AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ರಾಜಕೀಯ ನಾಯಕರ ಹತ್ಯೆ ಖಂಡಿಸಿದ ಸಿಎಂ ಪಿಣರಾಯಿ ವಿಜಯನ್​; 2 ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪ

ಇಬ್ಬರು ನಾಯಕರ ಹತ್ಯೆ ಬೆನ್ನಲ್ಲೇ ಬಿಜೆಪಿ ಮತ್ತು ಎಸ್​ಡಿಪಿಐ ಪಕ್ಷಗಳ ನಾಯಕರು ಪರಸ್ಪರರ ಮೇಲೆ ಆರೋಪ ಹೊರೆಸುತ್ತಿದ್ದಾರೆ.  ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್​ರನ್ನು ಹತ್ಯೆ ಮಾಡಿದ್ದು, ರಾಷ್ಟ್ರೀಯ ಸ್ವಯಂ ಸೇವಕ (RSS)ದ ಕಾರ್ಯಕರ್ತರು ಎಂದು ಆರೋಪಿಸಿದೆ.

ಕೇರಳದಲ್ಲಿ ರಾಜಕೀಯ ನಾಯಕರ ಹತ್ಯೆ ಖಂಡಿಸಿದ ಸಿಎಂ ಪಿಣರಾಯಿ ವಿಜಯನ್​; 2 ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪ
ಪಿಣರಾಯಿ ವಿಜಯನ್
TV9 Web
| Edited By: |

Updated on:Dec 19, 2021 | 3:10 PM

Share

ಕೇರಳದಲ್ಲಿ 24 ಗಂಟೆಯಲ್ಲಿ ಇಬ್ಬರು ರಾಜಕೀಯ ಮುಖಂಡರ ಹತ್ಯೆ ನಡೆದಿದ್ದನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ( Kerala Chief Minister Pinarayi Vijayan)​ ಖಂಡಿಸಿದ್ದಾರೆ. ಶನಿವಾರ ಸೋಷಿಯಲ್​ ಡೆಮಾಕ್ರಟಿಕ್​ ಪಕ್ಷ (SDPI)ದ ನಾಯಕ ಕೆ.ಎಸ್​.ಶಾನ್​ ಅವರನ್ನು ಕೊಲೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಅಲಪ್ಪುಳದ ಬಿಜೆಪಿ ನಾಯಕ ರಂಜಿತ್​ ಶ್ರೀನಿವಾಸ್​ ಹತ್ಯೆಗೀಡಾಗಿದ್ದಾರೆ. ಈ ಎರಡೂ ನಾಯಕರ ಹತ್ಯೆಯ ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ. ಕೃತ್ಯದ ಹಿಂದೆ ಯಾರಿದ್ದಾರೆ ಎಂದು ಪತ್ತೆಹಚ್ಚಿ, ರಾಜ್ಯಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪಿಣರಾಯಿ ವಿಜಯನ್​ ಹೇಳಿದ್ದಾರೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂಥ ಸಂಕುಚಿತ ಮನೋಭಾವ ಮತ್ತು ಅಮಾನವೀಯ ಕೃತ್ಯ ಎಸಗುವ ಜನರು ರಾಜ್ಯಕ್ಕೆ ಮಾರಕ. ಕೊಲೆ ಮಾಡುವವರ ಗುಂಪು, ದ್ವೇಷ ಸಾಧಿಸುವವರ ಗುಂಪುಗಳನ್ನೆಲ್ಲ ನಾಗರಿಕ ಸಮಾಜದಿಂದ ಬಹಿಷ್ಕರಿಸಿ, ದೂರವೇ ಇಡಬೇಕು ಎಂದಿದ್ದಾರೆ.  

ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್ ಅವರು ಆ ಪಕ್ಷದ ರಾಜ್ಯಕಾರ್ಯದರ್ಶಿಯಾಗಿದ್ದರು. ಇವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್​ ಹಲ್ಲೆ ಮಾಡಿತ್ತು. ಅದಾದ ಬೆನ್ನಲ್ಲೇ ಬಿಜೆಪಿಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ರಂಜಿತ್​ ಶ್ರೀನಿವಾಸ್​ರನ್ನು ಆಲಪ್ಪುಳಂನ ಅವರ ಮನೆಯ ಸಮೀಪವೇ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಸದ್ಯ ಆಲಪ್ಪುಳ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸೆಕ್ಷನ್​ 144 ಹೇರಲಾಗಿದೆ.

ಈಗ ಪರಸ್ಪರರ ಮೇಲೆ ಆರೋಪ ಇಬ್ಬರು ನಾಯಕರ ಹತ್ಯೆ ಬೆನ್ನಲ್ಲೇ ಬಿಜೆಪಿ ಮತ್ತು ಎಸ್​ಡಿಪಿಐ ಪಕ್ಷಗಳ ನಾಯಕರು ಪರಸ್ಪರರ ಮೇಲೆ ಆರೋಪ ಹೊರೆಸುತ್ತಿದ್ದಾರೆ.  ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್​ರನ್ನು ಹತ್ಯೆ ಮಾಡಿದ್ದು, ರಾಷ್ಟ್ರೀಯ ಸ್ವಯಂ ಸೇವಕ (RSS)ದ ಕಾರ್ಯಕರ್ತರು. ಈ ಆರ್​ಎಸ್​ಎಸ್​ ಎಂಬುದು ಬಿಜೆಪಿ ಪೋಷಕ ಸಂಸ್ಥೆ ಎಂದು ಹೇಳಿದ್ದಾರೆ.  ಇನ್ನು ಬಿಜೆಪಿ ನಾಯಕ ರಂಜಿತ್​ ಶ್ರೀನಿವಾಸ್​ ಹತ್ಯೆ ಮಾಡಿದ್ದು, ನಿಷೇಧಿತ ಪಿಎಫ್​ಐ ಸಂಘಟನೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್​ ಆರೋಪಿಸಿದ್ದಾರೆ. ಅಂದಹಾಗೆ ಈ ಪಿಎಫ್​ಐ ಎಂಬುದು ಎಸ್​ಡಿಪಿಐನ ಮೂಲ ಸಂಘಟನೆಯಾಗಿದೆ.

ಇದನ್ನೂ ಓದಿ: Smartphone Tips: ನಿಮಗೆ ಸ್ಮಾರ್ಟ್​ಫೋನ್​ನಲ್ಲಿ ಸ್ಕ್ರೀನ್ ರೆಕಾರ್ಡ್ ಮಾಡುವ ಟ್ರಿಕ್ ಗೊತ್ತೇ?: ಇಲ್ಲಿದೆ ನೋಡಿ

Published On - 3:08 pm, Sun, 19 December 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ