ದೆಹಲಿ: ಗಾಜಾದಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐಎಂ ಧರಣಿ, ಪಿಣರಾಯಿ ವಿಜಯನ್ ಭಾಗಿ

ಇಸ್ರೇಲ್​ಗೆ ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ನಾಯಕರು ದೆಹಲಿಯಲ್ಲಿ ಧರಣಿ ನಡೆಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸೀತಾರಾಮ್ ಯಚೂರಿ ಸೇರಿದಂತೆ ಹಲವು ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು

ದೆಹಲಿ: ಗಾಜಾದಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐಎಂ ಧರಣಿ, ಪಿಣರಾಯಿ ವಿಜಯನ್ ಭಾಗಿ
ಪಿಣರಾಯಿ ವಿಜಯನ್
Image Credit source: ABP Live

Updated on: Oct 29, 2023 | 1:43 PM

ಇಸ್ರೇಲ್​ಗೆ ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ನಾಯಕರು ದೆಹಲಿಯಲ್ಲಿ ಧರಣಿ ನಡೆಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸೀತಾರಾಮ್ ಯಚೂರಿ ಸೇರಿದಂತೆ ಹಲವು ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಮಧ್ಯಾಹ್ನ 12 ಗಂಟೆಗೆ ದೆಹಲಿಯ ಎಕೆಜಿ ಭವನದ ಮುಂದೆ ಧರಣಿ ಆರಂಭವಾಯಿತು, ಗಾಜಾದಲ್ಲಿ ಇಸ್ರೇಲ್​ ನಡೆಸುತ್ತಿರುವ ನರಮೇಧದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇದಾಗಿದೆ. ಸಿಪಿಎಂ ರಾಜ್ಯ ಕಾಯದರ್ಶಿ ಗಾಜಾದ ಮೇಲಿನ ಇಸ್ರೇಲ್​ ಆಕ್ರಮಣದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಇಲ್ಲಿ ಪಕ್ಷದ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯೆಚೂರಿ, ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮಾಡುತ್ತಿರುವ ಅನಾಗರಿಕ ವರ್ತನೆಗೆ ತಕ್ಷಣ ಅಂತ್ಯ ಹಾಡಬೇಕು. ನಡೆಯುತ್ತಿರುವ ಸಂಘರ್ಷದಲ್ಲಿ ಇದುವರೆಗೆ 8,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಆದರೆ ಅವಶೇಷಗಳಡಿಯಲ್ಲಿ ಎಷ್ಟು ಶವಗಳಿವೆ ಎಂಬುದರ ಕುರಿತು ಯಾವುದೇ ಸುಳಿವು ಇಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ನುಡಿದಂತೆ ನಡೆದ ಇಸ್ರೇಲ್​​​: ಹಮಾಸ್​​​​ ಸುರಂಗದ ಮೇಲೆ ದಾಳಿ, 150 ಉಗ್ರರ ಹತ್ಯೆ

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿದ್ದರು. ಅದಾದ ಬಳಿಕ ಇಸ್ರೇಲ್ ಇದರ ಪ್ರತಿಯಾಗಿ ಗಾಜಾ ಮೇಲೆ ದಾಳಿ ನಡೆಸುತ್ತಿದೆ, ಅಷ್ಟೇ ಅಲ್ಲದೆ ಗಾಜಾದಿಂದ ನಾಗರಿಕರನ್ನು ತೆರಳುವಂತೆ ಸಲಹೆ ನೀಡಿತ್ತು, ಅಲ್ಲೇ ಉಳಿದುಕೊಂಡವರನ್ನು ಉಗ್ರರೆಂದು ಪರಿಗಣಿಸುವುದಾಗಿ ಎಚ್ಚರಿಕೆ ನೀಡಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us