AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಗಾಜಾದಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐಎಂ ಧರಣಿ, ಪಿಣರಾಯಿ ವಿಜಯನ್ ಭಾಗಿ

ಇಸ್ರೇಲ್​ಗೆ ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ನಾಯಕರು ದೆಹಲಿಯಲ್ಲಿ ಧರಣಿ ನಡೆಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸೀತಾರಾಮ್ ಯಚೂರಿ ಸೇರಿದಂತೆ ಹಲವು ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು

ದೆಹಲಿ: ಗಾಜಾದಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐಎಂ ಧರಣಿ, ಪಿಣರಾಯಿ ವಿಜಯನ್ ಭಾಗಿ
ಪಿಣರಾಯಿ ವಿಜಯನ್Image Credit source: ABP Live
Follow us
ನಯನಾ ರಾಜೀವ್
|

Updated on: Oct 29, 2023 | 1:43 PM

ಇಸ್ರೇಲ್​ಗೆ ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ನಾಯಕರು ದೆಹಲಿಯಲ್ಲಿ ಧರಣಿ ನಡೆಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸೀತಾರಾಮ್ ಯಚೂರಿ ಸೇರಿದಂತೆ ಹಲವು ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಮಧ್ಯಾಹ್ನ 12 ಗಂಟೆಗೆ ದೆಹಲಿಯ ಎಕೆಜಿ ಭವನದ ಮುಂದೆ ಧರಣಿ ಆರಂಭವಾಯಿತು, ಗಾಜಾದಲ್ಲಿ ಇಸ್ರೇಲ್​ ನಡೆಸುತ್ತಿರುವ ನರಮೇಧದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇದಾಗಿದೆ. ಸಿಪಿಎಂ ರಾಜ್ಯ ಕಾಯದರ್ಶಿ ಗಾಜಾದ ಮೇಲಿನ ಇಸ್ರೇಲ್​ ಆಕ್ರಮಣದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಇಲ್ಲಿ ಪಕ್ಷದ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯೆಚೂರಿ, ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮಾಡುತ್ತಿರುವ ಅನಾಗರಿಕ ವರ್ತನೆಗೆ ತಕ್ಷಣ ಅಂತ್ಯ ಹಾಡಬೇಕು. ನಡೆಯುತ್ತಿರುವ ಸಂಘರ್ಷದಲ್ಲಿ ಇದುವರೆಗೆ 8,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಆದರೆ ಅವಶೇಷಗಳಡಿಯಲ್ಲಿ ಎಷ್ಟು ಶವಗಳಿವೆ ಎಂಬುದರ ಕುರಿತು ಯಾವುದೇ ಸುಳಿವು ಇಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ನುಡಿದಂತೆ ನಡೆದ ಇಸ್ರೇಲ್​​​: ಹಮಾಸ್​​​​ ಸುರಂಗದ ಮೇಲೆ ದಾಳಿ, 150 ಉಗ್ರರ ಹತ್ಯೆ

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿದ್ದರು. ಅದಾದ ಬಳಿಕ ಇಸ್ರೇಲ್ ಇದರ ಪ್ರತಿಯಾಗಿ ಗಾಜಾ ಮೇಲೆ ದಾಳಿ ನಡೆಸುತ್ತಿದೆ, ಅಷ್ಟೇ ಅಲ್ಲದೆ ಗಾಜಾದಿಂದ ನಾಗರಿಕರನ್ನು ತೆರಳುವಂತೆ ಸಲಹೆ ನೀಡಿತ್ತು, ಅಲ್ಲೇ ಉಳಿದುಕೊಂಡವರನ್ನು ಉಗ್ರರೆಂದು ಪರಿಗಣಿಸುವುದಾಗಿ ಎಚ್ಚರಿಕೆ ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ