AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ರಾಜಕೀಯ ನಾಯಕರ ಹತ್ಯೆ ಖಂಡಿಸಿದ ಸಿಎಂ ಪಿಣರಾಯಿ ವಿಜಯನ್​; 2 ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪ

ಇಬ್ಬರು ನಾಯಕರ ಹತ್ಯೆ ಬೆನ್ನಲ್ಲೇ ಬಿಜೆಪಿ ಮತ್ತು ಎಸ್​ಡಿಪಿಐ ಪಕ್ಷಗಳ ನಾಯಕರು ಪರಸ್ಪರರ ಮೇಲೆ ಆರೋಪ ಹೊರೆಸುತ್ತಿದ್ದಾರೆ.  ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್​ರನ್ನು ಹತ್ಯೆ ಮಾಡಿದ್ದು, ರಾಷ್ಟ್ರೀಯ ಸ್ವಯಂ ಸೇವಕ (RSS)ದ ಕಾರ್ಯಕರ್ತರು ಎಂದು ಆರೋಪಿಸಿದೆ.

ಕೇರಳದಲ್ಲಿ ರಾಜಕೀಯ ನಾಯಕರ ಹತ್ಯೆ ಖಂಡಿಸಿದ ಸಿಎಂ ಪಿಣರಾಯಿ ವಿಜಯನ್​; 2 ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪ
ಪಿಣರಾಯಿ ವಿಜಯನ್
TV9 Web
| Updated By: Lakshmi Hegde|

Updated on:Dec 19, 2021 | 3:10 PM

Share

ಕೇರಳದಲ್ಲಿ 24 ಗಂಟೆಯಲ್ಲಿ ಇಬ್ಬರು ರಾಜಕೀಯ ಮುಖಂಡರ ಹತ್ಯೆ ನಡೆದಿದ್ದನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ( Kerala Chief Minister Pinarayi Vijayan)​ ಖಂಡಿಸಿದ್ದಾರೆ. ಶನಿವಾರ ಸೋಷಿಯಲ್​ ಡೆಮಾಕ್ರಟಿಕ್​ ಪಕ್ಷ (SDPI)ದ ನಾಯಕ ಕೆ.ಎಸ್​.ಶಾನ್​ ಅವರನ್ನು ಕೊಲೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಅಲಪ್ಪುಳದ ಬಿಜೆಪಿ ನಾಯಕ ರಂಜಿತ್​ ಶ್ರೀನಿವಾಸ್​ ಹತ್ಯೆಗೀಡಾಗಿದ್ದಾರೆ. ಈ ಎರಡೂ ನಾಯಕರ ಹತ್ಯೆಯ ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ. ಕೃತ್ಯದ ಹಿಂದೆ ಯಾರಿದ್ದಾರೆ ಎಂದು ಪತ್ತೆಹಚ್ಚಿ, ರಾಜ್ಯಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪಿಣರಾಯಿ ವಿಜಯನ್​ ಹೇಳಿದ್ದಾರೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂಥ ಸಂಕುಚಿತ ಮನೋಭಾವ ಮತ್ತು ಅಮಾನವೀಯ ಕೃತ್ಯ ಎಸಗುವ ಜನರು ರಾಜ್ಯಕ್ಕೆ ಮಾರಕ. ಕೊಲೆ ಮಾಡುವವರ ಗುಂಪು, ದ್ವೇಷ ಸಾಧಿಸುವವರ ಗುಂಪುಗಳನ್ನೆಲ್ಲ ನಾಗರಿಕ ಸಮಾಜದಿಂದ ಬಹಿಷ್ಕರಿಸಿ, ದೂರವೇ ಇಡಬೇಕು ಎಂದಿದ್ದಾರೆ.  

ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್ ಅವರು ಆ ಪಕ್ಷದ ರಾಜ್ಯಕಾರ್ಯದರ್ಶಿಯಾಗಿದ್ದರು. ಇವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್​ ಹಲ್ಲೆ ಮಾಡಿತ್ತು. ಅದಾದ ಬೆನ್ನಲ್ಲೇ ಬಿಜೆಪಿಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ರಂಜಿತ್​ ಶ್ರೀನಿವಾಸ್​ರನ್ನು ಆಲಪ್ಪುಳಂನ ಅವರ ಮನೆಯ ಸಮೀಪವೇ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಸದ್ಯ ಆಲಪ್ಪುಳ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸೆಕ್ಷನ್​ 144 ಹೇರಲಾಗಿದೆ.

ಈಗ ಪರಸ್ಪರರ ಮೇಲೆ ಆರೋಪ ಇಬ್ಬರು ನಾಯಕರ ಹತ್ಯೆ ಬೆನ್ನಲ್ಲೇ ಬಿಜೆಪಿ ಮತ್ತು ಎಸ್​ಡಿಪಿಐ ಪಕ್ಷಗಳ ನಾಯಕರು ಪರಸ್ಪರರ ಮೇಲೆ ಆರೋಪ ಹೊರೆಸುತ್ತಿದ್ದಾರೆ.  ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್​ರನ್ನು ಹತ್ಯೆ ಮಾಡಿದ್ದು, ರಾಷ್ಟ್ರೀಯ ಸ್ವಯಂ ಸೇವಕ (RSS)ದ ಕಾರ್ಯಕರ್ತರು. ಈ ಆರ್​ಎಸ್​ಎಸ್​ ಎಂಬುದು ಬಿಜೆಪಿ ಪೋಷಕ ಸಂಸ್ಥೆ ಎಂದು ಹೇಳಿದ್ದಾರೆ.  ಇನ್ನು ಬಿಜೆಪಿ ನಾಯಕ ರಂಜಿತ್​ ಶ್ರೀನಿವಾಸ್​ ಹತ್ಯೆ ಮಾಡಿದ್ದು, ನಿಷೇಧಿತ ಪಿಎಫ್​ಐ ಸಂಘಟನೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್​ ಆರೋಪಿಸಿದ್ದಾರೆ. ಅಂದಹಾಗೆ ಈ ಪಿಎಫ್​ಐ ಎಂಬುದು ಎಸ್​ಡಿಪಿಐನ ಮೂಲ ಸಂಘಟನೆಯಾಗಿದೆ.

ಇದನ್ನೂ ಓದಿ: Smartphone Tips: ನಿಮಗೆ ಸ್ಮಾರ್ಟ್​ಫೋನ್​ನಲ್ಲಿ ಸ್ಕ್ರೀನ್ ರೆಕಾರ್ಡ್ ಮಾಡುವ ಟ್ರಿಕ್ ಗೊತ್ತೇ?: ಇಲ್ಲಿದೆ ನೋಡಿ

Published On - 3:08 pm, Sun, 19 December 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!