದ ವಿರುದ್ಧ ಕೇರಳ ಸಂಪುಟ ನಿರ್ಣಯ ಅಂಗೀಕಾರ

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಶಿಫಾರಸು ಮಾಡಿತ್ತು. ನಂತರ 100 ದಿನಗಳಲ್ಲಿ ಸಿಂಕ್ರೊನೈಸ್ ಮಾಡಿದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಶಿಫಾರಸು ಮಾಡಿತ್ತು.

ಭಾರತದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾಪದ ವಿರುದ್ಧ ಕೇರಳ ಸಂಪುಟ ನಿರ್ಣಯ ಅಂಗೀಕಾರ
ಪಿಣರಾಯಿ ವಿಜಯನ್
ಸುಷ್ಮಾ ಚಕ್ರೆ
|

Updated on: Oct 10, 2024 | 3:46 PM

Share

ತಿರುವನಂತಪುರಂ: ಭಾರತ ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವುದರ ವಿರುದ್ಧ ಕೇರಳ ವಿಧಾನಸಭೆ ಇಂದು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ. ಈ ನಿರ್ಣಯದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮಿತಿಯು ಶಿಫಾರಸು ಮಾಡಿದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಅಂಗೀಕರಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಸದನವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿತು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಕೇರಳ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ. ರಾಜೇಶ್ ನಿರ್ಣಯ ಮಂಡಿಸಿದರು. ಈ ಪ್ರಸ್ತಾಪವು ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಭಾರತದ ಸಂಸದೀಯ ಪ್ರಜಾಪ್ರಭುತ್ವದ ವೈವಿಧ್ಯಮಯ ಸ್ವರೂಪವನ್ನು ಹಾಳು ಮಾಡುತ್ತದೆ ಎಂದು ಸಚಿವ ರಾಜೇಶ್ ಹೇಳಿದರು.

ಇದನ್ನೂ ಓದಿ: ‘ಹರಿಯಾಣದ ಗೆಲುವು ದೇಶಾದ್ಯಂತ ಪ್ರತಿಧ್ವನಿಸಲಿದೆ’; ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಇದು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳು ಮತ್ತು ಸ್ಥಳೀಯ ಸ್ವಯಂ ಸರ್ಕಾರಗಳ ಅವಧಿಯನ್ನು ಕಡಿತಗೊಳಿಸಲು ಕಾರಣವಾಗುತ್ತದೆ ಎಂದು ರಾಜೇಶ್ ಹೇಳಿದರು. ಈ ನಿರ್ಧಾರವು ಜನರ ಆದೇಶದ ಉಲ್ಲಂಘನೆಯಾಗಿದೆ. ಅದು ಪ್ರಜಾಪ್ರಭುತ್ವ ಹಕ್ಕುಗಳಿಗೆ ಸವಾಲು, ಚುನಾವಣೆ ನಡೆಸಲು ಮತ್ತು ದೇಶದ ಒಕ್ಕೂಟ ವ್ಯವಸ್ಥೆಯನ್ನು ತೆಗೆದುಕೊಳ್ಳುವ ರಾಜ್ಯದ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ರಾಜೇಶ್ ಹೇಳಿದರು.

ಈ ಸಮಿತಿಯು ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ವೆಚ್ಚವಾಗಿ ನೋಡುತ್ತಿದೆ. ಹಾಗೆ ಮಾಡುವುದು “ಪ್ರಜಾಪ್ರಭುತ್ವ ವಿರೋಧಿ” ಎಂದು ಅವರು ಪ್ರತಿಪಾದಿಸಿದರು. ಚುನಾವಣಾ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಆಡಳಿತವನ್ನು ಪರಿಣಾಮಕಾರಿಯಾಗಿ ಮಾಡಲು ಇತರ ಸರಳ ಮಾರ್ಗಗಳಿರುವುದರಿಂದ ಇದು “ಖಂಡನೀಯ ಕ್ರಮ” ಎಂದು ಕೇರಳ ಸಚಿವ ರಾಜೇಶ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಅತ್ಯಂತ ಒಳ್ಳೆ ಮನುಷ್ಯ; “ಗೆಳೆಯ”ನನ್ನು ಹೊಗಳಿದ ಡೊನಾಲ್ಡ್ ಟ್ರಂಪ್

“ಈ ಕ್ರಮವು ಅಸಂವಿಧಾನಿಕ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿ ಅಜೆಂಡಾವನ್ನು ಜಾರಿಗೊಳಿಸುವ ಪ್ರಯತ್ನವಾಗಿದೆ” ಎಂದು ರಾಜೇಶ್ ಪ್ರತಿಪಾದಿಸಿದ್ದಾರೆ. ಈ ನಿರ್ಣಯದಲ್ಲಿ ಯುಡಿಎಫ್ ಶಾಸಕರು ಸೂಚಿಸಿದ ಕೆಲವು ತಿದ್ದುಪಡಿಗಳನ್ನು ಸಚಿವರು ಒಪ್ಪಿಕೊಂಡರು. ಇದಾದ ನಂತರ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ