AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರನ್ನು ಭೇಟಿಯಾದ ಕೇರಳ ಸಿಎಂ ಪಿಣರಾಯಿ ವಿಜಯನ್

Pinarayi Vijayan meets Narendra Modi ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಹಲವು ವಿಷಯಗಳನ್ನು ಚರ್ಚಿಸಿದ್ದಾರೆ.

ಪ್ರಧಾನಿ ಮೋದಿಯವರನ್ನು ಭೇಟಿಯಾದ ಕೇರಳ ಸಿಎಂ ಪಿಣರಾಯಿ ವಿಜಯನ್
ಮೋದಿಯವರನ್ನು ಭೇಟಿ ಮಾಡಿದ ಪಿಣರಾಯಿ ವಿಜಯನ್ Image Credit source: CMO Kerala
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Dec 27, 2022 | 2:31 PM

Share

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಇಂದು (ಮಂಗಳವಾರ) ದೆಹಲಿಯಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಕೇರಳದ ಅರಣ್ಯ ಪ್ರದೇಶಗಳಿಗೆ ಸಮೀಪವಿರುವ ಪ್ರದೇಶಗಳ ರೈತರು ಮತ್ತು ನಿವಾಸಿಗಳು ಆ ಸ್ಥಳಗಳಲ್ಲಿ ಒಂದು ಕಿಲೋಮೀಟರ್ ಪರಿಸರ ಸೂಕ್ಷ್ಮ ವಲಯಗಳನ್ನು (ESZ) ಜಾರಿಗೊಳಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಿಣರಾಯಿ ಮತ್ತು ಮೋದಿ ನಡುವಿನ ಈ ಭೇಟಿ ನಡೆದಿದೆ. ಕೇರಳ ಮುಖ್ಯಮಂತ್ರಿ ಕಚೇರಿಯು ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದು, ಇತರ ಯಾವುದೇ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಭೆಯಲ್ಲಿ ಇಎಸ್‌ಜೆಡ್ ಸಮಸ್ಯೆ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಸೋಮವಾರ ಅಧಿಕೃತ ಮೂಲವೊಂದು ತಿಳಿಸಿತ್ತು.

ಅದಲ್ಲದೆ, ಉತ್ತರದ ಕಾಸರಗೋಡಿನಿಂದ ದಕ್ಷಿಣದ ತಿರುವನಂತಪುರಕ್ಕೆ ಸಂಪರ್ಕ ಕಲ್ಪಿಸುವ ಸಿಲ್ವರ್‌ಲೈನ್, ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯುವಲ್ಲಿ ವಿಳಂಬ ಮತ್ತು ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ರಾಜ್ಯದಲ್ಲಿನ  ಆರ್ಥಿಕ ಬಿಕ್ಕಟ್ಟು ಬಗ್ಗೆಯೂ ಇಲ್ಲಿ  ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇಂದು ದೆಹಲಿಯಲ್ಲಿ ನಡೆಯುತ್ತಿರುವ ಸಿಪಿಎಂ ಪಾಲಿಟ್ ಬ್ಯೂರೋ ಸಭೆಯಲ್ಲಿ ಪಾಲ್ಗೊಳ್ಳಲು ಕೇರಳ ಮುಖ್ಯಮಂತ್ರಿ ರಾಜಧಾನಿಗೆ ಬಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Tue, 27 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ