AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಪಿಣರಾಯಿ ವಿಜಯನ್

ಅಂತರ್ಜಾತಿ ವಿವಾಹವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಯುವಕ-ಯುವತಿ ಒಬ್ಬರನ್ನೊಬ್ಬರು ಇಷ್ಟಪಟ್ಟು ಮದುವೆಯಾಗಲು ನಿರ್ಧರಿಸಿದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಈ ಸಮಯದಲ್ಲಿ ಯಾವುದೇ ಜಾತಿ ಅಥವಾ ಧರ್ಮ ಅಡ್ಡಿಯಾಗುವುದಿಲ್ಲ ಎಂದಿರುವ ಅವರು ಇದನ್ನು ಬದಲಾವಣೆಯ ಭಾಗ ಎಂದು ಕರೆದಿದ್ದಾರೆ.

ಅಂತರ್ಜಾತಿ ವಿವಾಹ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್Image Credit source: The Economic Times
ನಯನಾ ರಾಜೀವ್
|

Updated on: Dec 08, 2023 | 10:57 AM

Share

ಅಂತರ್ಜಾತಿ ವಿವಾಹ(Inter-Caste Marriage) ವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಯುವಕ-ಯುವತಿ ಒಬ್ಬರನ್ನೊಬ್ಬರು ಇಷ್ಟಪಟ್ಟು ಮದುವೆಯಾಗಲು ನಿರ್ಧರಿಸಿದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಈ ಸಮಯದಲ್ಲಿ ಯಾವುದೇ ಜಾತಿ ಅಥವಾ ಧರ್ಮ ಅಡ್ಡಿಯಾಗುವುದಿಲ್ಲ ಎಂದಿರುವ ಅವರು ಇದನ್ನು ಬದಲಾವಣೆಯ ಭಾಗ ಎಂದು ಕರೆದಿದ್ದಾರೆ.

ಇಂತಹ ಮದುವೆಗಳಿಗೆ ಮೊದಲಿನಿಂದಲೂ ವಿರೋಧವಿದೆ, ಕೆಲವೊಮ್ಮೆ ಒಂದು ಕಡೆಯವರು ಮಾತ್ರ ವಿರೋಧಿಸುತ್ತಾರೆ, ಕೆಲವೊಮ್ಮೆ ಎರಡೂ ಕಡೆಯಿಂದಲೂ ವಿರೋಧವಿರುತ್ತದೆ. ಆದರೆ ಅಂತಹ ಮದುವೆಗಳು ನಿಂತಿಲ್ಲ. ಮುಸ್ಲಿಂ ಮುಖಂಡರೊಬ್ಬರು ತಮ್ಮ ಪಕ್ಷದ ಮೇಲೆ ಮಾಡಿರುವ ಆರೋಪದ ಕುರಿತು ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಉತ್ತರಿಸಿದರು.

ಸುನ್ನಿ ಯುವಜನ ಸಂಘದ ಕಾರ್ಯದರ್ಶಿ ನಾಸರ್ ಫೈಝಿ ಬುಧವಾರ ಈ ಆರೋಪ ಮಾಡಿದ್ದರು. ಆರೋಪಗಳ ಪ್ರಕಾರ, ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯದ ಎಡ ಸಮ್ಮಿಶ್ರ ಸರ್ಕಾರವು ಅಂತರ್ ಧರ್ಮೀಯ ವಿವಾಹಗಳನ್ನು ಉತ್ತೇಜಿಸುತ್ತಿದೆ. ಇದಕ್ಕೆ ನಾಸರ್ ಫೈಝಿ ಎಡಪಕ್ಷಕ್ಕೆ ಸಂಬಂಧಿಸಿದ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳನ್ನು ದೂರಿದ್ದರು. ಪಕ್ಷದ ಮೇಲಿನ ಈ ಆರೋಪ ನಿರಾಧಾರ ಎಂದು ಮುಖ್ಯಮಂತ್ರಿ ವಿಜಯನ್ ಹೇಳಿದ್ದಾರೆ.

ಮತ್ತಷ್ಟು ಓದಿ: ಚಾಮರಾಜನಗರ: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ದಂಪತಿಗೆ 6 ಲಕ್ಷ ದಂಡ, ಗ್ರಾಮದಿಂದ ಬಹಿಷ್ಕಾರ ಶಿಕ್ಷೆ; ದೂರು ದಾಖಲು

ಕೋಳಿಕ್ಕೋಡ್ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಾಸರ್ ಫೈಝಿ ಎಡ ಸಮ್ಮಿಶ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಎಡ ಸರ್ಕಾರದ ಜಾತ್ಯತೀತತೆ ಭ್ರಮೆಯಾಗಿದ್ದು, ಜಾತ್ಯತೀತತೆಯ ಹೆಸರಿನಲ್ಲಿ ಸಿಪಿಎಂ ಮುಸ್ಲಿಮರಿಗೆ ಏನು ಮಾಡುತ್ತಿದ್ದರೂ ಅದನ್ನು ಎಚ್ಚರಿಕೆಯಿಂದ ನೋಡಬೇಕು ಎಂದು ನಾಸರ್ ಹೇಳಿದ್ದರು.

ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐ ಅಥವಾ ಯುವ ಸಂಘಟನೆ ಡಿವೈಎಫ್‌ಐ ಆಗಲಿ ಇದನ್ನು ಮಾಡುತ್ತಿಲ್ಲ ಎಂದು ವಿಜಯನ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪ್ರಕಾರ, ಈ ವಿದ್ಯಾರ್ಥಿ ಸಂಘಟನೆಗಳು ಅಂತರ್ಜಾತಿ ವಿವಾಹದ ಬ್ಯೂರೋ ಆಗಿ ಕೆಲಸ ಮಾಡುತ್ತಿಲ್ಲ. ಇದು ಸಮಯದೊಂದಿಗೆ ನಡೆಯುತ್ತಿರುವ ಬದಲಾವಣೆಯ ಸೂಚಕವಾಗಿದೆ ಮತ್ತು ಸರ್ಕಾರ ಅಥವಾ ಸಂಸ್ಥೆಗಳು ಅಂತಹ ಯಾವುದೇ ಬದಲಾವಣೆಗಾಗಿ ಕೆಲಸ ಮಾಡುತ್ತಿಲ್ಲ. ಅಂತಹ ಬದಲಾವಣೆಗಳನ್ನು ನಿಲ್ಲಿಸುತ್ತಾರೆ ಎಂದು ಯಾರಾದರೂ ಭಾವಿಸಿದರೆ ಅದು ತಪ್ಪಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!